ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ತಹಶೀಲ್ದಾರ್‌ಗೆ ಬೆಂಕಿ ಹಚ್ಚಿ ಹತ್ಯೆ: ರಕ್ಷಣೆಗೆ ಧಾವಿಸಿದ್ದ ಚಾಲಕ ಸಾವು

Last Updated 5 ನವೆಂಬರ್ 2019, 20:09 IST
ಅಕ್ಷರ ಗಾತ್ರ

ಹೈದರಾಬಾದ್‌: ತಹಶೀಲ್ದಾರ್‌ಗೆ ಕಚೇರಿಯಲ್ಲಿಯೇ ಬೆಂಕಿ ಹಚ್ಚಿದ್ದಾಗ ಅವರ ರಕ್ಷಣೆಗೆ ಧಾವಿಸಿ ತೀವ್ರ ಸುಟ್ಟಗಾಯಗಳಾಗಿದ್ದ ಚಾಲಕ ಗುರುನಾಥಂ ಮಂಗಳವಾರ ಮೃತಪಟ್ಟಿದ್ದಾರೆ.

ಸುರೇಶ್‌ ಎಂಬಾತ ಸೋಮವಾರ ಇಲ್ಲಿನ ಅಬ್ದುಲ್ಲಾಪುರಮೆಟ್‌ನ ತಹಶೀಲ್ದಾರ್ ವಿಜಯಾರೆಡ್ಡಿ ಅವರಿಗೆ ಕಚೇರಿಯಲ್ಲಿಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದು, ವಿಜಯಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರ ಚಾಲಕನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಗುರುನಾಥಂ ಕಳೆದ ಆರು ವರ್ಷಗಳಿಂದಲೂ ತಹಶೀಲ್ದಾರ್ ಅವರ ಕಾರುಚಾಲಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೂರ್ಯಪೇಟ್‌ ಜಿಲ್ಲೆಯ ವೆಲಿದಂಡ ಗ್ರಾಮದ ನಿವಾಸಿಯಾಗಿರುವ ಇವರಿಗೆ ಪುತ್ರ, ಗರ್ಭಿಣಿ ಪತ್ನಿ ಇದ್ದಾರೆ.

ಆರೋಪಿ: ಇತ್ತ, ಆರೋಪಿ ಸುರೇಶ್‌ಗೆ ಶೇ 65ರಷ್ಟು ಸುಟ್ಟಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಸಾಕಷ್ಟು ಅಲೆದಾಡಿದ್ದರೂ ಭೂ ಮಾಲೀಕತ್ವ ದಾಖಲೆ ಒದಗಿಸಲು ವಿಳಂಬ ಮಾಡಿದ್ದರು. ಕಡೆಯದಾಗಿ ಅಧಿಕಾರಿಗೆ ಮನವಿ ಮಾಡಿದ್ದೆ. ಅವರೂ ತಿರಸ್ಕರಿಸಿದಾಗ ಕೃತ್ಯ ಎಸಗಿದೆ ಎಂದು ಪೊಲೀಸರಿಗೆ ಹೇಳಿಕೆ ನೀಡಿದ್ದಾನೆ.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT