<p><strong>ಗಾಂಧಿನಗರ:</strong> ದೇಶದ ಸುಮಾರು ಶೇಕಡ 50ರಷ್ಟು ಪ್ರದೇಶ ಸದ್ಯ ಬರ ಪರಿಸ್ಥಿತಿ ಎದುರಿಸುತ್ತಿದೆ ಎಂದು ಇಲ್ಲಿನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಭಾರತೀಯ ಹವಾಮಾನ ಇಲಾಖೆಯಿಂದ ಮಳೆ ವಿವರ ಸೇರಿದಂತೆ ವಿವಿಧ ಸ್ಥಳಗಳ ಸಮಗ್ರ ಮಾಹಿತಿ ಹಾಗೂ ಮಣ್ಣಿನ ತೇವಾಂಶ ಮತ್ತು ಇತರ ಅಂಶಗಳ ಆಧಾರದ ಮೇಲೆ ಬರ ಪರಿಸ್ಥಿತಿಯನ್ನು ವಿಜ್ಞಾನಿಗಳು ವಿಶ್ಲೇಷಣೆ ನಡೆಸಿದ್ದಾರೆ.</p>.<p>'ಬರದಿಂದಾಗಿ ಈ ಬಾರಿಯ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಗಂಭೀರವಾಗಲಿದೆ' ಎಂದು ಸಹ ಪ್ರಾಧ್ಯಾಪಕ ವಿಮಲ್ ಮಿಶ್ರಾ ವಿವರಿಸಿದ್ದಾರೆ.</p>.<p>‘ದೇಶದ ಶೇಕಡ 47ರಷ್ಟು ಪ್ರದೇಶದಲ್ಲಿ ಬರ ಇದೆ. ಶೇಕಡ 16ರಷ್ಟು ಭಾಗದಲ್ಲಿ ಭೀಕರ ಪರಿಸ್ಥಿತಿ ಇದೆ. ಅರುಣಾಚಲ ಪ್ರದೇಶದಲ್ಲಿ ಈ ಬಾರಿ ಉತ್ತಮ ಮಳೆಯಾಗಿಲ್ಲ. ಜಾರ್ಖಂಡ್, ಆಂಧ್ರಪ್ರದೇಶದ ದಕ್ಷಿಣ ಭಾಗ, ಗುಜರಾತ್ ಮತ್ತು ತಮಿಳುನಾಡಿನ ಉತ್ತರ ಭಾಗಗಳು ಬರ ಪರಿಸ್ಥಿತಿ ಎದುರಿಸುತ್ತಿವೆ’ ಎಂದು ಮಿಶ್ರಾ ತಿಳಿಸಿದ್ದಾರೆ.</p>.<p>‘ಸತತ ಬರದಿಂದ ದೇಶದಲ್ಲಿನ ಅಂತರ್ಜಲ ಕುಸಿಯಲಿದೆ. ಅಂತರ್ಜಲ ಮರುಪೂರಣಕ್ಕೆ ಉತ್ತೇಜನ ನೀಡುತ್ತಿಲ್ಲ. ಬದಲಾಗಿ ಭೂಮಿಯಿಂದ ಅಪಾರ ಪ್ರಮಾಣದಲ್ಲಿ ನೀರು ಪಡೆಯುವ ಕಾರ್ಯದಲ್ಲೇ ಹೆಚ್ಚು ತೊಡಗಿದ್ದೇವೆ. ಬೇಜವಾಬ್ದಾರಿಯಿಂದ ಅಂತರ್ಜಲವನ್ನು ಬಳಸಲಾಗುತ್ತಿದೆ. ಇದರಿಂದ ನೀರಿಗೆ ಹಾಹಾಕಾರ ಉಂಟಾಗುತ್ತದೆ.</p>.<p>ಬರದಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಬಡವರು ಮತ್ತು ಸಣ್ಣ ರೈತರು ಅತಿ ಹೆಚ್ಚು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದು ವಿವರಿಸಿದ್ದಾರೆ.</p>.<p><strong>ಅಂತರ್ಜಲ ದುರುಪಯೋಗ ತಡೆಗೆ ಸಲಹೆ</strong></p>.<p>ಅತಿ ಹೆಚ್ಚು ನೀರು ಬೇಕಾಗುವ ಬೆಳೆಗಳಿಗೆ ನಿರ್ಬಂಧ ವಿಧಿಸಬೇಕು. ಉದಾಹರಣೆಗೆ ಪಂಜಾಬ್ನಲ್ಲಿ ಭತ್ತ ಬೆಳೆಯುವುದನ್ನು ನಿಲ್ಲಿಸಬೇಕು. ಜತೆಗೆ ಅಂತರ್ಜಲ ಸಂರಕ್ಷಣೆಗೆ ಸರ್ಕಾರ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಮಿಶ್ರಾ ಸಲಹೆ ನೀಡಿದ್ದಾರೆ.</p>.<p>* ಅಂತರ್ಜಲವನ್ನು ಮರುಪೂರಣ ಮಾಡದಿದ್ದರೆ ಮತ್ತು ಸುಸ್ಥಿರವಾಗಿ ನಿರ್ವಹಣೆ ಮಾಡದಿದ್ದರೆ ಮುಂದಿನ ವರ್ಷಗಳಲ್ಲಿ ಸಂಕಷ್ಟಕ್ಕೆ ಸಿಲುಕಲಿದ್ದೇವೆ<br /><strong>-ವಿಮಲ್ ಮಿಶ್ರಾ,</strong> ಐಐಟಿ ಸಹ ಪ್ರಾಧ್ಯಾಪಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಾಂಧಿನಗರ:</strong> ದೇಶದ ಸುಮಾರು ಶೇಕಡ 50ರಷ್ಟು ಪ್ರದೇಶ ಸದ್ಯ ಬರ ಪರಿಸ್ಥಿತಿ ಎದುರಿಸುತ್ತಿದೆ ಎಂದು ಇಲ್ಲಿನ ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ವಿಜ್ಞಾನಿಗಳು ತಿಳಿಸಿದ್ದಾರೆ.</p>.<p>ಭಾರತೀಯ ಹವಾಮಾನ ಇಲಾಖೆಯಿಂದ ಮಳೆ ವಿವರ ಸೇರಿದಂತೆ ವಿವಿಧ ಸ್ಥಳಗಳ ಸಮಗ್ರ ಮಾಹಿತಿ ಹಾಗೂ ಮಣ್ಣಿನ ತೇವಾಂಶ ಮತ್ತು ಇತರ ಅಂಶಗಳ ಆಧಾರದ ಮೇಲೆ ಬರ ಪರಿಸ್ಥಿತಿಯನ್ನು ವಿಜ್ಞಾನಿಗಳು ವಿಶ್ಲೇಷಣೆ ನಡೆಸಿದ್ದಾರೆ.</p>.<p>'ಬರದಿಂದಾಗಿ ಈ ಬಾರಿಯ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಗಂಭೀರವಾಗಲಿದೆ' ಎಂದು ಸಹ ಪ್ರಾಧ್ಯಾಪಕ ವಿಮಲ್ ಮಿಶ್ರಾ ವಿವರಿಸಿದ್ದಾರೆ.</p>.<p>‘ದೇಶದ ಶೇಕಡ 47ರಷ್ಟು ಪ್ರದೇಶದಲ್ಲಿ ಬರ ಇದೆ. ಶೇಕಡ 16ರಷ್ಟು ಭಾಗದಲ್ಲಿ ಭೀಕರ ಪರಿಸ್ಥಿತಿ ಇದೆ. ಅರುಣಾಚಲ ಪ್ರದೇಶದಲ್ಲಿ ಈ ಬಾರಿ ಉತ್ತಮ ಮಳೆಯಾಗಿಲ್ಲ. ಜಾರ್ಖಂಡ್, ಆಂಧ್ರಪ್ರದೇಶದ ದಕ್ಷಿಣ ಭಾಗ, ಗುಜರಾತ್ ಮತ್ತು ತಮಿಳುನಾಡಿನ ಉತ್ತರ ಭಾಗಗಳು ಬರ ಪರಿಸ್ಥಿತಿ ಎದುರಿಸುತ್ತಿವೆ’ ಎಂದು ಮಿಶ್ರಾ ತಿಳಿಸಿದ್ದಾರೆ.</p>.<p>‘ಸತತ ಬರದಿಂದ ದೇಶದಲ್ಲಿನ ಅಂತರ್ಜಲ ಕುಸಿಯಲಿದೆ. ಅಂತರ್ಜಲ ಮರುಪೂರಣಕ್ಕೆ ಉತ್ತೇಜನ ನೀಡುತ್ತಿಲ್ಲ. ಬದಲಾಗಿ ಭೂಮಿಯಿಂದ ಅಪಾರ ಪ್ರಮಾಣದಲ್ಲಿ ನೀರು ಪಡೆಯುವ ಕಾರ್ಯದಲ್ಲೇ ಹೆಚ್ಚು ತೊಡಗಿದ್ದೇವೆ. ಬೇಜವಾಬ್ದಾರಿಯಿಂದ ಅಂತರ್ಜಲವನ್ನು ಬಳಸಲಾಗುತ್ತಿದೆ. ಇದರಿಂದ ನೀರಿಗೆ ಹಾಹಾಕಾರ ಉಂಟಾಗುತ್ತದೆ.</p>.<p>ಬರದಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ. ಬಡವರು ಮತ್ತು ಸಣ್ಣ ರೈತರು ಅತಿ ಹೆಚ್ಚು ಸಂಕಷ್ಟಕ್ಕೆ ಸಿಲುಕಲಿದ್ದಾರೆ’ ಎಂದು ವಿವರಿಸಿದ್ದಾರೆ.</p>.<p><strong>ಅಂತರ್ಜಲ ದುರುಪಯೋಗ ತಡೆಗೆ ಸಲಹೆ</strong></p>.<p>ಅತಿ ಹೆಚ್ಚು ನೀರು ಬೇಕಾಗುವ ಬೆಳೆಗಳಿಗೆ ನಿರ್ಬಂಧ ವಿಧಿಸಬೇಕು. ಉದಾಹರಣೆಗೆ ಪಂಜಾಬ್ನಲ್ಲಿ ಭತ್ತ ಬೆಳೆಯುವುದನ್ನು ನಿಲ್ಲಿಸಬೇಕು. ಜತೆಗೆ ಅಂತರ್ಜಲ ಸಂರಕ್ಷಣೆಗೆ ಸರ್ಕಾರ ಕಠಿಣ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಮಿಶ್ರಾ ಸಲಹೆ ನೀಡಿದ್ದಾರೆ.</p>.<p>* ಅಂತರ್ಜಲವನ್ನು ಮರುಪೂರಣ ಮಾಡದಿದ್ದರೆ ಮತ್ತು ಸುಸ್ಥಿರವಾಗಿ ನಿರ್ವಹಣೆ ಮಾಡದಿದ್ದರೆ ಮುಂದಿನ ವರ್ಷಗಳಲ್ಲಿ ಸಂಕಷ್ಟಕ್ಕೆ ಸಿಲುಕಲಿದ್ದೇವೆ<br /><strong>-ವಿಮಲ್ ಮಿಶ್ರಾ,</strong> ಐಐಟಿ ಸಹ ಪ್ರಾಧ್ಯಾಪಕ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>