<p><strong>ಮುಂಬೈ </strong>: ‘ಬಾಲಕಿಯರು ನಾಪತ್ತೆಯಾದ ಸಂದರ್ಭಗಳಲ್ಲಿ ಚಲನಚಿತ್ರಗಳಲ್ಲಿ ತೋರಿಸುವಂತೆ ಅವರು ಪ್ರಿಯಕರನೊಂದಿಗೆ ಓಡಿ ಹೋಗಿದ್ದಾರೆ ಎಂಬುದಾಗಿ ಭಾವಿಸಬೇಡಿ’ ಎಂದು ಬಾಂಬೈ ಹೈಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಚಾಟಿ ಬೀಸಿದೆ.</p>.<p>ಠಾಣೆ ಜಿಲ್ಲೆಯಲ್ಲಿ ಕಳೆದ ವರ್ಷ ನಾಪತ್ತೆಯಾಗಿರುವ ಬಾಲಕಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಈ ರೀತಿ ಹೇಳಿದ್ದು, ‘ಪೊಲೀಸ್ ವ್ಯವಸ್ಥೆ ತನ್ನ ಮನೋಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕಿದೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಬಾಲಕಿ ನಾಪತ್ತೆಯಾಗಿರುವುದು ನಿಜ ಜೀವನದ ಒಂದು ಘಟನೆ. ಬಾಲಕಿ ಕಾಣೆಯಾದ ನಂತರ ಆಕೆ ಕುಟುಂಬ ಸಂಕಟ ಅನುಭವಿಸುತ್ತಿರುತ್ತದೆ. ನಾಪತ್ತೆಯಾದ ಮಕ್ಕಳೂ ಸಂಕಟ ಅನುಭವಿಸುತ್ತಿರುತ್ತಾರೆ ಎಂಬುದನ್ನು ಪೊಲೀಸ್ ಅಧಿಕಾರಿಗಳು ಮರೆಯಬಾರದು’ ಎಂದು ನ್ಯಾಯಮೂರ್ತಿಗಳಾದ ಎಸ್.ಸಿ.ಧರಮಾಧಿಕಾರಿ ಹಾಗೂ ಭಾರತಿ ಡಾಂಗ್ರೆ ಅವರನ್ನು ಒಳಗೊಂಡ ಪೀಠ ಹೇಳಿದೆ.</p>.<p>ಒಂದು ವರ್ಷ ಕಳೆದರೂ ಮಗಳನ್ನು ಹುಡುಕಿ ಕೊಡುವಲ್ಲಿ ಪೊಲೀಸರು ವಿಫಲರಾಗಿದ್ದು, ಶೋಧಕಾರ್ಯವನ್ನು ಚುರುಕುಗೊಳಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲು ಕೋರಿ ಬಾಲಕಿಯ ತಂದೆ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ </strong>: ‘ಬಾಲಕಿಯರು ನಾಪತ್ತೆಯಾದ ಸಂದರ್ಭಗಳಲ್ಲಿ ಚಲನಚಿತ್ರಗಳಲ್ಲಿ ತೋರಿಸುವಂತೆ ಅವರು ಪ್ರಿಯಕರನೊಂದಿಗೆ ಓಡಿ ಹೋಗಿದ್ದಾರೆ ಎಂಬುದಾಗಿ ಭಾವಿಸಬೇಡಿ’ ಎಂದು ಬಾಂಬೈ ಹೈಕೋರ್ಟ್ ಪೊಲೀಸ್ ಅಧಿಕಾರಿಗಳಿಗೆ ಚಾಟಿ ಬೀಸಿದೆ.</p>.<p>ಠಾಣೆ ಜಿಲ್ಲೆಯಲ್ಲಿ ಕಳೆದ ವರ್ಷ ನಾಪತ್ತೆಯಾಗಿರುವ ಬಾಲಕಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರ ವೈಫಲ್ಯವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಈ ರೀತಿ ಹೇಳಿದ್ದು, ‘ಪೊಲೀಸ್ ವ್ಯವಸ್ಥೆ ತನ್ನ ಮನೋಸ್ಥಿತಿಯನ್ನು ಬದಲಾಯಿಸಿಕೊಳ್ಳಬೇಕಿದೆ’ ಎಂದು ಅಭಿಪ್ರಾಯಪಟ್ಟಿದೆ.</p>.<p>‘ಬಾಲಕಿ ನಾಪತ್ತೆಯಾಗಿರುವುದು ನಿಜ ಜೀವನದ ಒಂದು ಘಟನೆ. ಬಾಲಕಿ ಕಾಣೆಯಾದ ನಂತರ ಆಕೆ ಕುಟುಂಬ ಸಂಕಟ ಅನುಭವಿಸುತ್ತಿರುತ್ತದೆ. ನಾಪತ್ತೆಯಾದ ಮಕ್ಕಳೂ ಸಂಕಟ ಅನುಭವಿಸುತ್ತಿರುತ್ತಾರೆ ಎಂಬುದನ್ನು ಪೊಲೀಸ್ ಅಧಿಕಾರಿಗಳು ಮರೆಯಬಾರದು’ ಎಂದು ನ್ಯಾಯಮೂರ್ತಿಗಳಾದ ಎಸ್.ಸಿ.ಧರಮಾಧಿಕಾರಿ ಹಾಗೂ ಭಾರತಿ ಡಾಂಗ್ರೆ ಅವರನ್ನು ಒಳಗೊಂಡ ಪೀಠ ಹೇಳಿದೆ.</p>.<p>ಒಂದು ವರ್ಷ ಕಳೆದರೂ ಮಗಳನ್ನು ಹುಡುಕಿ ಕೊಡುವಲ್ಲಿ ಪೊಲೀಸರು ವಿಫಲರಾಗಿದ್ದು, ಶೋಧಕಾರ್ಯವನ್ನು ಚುರುಕುಗೊಳಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಲು ಕೋರಿ ಬಾಲಕಿಯ ತಂದೆ ಅರ್ಜಿ ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>