<p><strong>ನೊಯಿಡಾ</strong>: ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಇತರ ಆರು ಮಂದಿ ವಿರುದ್ಧ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಸೇರಿದಂತೆ ಇತರ ಆರೋಪಗಳ ಮೇಲೆ ಎಫ್ಐಆರ್ ದಾಖಲಾಗಿದೆ. </p>.<p>2019ರ ಬ್ಯಾಚ್ನ ಐಪಿಎಸ್ ಅಧಿಕಾರಿ ಶಿವಾಂಶು ರಜಪೂತ್ ಅವರ ಪತ್ನಿ ಕೃತಿ ಸಿಂಗ್ ದೂರು ನೀಡಿದ್ದಾರೆ. ವೈದ್ಯೆಯಾಗಿರುವ ಇವರು, ಉತ್ತರ ಪ್ರದೇಶದ ನೊಯಿಡಾದವರು. ಶಿವಾಂಶು ಅವರು ಬೇರೊಬ್ಬ ಮಹಿಳೆಯೊಂದಿಗ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಕೃತಿ ತಿಳಿಸಿದ್ದಾರೆ. </p>.<p>ಶಿವಾಂಶು, ಅವರ ತಂದೆ, ತಾಯಿ, ಸಹೋದರ, ಅತ್ತಿಗೆ ಹಾಗೂ ಶಿವಾಂಶು ಅವರ ಇಬ್ಬರು ಸ್ನೇಹಿತರ ವಿರುದ್ಧ ದೂರು ದಾಖಲಾಗಿದೆ. </p>.<p>41 ಪುಟಗಳ ದೂರು ನೀಡಿರುವ ಕೃತಿ ಅವರು, ‘2021ರಲ್ಲಿ ಮದುವೆಯಾದಾಗಿನಿಂದ ವರದಕ್ಷಿಣೆಗಾಗಿ ನನ್ನನ್ನು ಪೀಡಿಸಲಾಗುತ್ತಿದೆ. ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಆಭರಣ ಹಾಗೂ ಇತರ ಖರ್ಚುಗಳು ಸೇರಿದಂತೆ ಮದುವೆಗೆ ನನ್ನ ಕುಟುಂಬ ₹2 ಕೋಟಿ ವ್ಯಯ ಮಾಡಿದೆ. ಆದರೂ ನನ್ನ ಅತ್ತೆ–ಮಾವ ನನಗೆ ಇನ್ನಷ್ಟು ವರದಕ್ಷಿಣೆ ತರುವಂತೆ ಹಿಂಸೆ ನೀಡುತ್ತಿದ್ದರು’ ಎಂದೂ ಹೇಳಿದ್ದಾರೆ.</p>.<p>ಕೃತಿ ಹಾಗೂ ಶಿವಾಂಶು ದಂಪತಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೊಯಿಡಾ</strong>: ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಹಾಗೂ ಇತರ ಆರು ಮಂದಿ ವಿರುದ್ಧ ವರದಕ್ಷಿಣೆ ಕಿರುಕುಳ, ಕೌಟುಂಬಿಕ ಹಿಂಸೆ ಸೇರಿದಂತೆ ಇತರ ಆರೋಪಗಳ ಮೇಲೆ ಎಫ್ಐಆರ್ ದಾಖಲಾಗಿದೆ. </p>.<p>2019ರ ಬ್ಯಾಚ್ನ ಐಪಿಎಸ್ ಅಧಿಕಾರಿ ಶಿವಾಂಶು ರಜಪೂತ್ ಅವರ ಪತ್ನಿ ಕೃತಿ ಸಿಂಗ್ ದೂರು ನೀಡಿದ್ದಾರೆ. ವೈದ್ಯೆಯಾಗಿರುವ ಇವರು, ಉತ್ತರ ಪ್ರದೇಶದ ನೊಯಿಡಾದವರು. ಶಿವಾಂಶು ಅವರು ಬೇರೊಬ್ಬ ಮಹಿಳೆಯೊಂದಿಗ ಅಕ್ರಮ ಸಂಬಂಧ ಹೊಂದಿದ್ದಾರೆ ಎಂದು ದೂರಿನಲ್ಲಿ ಕೃತಿ ತಿಳಿಸಿದ್ದಾರೆ. </p>.<p>ಶಿವಾಂಶು, ಅವರ ತಂದೆ, ತಾಯಿ, ಸಹೋದರ, ಅತ್ತಿಗೆ ಹಾಗೂ ಶಿವಾಂಶು ಅವರ ಇಬ್ಬರು ಸ್ನೇಹಿತರ ವಿರುದ್ಧ ದೂರು ದಾಖಲಾಗಿದೆ. </p>.<p>41 ಪುಟಗಳ ದೂರು ನೀಡಿರುವ ಕೃತಿ ಅವರು, ‘2021ರಲ್ಲಿ ಮದುವೆಯಾದಾಗಿನಿಂದ ವರದಕ್ಷಿಣೆಗಾಗಿ ನನ್ನನ್ನು ಪೀಡಿಸಲಾಗುತ್ತಿದೆ. ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡಿದ್ದಾರೆ’ ಎಂದು ಆರೋಪಿಸಿದ್ದಾರೆ.</p>.<p>‘ಆಭರಣ ಹಾಗೂ ಇತರ ಖರ್ಚುಗಳು ಸೇರಿದಂತೆ ಮದುವೆಗೆ ನನ್ನ ಕುಟುಂಬ ₹2 ಕೋಟಿ ವ್ಯಯ ಮಾಡಿದೆ. ಆದರೂ ನನ್ನ ಅತ್ತೆ–ಮಾವ ನನಗೆ ಇನ್ನಷ್ಟು ವರದಕ್ಷಿಣೆ ತರುವಂತೆ ಹಿಂಸೆ ನೀಡುತ್ತಿದ್ದರು’ ಎಂದೂ ಹೇಳಿದ್ದಾರೆ.</p>.<p>ಕೃತಿ ಹಾಗೂ ಶಿವಾಂಶು ದಂಪತಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>