<p><strong>ಭುವನೇಶ್ವರ</strong>: ಒಡಿಶಾದ ಪುರಿ ಜಗನ್ನಾಥ ದೇವಾಲಯದ ಮೇಲೆ ಇಂದು (ಭಾನುವಾರ) ಮುಂಜಾನೆ ಡ್ರೋನ್ ಹಾರಾಟ ನಡೆಸಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇಂದು ಮುಂಜಾನೆ 4.10ರ ವೇಳೆಗೆ ಜಗನ್ನಾಥನ ದೇವಸ್ಥಾನದ ಮೇಲೆ ಸುಮಾರು ಅರ್ಧ ಗಂಟೆಗಳ ಕಾಲ ಡ್ರೋನ್ ಹಾರಾಟ ನಡೆಸಿದೆ. ಇದರಿಂದ ಕೆಲ ಕಾಲ ಆತಂಕದ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಎಚ್ಚೆತ್ತ ಪೊಲೀಸರು ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿ, ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಒಡಿಶಾ: 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥ ದೇವಾಲಯದ ‘ರತ್ನಭಂಡಾರ’.ಪುರಿ ಜಗನ್ನಾಥ ದೇವಾಲಯದ ಕೀಲಿಕೈ ಮಾಹಿತಿ ಇದ್ದಲ್ಲಿ PM ಪತ್ತೆ ಮಾಡಲಿ: ಪಾಂಡಿಯನ್. <p>'ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಹಾಗೂ ಸ್ವೀಕಾರಾರ್ಹವಲ್ಲ. ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಎಂದು ಹೇಳಿದ್ದಾರೆ.</p><p>'ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲಾಗುವುದು. ದೇವಸ್ಥಾನದ ಸುತ್ತಲಿನ ನಾಲ್ಕು ಕಾವಲು ಗೋಪುರಗಳ ಬಳಿ ಭದ್ರತೆಯನ್ನು ಹೆಚ್ಚಿಸಲಾಗವುದು' ಎಂದು ಹರಿಚಂದನ್ ತಿಳಿಸಿದ್ದಾರೆ.</p><p>ಈ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ವಿಶೇಷ ತನಿಖಾ ತಂಡ ರಚಿಸಲಾಗಿದೆ. 'ಯಾರೋ ವ್ಲಾಗರ್ ಡ್ರೋನ್ ಅನ್ನು ದೇವಸ್ಥಾನದ ಮೇಲೆ ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಇದರ ಹಿಂದಿನ ಉದ್ದೇಶವನ್ನು ತಳ್ಳಿಹಾಕುವಂತಿಲ್ಲ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.</p>.ಪುರಿ ಜಗನ್ನಾಥ ದೇವಾಲಯದ ಸಮೀಪ ಪುರಾತನ ಮಠಗಳ ನೆಲಸಮ; ಟ್ವೀಟಿಗರ ಆಕ್ರೋಶ .ಹೊಸ ವರ್ಷ: ಪುರಿ ಜಗನ್ನಾಥ ದೇಗುಲಕ್ಕೆ ಭಕ್ತರ ದಂಡು.ಪುರಿ ಜಗನ್ನಾಥ ದೇವಾಲಯ | ರತ್ನ ಭಂಡಾರದ ತಾಂತ್ರಿಕ ಸಮೀಕ್ಷೆ ಆರಂಭಿಸಿದ ಎಎಸ್ಐ.ಪುರಿ ಜಗನ್ನಾಥ ದೇಗುಲದ ಜಾತ್ರೆ ವೇಳೆ ಪಟಾಕಿ ಸ್ಫೋಟ: ಮೃತರ ಸಂಖ್ಯೆ 11ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭುವನೇಶ್ವರ</strong>: ಒಡಿಶಾದ ಪುರಿ ಜಗನ್ನಾಥ ದೇವಾಲಯದ ಮೇಲೆ ಇಂದು (ಭಾನುವಾರ) ಮುಂಜಾನೆ ಡ್ರೋನ್ ಹಾರಾಟ ನಡೆಸಿದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>ಇಂದು ಮುಂಜಾನೆ 4.10ರ ವೇಳೆಗೆ ಜಗನ್ನಾಥನ ದೇವಸ್ಥಾನದ ಮೇಲೆ ಸುಮಾರು ಅರ್ಧ ಗಂಟೆಗಳ ಕಾಲ ಡ್ರೋನ್ ಹಾರಾಟ ನಡೆಸಿದೆ. ಇದರಿಂದ ಕೆಲ ಕಾಲ ಆತಂಕದ ಪರಿಸ್ಥಿತಿ ಎದುರಾಗಿತ್ತು. ಈ ಬಗ್ಗೆ ಎಚ್ಚೆತ್ತ ಪೊಲೀಸರು ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶವನ್ನು ಪರಿಶೀಲನೆ ನಡೆಸಿ, ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.ಒಡಿಶಾ: 46 ವರ್ಷಗಳ ಬಳಿಕ ತೆರೆದ ಪುರಿ ಜಗನ್ನಾಥ ದೇವಾಲಯದ ‘ರತ್ನಭಂಡಾರ’.ಪುರಿ ಜಗನ್ನಾಥ ದೇವಾಲಯದ ಕೀಲಿಕೈ ಮಾಹಿತಿ ಇದ್ದಲ್ಲಿ PM ಪತ್ತೆ ಮಾಡಲಿ: ಪಾಂಡಿಯನ್. <p>'ದೇವಸ್ಥಾನದ ಮೇಲೆ ಡ್ರೋನ್ ಹಾರಾಟ ನಡೆಸುವುದು ಕಾನೂನುಬಾಹಿರ ಹಾಗೂ ಸ್ವೀಕಾರಾರ್ಹವಲ್ಲ. ಭದ್ರತೆಯನ್ನು ಉಲ್ಲಂಘಿಸಿದ ವ್ಯಕ್ತಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದು ಕಾನೂನು ಸಚಿವ ಪೃಥ್ವಿರಾಜ್ ಹರಿಚಂದನ್ ಎಂದು ಹೇಳಿದ್ದಾರೆ.</p><p>'ಭವಿಷ್ಯದಲ್ಲಿ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲಾಗುವುದು. ದೇವಸ್ಥಾನದ ಸುತ್ತಲಿನ ನಾಲ್ಕು ಕಾವಲು ಗೋಪುರಗಳ ಬಳಿ ಭದ್ರತೆಯನ್ನು ಹೆಚ್ಚಿಸಲಾಗವುದು' ಎಂದು ಹರಿಚಂದನ್ ತಿಳಿಸಿದ್ದಾರೆ.</p><p>ಈ ಘಟನೆ ಸಂಬಂಧ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಲು ವಿಶೇಷ ತನಿಖಾ ತಂಡ ರಚಿಸಲಾಗಿದೆ. 'ಯಾರೋ ವ್ಲಾಗರ್ ಡ್ರೋನ್ ಅನ್ನು ದೇವಸ್ಥಾನದ ಮೇಲೆ ಹಾರಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ ಇದರ ಹಿಂದಿನ ಉದ್ದೇಶವನ್ನು ತಳ್ಳಿಹಾಕುವಂತಿಲ್ಲ' ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.</p>.ಪುರಿ ಜಗನ್ನಾಥ ದೇವಾಲಯದ ಸಮೀಪ ಪುರಾತನ ಮಠಗಳ ನೆಲಸಮ; ಟ್ವೀಟಿಗರ ಆಕ್ರೋಶ .ಹೊಸ ವರ್ಷ: ಪುರಿ ಜಗನ್ನಾಥ ದೇಗುಲಕ್ಕೆ ಭಕ್ತರ ದಂಡು.ಪುರಿ ಜಗನ್ನಾಥ ದೇವಾಲಯ | ರತ್ನ ಭಂಡಾರದ ತಾಂತ್ರಿಕ ಸಮೀಕ್ಷೆ ಆರಂಭಿಸಿದ ಎಎಸ್ಐ.ಪುರಿ ಜಗನ್ನಾಥ ದೇಗುಲದ ಜಾತ್ರೆ ವೇಳೆ ಪಟಾಕಿ ಸ್ಫೋಟ: ಮೃತರ ಸಂಖ್ಯೆ 11ಕ್ಕೆ ಏರಿಕೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>