ಕೃಷ್ಣಾ ಹಾಗೂ ಕಾವೇರಿ ನದಿಗಳ ಜಲಾನಯನ ಪ್ರದೇಶಗಳಲ್ಲಿ ಗಿಡಗಳನ್ನು ನೆಡುವುದು, ಹಸಿರು ಹೊದಿಕೆಯನ್ನು ಹೆಚ್ಚಿಸುವುದು, ಮಣ್ಣಿನ ಸವಕಳಿ ಹಾಗೂ ಪ್ರವಾಹವನ್ನು ತಡೆಗಟ್ಟುವುದು, ಮರುಪೂರಣದ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸುವುದು, ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ಸ್ಥಾಪನೆ ಮಾಡುವುದು ಈ ಯೋಜನೆಯಲ್ಲಿ ಸೇರಿದೆ. ಮರದ ಜಾತಿ, ಔಷಧೀಯ ಸಸ್ಯಗಳು, ಹುಲ್ಲು ನಾಟಿ, ಪೊದೆ, ಹಣ್ಣಿನ ಸಸಿಗಳನ್ನು ನೆಡಲು ಯೋಜಿಸಲಾಗಿದೆ. ಬಹು ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆಯನ್ನು ಅನುಷ್ಢಾನಗೊಳಿಸಲು ಉದ್ದೇಶಿಸಲಾಗಿದೆ. ಈ ಸಂಬಂಧ ಅರಣ್ಯ ಸಚಿವಾಲಯವು ಕರ್ನಾಟಕ ಸರ್ಕಾರಕ್ಕೆ ಡಿಪಿಆರ್ ಕಳುಹಿಸಿ ಯೋಜನೆಗೆ ಸಹಭಾಗಿತ್ವ ವಹಿಸುವಂತೆ ಕೇಳಿಕೊಂಡಿದೆ.