<p><strong>ನವದೆಹಲಿ:</strong>ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ವಿಜ್ಞಾನಿ ಎಂದು ಸುಳ್ಳು ಹೇಳಿ ಯುವಕನೊಬ್ಬಪಿ.ಎಚ್ಡಿ ವಿದ್ಯಾರ್ಥಿನಿಯನ್ನು ಮದುವೆಯಾಗಿ ವಂಚಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.</p>.<p>ಇಲ್ಲಿನದ್ವಾರಕ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಆರೋಪಿಯನ್ನು ಜಿತೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.ಡಿಆರ್ಡಿಒದಲ್ಲಿ ನಾನುವಿಜ್ಞಾನಿಯಾಗಿದ್ದು ಮುಂದಿನ ದಿನಗಳಲ್ಲಿ ನಾಸಾ ಸಂಸ್ಥೆ ಸೇರಲಿದ್ದೇನೆ ಎಂದು ಸುಳ್ಳು ಹೇಳಿದ್ದ ಎಂದು ವಂಚನೆಗೆ ಒಳಗಾಗಿರುವ ಸಂತ್ರಸ್ತ ಯುವತಿಯ ಕುಟುಂಬದವರು ಆರೋಪಿಸಿದ್ದಾರೆ.</p>.<p>ದೆಹಲಿ ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ನಡೆಸುತ್ತಿರುವ ಯುವತಿಯನ್ನು ಮದುವೆಯಾಗುವ ಸಲುವಾಗಿ ಆರೋಪಿ ಜಿತೇಂದ್ರ ಸಿಂಗ್ ಅವರ ಮನೆಗೆ ಪದೇ ಪದೇ ಹೋಗಿ ಬರುತ್ತಿದ್ದ.ಡಿಆರ್ಡಿಒದ ನಕಲಿ ದಾಖಲೆ ಮತ್ತು ಐಡಿಯನ್ನು ತಯಾರಿಸಿಕೊಂಡು ಯುವತಿಯ ಕುಟುಂಬದವರು ನಂಬುವಂತೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೀತೇಂದ್ರ ಸಿಂಗ್ ಮಾತಿಗೆ ಮರುಳಾಗಿದ್ದ ಯುವತಿಯ ಕುಟುಂಬದವರುಮೂರು ತಿಂಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದರು. ನಂತರ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುತ್ತಿರುವಾಗಜಿತೇಂದ್ರ ಸಿಂಗ್ ನಿಜ ಬಣ್ಣ ಬಯಲಾಗಿದೆ.</p>.<p>ಜಿತೇಂದ್ರ ಈ ಹಿಂದೆ ಒಂದು ಮದುವೆಯಾಗಿ ಪತ್ನಿಯನ್ನು ತೊರೆದಿರುವುದು ಪೊಲೀಸರ ತನಿಖೆಯ ವೇಳೆ ಬಯಲಾಗಿದೆ.</p>.<p>ದ್ವಾರಕಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರ ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong>ರಕ್ಷಣಾ ಸಂಶೋಧನಾ ಹಾಗೂ ಅಭಿವೃದ್ಧಿ ಸಂಸ್ಥೆಯ (ಡಿಆರ್ಡಿಒ) ವಿಜ್ಞಾನಿ ಎಂದು ಸುಳ್ಳು ಹೇಳಿ ಯುವಕನೊಬ್ಬಪಿ.ಎಚ್ಡಿ ವಿದ್ಯಾರ್ಥಿನಿಯನ್ನು ಮದುವೆಯಾಗಿ ವಂಚಿಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ.</p>.<p>ಇಲ್ಲಿನದ್ವಾರಕ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು ಆರೋಪಿಯನ್ನು ಜಿತೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ.ಡಿಆರ್ಡಿಒದಲ್ಲಿ ನಾನುವಿಜ್ಞಾನಿಯಾಗಿದ್ದು ಮುಂದಿನ ದಿನಗಳಲ್ಲಿ ನಾಸಾ ಸಂಸ್ಥೆ ಸೇರಲಿದ್ದೇನೆ ಎಂದು ಸುಳ್ಳು ಹೇಳಿದ್ದ ಎಂದು ವಂಚನೆಗೆ ಒಳಗಾಗಿರುವ ಸಂತ್ರಸ್ತ ಯುವತಿಯ ಕುಟುಂಬದವರು ಆರೋಪಿಸಿದ್ದಾರೆ.</p>.<p>ದೆಹಲಿ ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ನಡೆಸುತ್ತಿರುವ ಯುವತಿಯನ್ನು ಮದುವೆಯಾಗುವ ಸಲುವಾಗಿ ಆರೋಪಿ ಜಿತೇಂದ್ರ ಸಿಂಗ್ ಅವರ ಮನೆಗೆ ಪದೇ ಪದೇ ಹೋಗಿ ಬರುತ್ತಿದ್ದ.ಡಿಆರ್ಡಿಒದ ನಕಲಿ ದಾಖಲೆ ಮತ್ತು ಐಡಿಯನ್ನು ತಯಾರಿಸಿಕೊಂಡು ಯುವತಿಯ ಕುಟುಂಬದವರು ನಂಬುವಂತೆ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಜೀತೇಂದ್ರ ಸಿಂಗ್ ಮಾತಿಗೆ ಮರುಳಾಗಿದ್ದ ಯುವತಿಯ ಕುಟುಂಬದವರುಮೂರು ತಿಂಗಳ ಹಿಂದೆ ಮದುವೆ ಮಾಡಿಕೊಟ್ಟಿದ್ದರು. ನಂತರ ಕೆಲಸಕ್ಕೆ ಹೋಗದೇ ಮನೆಯಲ್ಲೇ ಇರುತ್ತಿರುವಾಗಜಿತೇಂದ್ರ ಸಿಂಗ್ ನಿಜ ಬಣ್ಣ ಬಯಲಾಗಿದೆ.</p>.<p>ಜಿತೇಂದ್ರ ಈ ಹಿಂದೆ ಒಂದು ಮದುವೆಯಾಗಿ ಪತ್ನಿಯನ್ನು ತೊರೆದಿರುವುದು ಪೊಲೀಸರ ತನಿಖೆಯ ವೇಳೆ ಬಯಲಾಗಿದೆ.</p>.<p>ದ್ವಾರಕಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಪತ್ತೆಗೆ ಪೊಲೀಸರ ಬಲೆ ಬೀಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>