<p><strong>ನವದೆಹಲಿ:</strong> ‘ಇಂಡಿಯಾ’ ಮೈತ್ರಿಕೂಟದ ಮಧ್ಯಮ ಹಾಗೂ ಕೆಳ ಹಂತಗಳ ಮುಖಂಡರು ಆಡುವ ಮಾತುಗಳಿಗೆ ಪ್ರತಿಕ್ರಿಯೆ ನೀಡದೆ ಇರುವಂತೆ ಕಾಂಗ್ರೆಸ್ಸಿನ ಲೋಕಸಭಾ ಸದಸ್ಯರಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ಇಂಡಿಯಾ’ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಟಿಎಂಸಿ ಮುಖಂಡರು ಆಗ್ರಹಿಸುತ್ತಿರುವ ಸಂದರ್ಭದಲ್ಲಿ ರಾಹುಲ್ ಅವರು ಈ ಸೂಚನೆ ನೀಡಿದ್ದಾರೆ.</p>.<p>ಕಾಂಗ್ರೆಸ್ಸಿನ ಲೋಕಸಭಾ ಸದಸ್ಯರ ಜೊತೆ ಸಭೆ ನಡೆಸಿದ ರಾಹುಲ್ ಅವರು, ಕಲಾಪಕ್ಕೂ ಮೊದಲು ಪಕ್ಷ ನಡೆಸುವ ಪ್ರತಿಭಟನೆಗಳಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಸೂಚಿಸಿದರು. ಅದರಲ್ಲೂ ಮುಖ್ಯವಾಗಿ, ಕಾಂಗ್ರೆಸ್ ಅಧ್ಯಕ್ಷರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾಗ, ಸಂಸದರೆಲ್ಲ ಹಾಜರಿರಬೇಕು ಎಂದು ತಿಳಿಸಿದರು.</p>.<p>ಅದಾನಿ ವಿಚಾರವಾಗಿ ಕಾಂಗ್ರೆಸ್ ನಡೆಸಿರುವ ಪ್ರತಿಭಟನೆಯು ಸರ್ಕಾರದಲ್ಲಿ ಭೀತಿ ಸೃಷ್ಟಿಸಿದೆ. ಜನಪರವಾದ ಸಂಗತಿಗಳನ್ನು ಪ್ರಸ್ತಾಪಿಸುವುದನ್ನು ಕಾಂಗ್ರೆಸ್ಸಿಗರು ಮುಂದುವರಿಸಬೇಕು ಎಂದು ರಾಹುಲ್ ಸೂಚನೆ ನೀಡಿರುವುದಾಗಿ ಮೂಲಗಳು ಹೇಳಿವೆ.</p>.<p>ಪ್ರತಿಭಟನೆಗೆ ವಿನೂತನವಾದ ಕ್ರಮಗಳನ್ನು ರೂಪಿಸುವಂತೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದರಲ್ಲಿ ಮನವಿ ಮಾಡಿದ್ದಾರೆ.</p>.<p>ಸಭೆಯ ನಂತರ ವಿರೋಧ ಪಕ್ಷದ ಸಂಸದರು ಅದಾನಿ ವಿಚಾರವಾಗಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಭಾವಚಿತ್ರ ಇರುವ ಕಪ್ಪು ಬಣ್ಣದ ಚೀಲ ಹಿಡಿದು ಪ್ರತಿಭಟಿಸಿದರು. ಈ ಚೀಲಗಳ ಮೇಲೆ ‘ಮೋದಿ ಅದಾನಿ ಭಾಯಿ ಭಾಯಿ’ ಎಂದು ಬರೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಇಂಡಿಯಾ’ ಮೈತ್ರಿಕೂಟದ ಮಧ್ಯಮ ಹಾಗೂ ಕೆಳ ಹಂತಗಳ ಮುಖಂಡರು ಆಡುವ ಮಾತುಗಳಿಗೆ ಪ್ರತಿಕ್ರಿಯೆ ನೀಡದೆ ಇರುವಂತೆ ಕಾಂಗ್ರೆಸ್ಸಿನ ಲೋಕಸಭಾ ಸದಸ್ಯರಿಗೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ‘ಇಂಡಿಯಾ’ ಮೈತ್ರಿಕೂಟದ ನಾಯಕತ್ವ ವಹಿಸಿಕೊಳ್ಳಬೇಕು ಎಂದು ಟಿಎಂಸಿ ಮುಖಂಡರು ಆಗ್ರಹಿಸುತ್ತಿರುವ ಸಂದರ್ಭದಲ್ಲಿ ರಾಹುಲ್ ಅವರು ಈ ಸೂಚನೆ ನೀಡಿದ್ದಾರೆ.</p>.<p>ಕಾಂಗ್ರೆಸ್ಸಿನ ಲೋಕಸಭಾ ಸದಸ್ಯರ ಜೊತೆ ಸಭೆ ನಡೆಸಿದ ರಾಹುಲ್ ಅವರು, ಕಲಾಪಕ್ಕೂ ಮೊದಲು ಪಕ್ಷ ನಡೆಸುವ ಪ್ರತಿಭಟನೆಗಳಲ್ಲಿ ಎಲ್ಲರೂ ಭಾಗಿಯಾಗಬೇಕು ಎಂದು ಸೂಚಿಸಿದರು. ಅದರಲ್ಲೂ ಮುಖ್ಯವಾಗಿ, ಕಾಂಗ್ರೆಸ್ ಅಧ್ಯಕ್ಷರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾಗ, ಸಂಸದರೆಲ್ಲ ಹಾಜರಿರಬೇಕು ಎಂದು ತಿಳಿಸಿದರು.</p>.<p>ಅದಾನಿ ವಿಚಾರವಾಗಿ ಕಾಂಗ್ರೆಸ್ ನಡೆಸಿರುವ ಪ್ರತಿಭಟನೆಯು ಸರ್ಕಾರದಲ್ಲಿ ಭೀತಿ ಸೃಷ್ಟಿಸಿದೆ. ಜನಪರವಾದ ಸಂಗತಿಗಳನ್ನು ಪ್ರಸ್ತಾಪಿಸುವುದನ್ನು ಕಾಂಗ್ರೆಸ್ಸಿಗರು ಮುಂದುವರಿಸಬೇಕು ಎಂದು ರಾಹುಲ್ ಸೂಚನೆ ನೀಡಿರುವುದಾಗಿ ಮೂಲಗಳು ಹೇಳಿವೆ.</p>.<p>ಪ್ರತಿಭಟನೆಗೆ ವಿನೂತನವಾದ ಕ್ರಮಗಳನ್ನು ರೂಪಿಸುವಂತೆ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದರಲ್ಲಿ ಮನವಿ ಮಾಡಿದ್ದಾರೆ.</p>.<p>ಸಭೆಯ ನಂತರ ವಿರೋಧ ಪಕ್ಷದ ಸಂಸದರು ಅದಾನಿ ವಿಚಾರವಾಗಿ ಪ್ರತಿಭಟನೆ ನಡೆಸಿದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಉದ್ಯಮಿ ಗೌತಮ್ ಅದಾನಿ ಅವರ ವ್ಯಂಗ್ಯಭಾವಚಿತ್ರ ಇರುವ ಕಪ್ಪು ಬಣ್ಣದ ಚೀಲ ಹಿಡಿದು ಪ್ರತಿಭಟಿಸಿದರು. ಈ ಚೀಲಗಳ ಮೇಲೆ ‘ಮೋದಿ ಅದಾನಿ ಭಾಯಿ ಭಾಯಿ’ ಎಂದು ಬರೆಯಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>