ಸರ್ಕಾರದ ಅಭಿವೃದ್ಧಿ ಯೋಜನೆಗಳು, ಕಾರ್ಯಗಳಿಗೆ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ಜನವರಿಯಲ್ಲಿ ಆರೋಪಿಸಿದ್ದರು. ಬೇಡಿ ವಿರುದ್ಧ ಅಹೋರಾತ್ರಿ ಪ್ರತಿಭಟನೆಯನ್ನೂ ನಡೆಸಿದ್ದರು. ಪುದುಚೇರಿ ಕಲ್ಯಾಣ ಸಚಿವ ಎಂ.ಕಂದಸಾಮಿ ಕೂಡ ಬೇಡಿ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಕಿರಣ್ ಬೇಡಿ ಅವರನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಕರೆಯಿಸಿಕೊಳ್ಳಬೇಕು ಎಂದು ಆಗ್ರಹಿಸಿ ನಾರಾಯಣಸ್ವಾಮಿ ಅವರು ಜನವರಿಯಲ್ಲಿ ಸಹಿ ಅಭಿಯಾನವನ್ನೂ ನಡೆಸಿದ್ದರು.