<p><strong>ಹೃಷಿಕೇಶ, ಉತ್ತರಾಖಂಡ:</strong> ‘ಉತ್ತರಾಖಂಡದ ಆಡಳಿತ ಚುಕ್ಕಾಣಿ ಹಿಡಿದಿರುವ ಹೊಸ ತಂಡಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುವುದು. ‘ಡಬಲ್ ಎಂಜಿನ್’ ಚಾಲಿತ ರಾಜ್ಯದ ಅಭಿವೃದ್ಧಿ ಹೊಸ ಎತ್ತರ ತಲುಪಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 35 ವೈದ್ಯಕೀಯ ಆಮ್ಲಜನಕ ಘಟಕಗಳನ್ನು ವರ್ಚುವಲ್ ಆಗಿ ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ನ 2ನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಯಿತು. ಇದಕ್ಕೆ ಪ್ರತಿಯಾಗಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>‘ಪಿಎಂ ಕೇರ್ಸ್ ನಿಧಿ ನೆರವಿನಿಂದ 1,150 ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಜಿಲ್ಲೆಯೂ ಇಂಥ ಘಟಕ ಹೊಂದಿದಂತಾಗಿದೆ’ ಎಂದು ಹೇಳಿದರು.</p>.<p>‘ಉತ್ತರಾಖಂಡ ರಾಜ್ಯ ರಚನೆಯಾಗಿ ಇನ್ನೇನು 25 ವರ್ಷಗಳು ತುಂಬಲಿವೆ. ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ, ಬರುವ ದಿನಗಳಲ್ಲಿ ಆಗಬೇಕಾದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಜನರು ಹೆಜ್ಜೆ ಹಾಕುವುದು ಅಗತ್ಯ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೃಷಿಕೇಶ, ಉತ್ತರಾಖಂಡ:</strong> ‘ಉತ್ತರಾಖಂಡದ ಆಡಳಿತ ಚುಕ್ಕಾಣಿ ಹಿಡಿದಿರುವ ಹೊಸ ತಂಡಕ್ಕೆ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡುವುದು. ‘ಡಬಲ್ ಎಂಜಿನ್’ ಚಾಲಿತ ರಾಜ್ಯದ ಅಭಿವೃದ್ಧಿ ಹೊಸ ಎತ್ತರ ತಲುಪಲಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 35 ವೈದ್ಯಕೀಯ ಆಮ್ಲಜನಕ ಘಟಕಗಳನ್ನು ವರ್ಚುವಲ್ ಆಗಿ ಉದ್ಘಾಟಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಕೋವಿಡ್ನ 2ನೇ ಅಲೆ ಸಂದರ್ಭದಲ್ಲಿ ದೇಶದಲ್ಲಿ ವೈದ್ಯಕೀಯ ಆಮ್ಲಜನಕಕ್ಕೆ ಬೇಡಿಕೆ ಹೆಚ್ಚಾಯಿತು. ಇದಕ್ಕೆ ಪ್ರತಿಯಾಗಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆಯನ್ನು 10 ಪಟ್ಟು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದರು.</p>.<p>‘ಪಿಎಂ ಕೇರ್ಸ್ ನಿಧಿ ನೆರವಿನಿಂದ 1,150 ಆಮ್ಲಜನಕ ಘಟಕಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಜಿಲ್ಲೆಯೂ ಇಂಥ ಘಟಕ ಹೊಂದಿದಂತಾಗಿದೆ’ ಎಂದು ಹೇಳಿದರು.</p>.<p>‘ಉತ್ತರಾಖಂಡ ರಾಜ್ಯ ರಚನೆಯಾಗಿ ಇನ್ನೇನು 25 ವರ್ಷಗಳು ತುಂಬಲಿವೆ. ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಜೊತೆಗೆ, ಬರುವ ದಿನಗಳಲ್ಲಿ ಆಗಬೇಕಾದ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಜನರು ಹೆಜ್ಜೆ ಹಾಕುವುದು ಅಗತ್ಯ’ ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>