ಬೊಂಗಾಂವ್ನಲ್ಲಿ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಪಶ್ಚಿಮ ಬಂಗಾಳದ ಪರಿಸ್ಥಿತಿ ಬಿಜೆಪಿ ಆಡಳಿತ ನಡೆಸುತ್ತಿರುವ ಇತರ ರಾಜ್ಯಗಳಂತಿಲ್ಲ ಎಂಬುದನ್ನು ಮೋದಿ ಅವರು ನೆನಪಿನಲ್ಲಿಟ್ಟುಕೊಳ್ಳಬೇಕು’ ಎಂದು ಹೇಳಿದರು.
‘ನಮ್ಮ ತಾಯಂದಿರು ಮತ್ತು ಸಹೋದರಿಯರ ಆತ್ಮ ಗೌರವದೊಂದಿಗೆ ಆಟವಾಡುವ ಮೂಲಕ ರಾಜಕೀಯ ಪಿತೂರಿ ನಡೆಸಬೇಡಿ. ನಮ್ಮ ಮಹಿಳೆಯರನ್ನು ಮುಟ್ಟಬೇಡಿ. ಇದು ನಿಮ್ಮ ಉತ್ತರ ಪ್ರದೇಶ, ಮಧ್ಯಪ್ರದೇಶ ರಾಜ್ಯಗಳಲ್ಲ. ಬಂಗಾಳದಲ್ಲಿನ ಮಹಿಳೆಯರು ಗೌರವ ಮತ್ತು ಘನತೆಯೊಂದಿಗೆ ಬದುಕುತ್ತಿದ್ದಾರೆ’ ಎಂದು ತಿಳಿಸಿದರು.
ಸಂದೇಶ್ಖಾಲಿ ಪ್ರಕರಣದ ಸಂತ್ರಸ್ತೆಯರಿಗೆ ಟಿಎಂಸಿ ನಾಯಕರು ಬೆದರಿಕೆಯೊಡ್ಡುತ್ತಿದ್ದಾರೆ. ಅಪರಾಧಿಗಳನ್ನು ರಕ್ಷಿಸಲು ತೃಣಮೂಲ ಕಾಂಗ್ರೆಸ್ ಪಕ್ಷ (ಟಿಎಂಸಿ) ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಆರೋಪಿಸಿದ್ದರು.
ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟ ಸುಮಾರು 300 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಬ್ಯಾನರ್ಜಿ ವಿಶ್ವಾಸ ವ್ಯಕ್ತಪಡಿಸಿದರು.