ನವದೆಹಲಿ: ರಾಷ್ಟ್ರಪತಿ ಹುದ್ದೆಗೇರುವುದಕ್ಕೂ ಮುನ್ನ ದ್ರೌಪದಿ ಮುರ್ಮು ಅವರು ಹೆಚ್ಚಾಗಿ ಮೊಬೈಲ್ ಬಳಸುತ್ತಿರಲಿಲ್ಲ. ಈ ಕಾರಣಕ್ಕಾಗಿ, ರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಂತೆ ಮಾಹಿತಿ ನೀಡಲು ಮಾಡಿದ್ದ ಕರೆಯನ್ನು ಅವರು ಸ್ವೀಕರಿಸಿರಲಿಲ್ಲ. ಕೊನೆಗೆ, ಪ್ರಧಾನ ಮಂತ್ರಿ ಕಚೇರಿಯಿಂದ ಕರೆ ಬಂದಿದ್ದನ್ನು ಅವರ ಮಾಜಿ ವಿಶೇಷ ಕರ್ತವ್ಯ ಅಧಿಕಾರಿಯೇ ಖುದ್ದಾಗಿ ಹೋಗಿ ತಿಳಿಸಿದ್ದರು.