<p><strong>ನವದೆಹಲಿ</strong>: ಅಸ್ತಿತ್ವದಲ್ಲಿರುವ ವರದಕ್ಷಿಣೆ ವಿರೋಧಿ ಕಾನೂನು ಪರಿಣಾಮಕಾರಿಯಾಗಿಲ್ಲದ ಕಾರಣ ದುರ್ಬಳಕೆಯಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕಳವಳ ವ್ಯಕ್ತಪಡಿಸಿತು.</p>.<p>ಇದೇ ಸಂದರ್ಭದಲ್ಲಿ, ‘ವರದಕ್ಷಿಣೆ ಎಂಬ ಕರಾಳ ಪದ್ಧತಿ ಈಗಲೂ ವ್ಯಾಪಕವಾಗಿದೆ. ಇದನ್ನು ಕಿತ್ತೊಗೆಯಬೇಕಿರುವುದು ಸಾಂವಿಧಾನಿಕ ಮತ್ತು ಸಾಮಾಜಿಕ ತುರ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ಎನ್.ಕೋಟೀಶ್ವರ್ ಸಿಂಗ್ ಅವರ ನೇತೃತ್ವದ ನ್ಯಾಯಪೀಠವು, 24 ವರ್ಷ ಹಳೆಯ ವರದಕ್ಷಿಣಿ ಕಿರುಕುಳಕ್ಕೆ ಸಂಬಂಧಿಸಿದ ಸಾವಿನ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿತು.</p>.<p class="title">ವರದಕ್ಷಿಣೆ ವಿರೋಧಿ ಕಾನೂನಿನ ದುರ್ಬಳಕೆಯು ನ್ಯಾಯಾಂಗಕ್ಕೆ ಸವಾಲಾಗಿದ್ದು, ಇದಕ್ಕೆ ತುರ್ತು ಪರಿಹಾರ ಬೇಕಿದೆ. ಸಮಸ್ಯೆಯ ನಿವಾರಣೆಗೆ ನಿರಂತರ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ಹೇಳಿ ಹಲವು ನಿರ್ದೇಶನಗಳನ್ನು ನೀಡಿತು.</p>.<p>ಐಪಿಸಿ ಸೆಕ್ಷನ್ 304ಬಿ ಮತ್ತು 498ಎ ಅಡಿಯಲ್ಲಿ ದಾಖಲಾಗಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಹೈಕೋರ್ಟ್ಗಳಿಗೆ ತಿಳಿಸಿತು.</p>.<p>ಇದೇ ವೇಳೆ, ಎಲ್ಲಾ ಹಂತದ ಶೈಕ್ಷಣಿಕ ಪಠ್ಯಗಳಲ್ಲಿ ಅಗತ್ಯ ಬದಲಾವಣೆಗಳನ್ನು ತರುವ ಬಗ್ಗೆ ಚಿಂತನೆ ನಡೆಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಅಸ್ತಿತ್ವದಲ್ಲಿರುವ ವರದಕ್ಷಿಣೆ ವಿರೋಧಿ ಕಾನೂನು ಪರಿಣಾಮಕಾರಿಯಾಗಿಲ್ಲದ ಕಾರಣ ದುರ್ಬಳಕೆಯಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಕಳವಳ ವ್ಯಕ್ತಪಡಿಸಿತು.</p>.<p>ಇದೇ ಸಂದರ್ಭದಲ್ಲಿ, ‘ವರದಕ್ಷಿಣೆ ಎಂಬ ಕರಾಳ ಪದ್ಧತಿ ಈಗಲೂ ವ್ಯಾಪಕವಾಗಿದೆ. ಇದನ್ನು ಕಿತ್ತೊಗೆಯಬೇಕಿರುವುದು ಸಾಂವಿಧಾನಿಕ ಮತ್ತು ಸಾಮಾಜಿಕ ತುರ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿತು.</p>.<p>ನ್ಯಾಯಮೂರ್ತಿ ಸಂಜಯ್ ಕರೋಲ್ ಮತ್ತು ಎನ್.ಕೋಟೀಶ್ವರ್ ಸಿಂಗ್ ಅವರ ನೇತೃತ್ವದ ನ್ಯಾಯಪೀಠವು, 24 ವರ್ಷ ಹಳೆಯ ವರದಕ್ಷಿಣಿ ಕಿರುಕುಳಕ್ಕೆ ಸಂಬಂಧಿಸಿದ ಸಾವಿನ ಪ್ರಕರಣದಲ್ಲಿ ತೀರ್ಪು ಪ್ರಕಟಿಸಿತು.</p>.<p class="title">ವರದಕ್ಷಿಣೆ ವಿರೋಧಿ ಕಾನೂನಿನ ದುರ್ಬಳಕೆಯು ನ್ಯಾಯಾಂಗಕ್ಕೆ ಸವಾಲಾಗಿದ್ದು, ಇದಕ್ಕೆ ತುರ್ತು ಪರಿಹಾರ ಬೇಕಿದೆ. ಸಮಸ್ಯೆಯ ನಿವಾರಣೆಗೆ ನಿರಂತರ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದು ಹೇಳಿ ಹಲವು ನಿರ್ದೇಶನಗಳನ್ನು ನೀಡಿತು.</p>.<p>ಐಪಿಸಿ ಸೆಕ್ಷನ್ 304ಬಿ ಮತ್ತು 498ಎ ಅಡಿಯಲ್ಲಿ ದಾಖಲಾಗಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡುವಂತೆ ಹೈಕೋರ್ಟ್ಗಳಿಗೆ ತಿಳಿಸಿತು.</p>.<p>ಇದೇ ವೇಳೆ, ಎಲ್ಲಾ ಹಂತದ ಶೈಕ್ಷಣಿಕ ಪಠ್ಯಗಳಲ್ಲಿ ಅಗತ್ಯ ಬದಲಾವಣೆಗಳನ್ನು ತರುವ ಬಗ್ಗೆ ಚಿಂತನೆ ನಡೆಸುವಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಸೂಚಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>