<p><strong>ನಾಗ್ಪುರ:</strong> ಸಾಮಾಜಿಕ– ಆರ್ಥಿಕ ಸಮಾನತೆ ಕುರಿತಾದ ಡಾ.ಬಿ.ಆರ್ ಅಂಬೇಡ್ಕರ್ ಅವರ ತತ್ವ–ಸಿದ್ಧಾಂತಗಳು ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನ ಒದಗಿಸಲಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಭೂಷಣ್ ಗವಾಯಿ ಶನಿವಾರ ಹೇಳಿದ್ದಾರೆ.</p>.<p>ಇಲ್ಲಿನ ಅಂಬೇಡ್ಕರ್ ಕಾಲೇಜಿನ ವಜ್ರ ಮಹೋತ್ಸವ ಸಮಾರಂಭದಲ್ಲಿ ಗವಾಯಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ತಮ್ಮ ಜೀವನದುದ್ದಕ್ಕೂ ಅಂಬೇಡ್ಕರ್ ಅವರ ಸಾಮಾಜಿಕ–ಆರ್ಥಿಕ ಸಮಾನತೆ ತತ್ವಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿದ್ದಾಗಿ ತಿಳಿಸಿದ್ದಾರೆ. </p>.<p class="title">ಅಲ್ಲದೇ, ‘ಮಹಿಳಾ ಸಬಲೀಕರಣವು ಸಮಾಜವೊಂದರ ಅಭಿವೃದ್ಧಿಯನ್ನು ಅಳೆಯುವ ಮಾನದಂಡವಾಗಿದ್ದು, ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿನಿಯರು ಆ ಮಾನದಂಡವನ್ನು ಪೂರೈಸಿರುವುದನ್ನು ನೋಡಲು ಸಂತಸವಾಗುತ್ತಿದೆ. ಮಹಿಳೆಯರ ಅಭಿವೃದ್ಧಿಯು ಅಂಬೇಡ್ಕರ್ ಅವರಿಗೆ ನೀಡಬಹುದಾದ ಗೌರವವಾಗಿದೆ’ ಎಂದೂ ಹೇಳಿದ್ದಾರೆ. </p>.<p class="title">ಯಶಸ್ವಿ ವ್ಯಕ್ತಿಗೂ, ಶ್ರೇಷ್ಠ ವ್ಯಕ್ತಿಗೂ ವ್ಯತ್ಯಾಸವಿದೆ. ಶ್ರೇಷ್ಠ ವ್ಯಕ್ತಿಯಾದವನು ತನ್ನ ಯಶಸ್ಸಿನೊಂದಿಗೆ ಸಮಾಜದ ಉನ್ನತಿಗೂ ಸೇವೆ ಸಲ್ಲಿಸುತ್ತಾನೆ. ಅಂಥ ವ್ಯಕ್ತಿಯಾಗುವ ದೃಢ ನಿಶ್ಚಯವಿದ್ದರೆ ಅಂಬೇಡ್ಕರ್ ಅವರ ತತ್ವಗಳು ನಮ್ಮನ್ನು ಮುನ್ನಡೆಸುತ್ತವೆ ಎಂದೂ ಗವಾಯಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗ್ಪುರ:</strong> ಸಾಮಾಜಿಕ– ಆರ್ಥಿಕ ಸಮಾನತೆ ಕುರಿತಾದ ಡಾ.ಬಿ.ಆರ್ ಅಂಬೇಡ್ಕರ್ ಅವರ ತತ್ವ–ಸಿದ್ಧಾಂತಗಳು ಭವಿಷ್ಯದ ಪೀಳಿಗೆಗೆ ಮಾರ್ಗದರ್ಶನ ಒದಗಿಸಲಿವೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಭೂಷಣ್ ಗವಾಯಿ ಶನಿವಾರ ಹೇಳಿದ್ದಾರೆ.</p>.<p>ಇಲ್ಲಿನ ಅಂಬೇಡ್ಕರ್ ಕಾಲೇಜಿನ ವಜ್ರ ಮಹೋತ್ಸವ ಸಮಾರಂಭದಲ್ಲಿ ಗವಾಯಿ ಪಾಲ್ಗೊಂಡಿದ್ದರು. ಈ ವೇಳೆ ಮಾತನಾಡಿದ ಅವರು, ತಮ್ಮ ಜೀವನದುದ್ದಕ್ಕೂ ಅಂಬೇಡ್ಕರ್ ಅವರ ಸಾಮಾಜಿಕ–ಆರ್ಥಿಕ ಸಮಾನತೆ ತತ್ವಗಳನ್ನು ಅಳವಡಿಸಿಕೊಳ್ಳಲು ಪ್ರಯತ್ನಿಸಿದ್ದಾಗಿ ತಿಳಿಸಿದ್ದಾರೆ. </p>.<p class="title">ಅಲ್ಲದೇ, ‘ಮಹಿಳಾ ಸಬಲೀಕರಣವು ಸಮಾಜವೊಂದರ ಅಭಿವೃದ್ಧಿಯನ್ನು ಅಳೆಯುವ ಮಾನದಂಡವಾಗಿದ್ದು, ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿನಿಯರು ಆ ಮಾನದಂಡವನ್ನು ಪೂರೈಸಿರುವುದನ್ನು ನೋಡಲು ಸಂತಸವಾಗುತ್ತಿದೆ. ಮಹಿಳೆಯರ ಅಭಿವೃದ್ಧಿಯು ಅಂಬೇಡ್ಕರ್ ಅವರಿಗೆ ನೀಡಬಹುದಾದ ಗೌರವವಾಗಿದೆ’ ಎಂದೂ ಹೇಳಿದ್ದಾರೆ. </p>.<p class="title">ಯಶಸ್ವಿ ವ್ಯಕ್ತಿಗೂ, ಶ್ರೇಷ್ಠ ವ್ಯಕ್ತಿಗೂ ವ್ಯತ್ಯಾಸವಿದೆ. ಶ್ರೇಷ್ಠ ವ್ಯಕ್ತಿಯಾದವನು ತನ್ನ ಯಶಸ್ಸಿನೊಂದಿಗೆ ಸಮಾಜದ ಉನ್ನತಿಗೂ ಸೇವೆ ಸಲ್ಲಿಸುತ್ತಾನೆ. ಅಂಥ ವ್ಯಕ್ತಿಯಾಗುವ ದೃಢ ನಿಶ್ಚಯವಿದ್ದರೆ ಅಂಬೇಡ್ಕರ್ ಅವರ ತತ್ವಗಳು ನಮ್ಮನ್ನು ಮುನ್ನಡೆಸುತ್ತವೆ ಎಂದೂ ಗವಾಯಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>