<p><strong>ನವದೆಹಲಿ</strong>: ಪಂಜಾಬಿನ ಜಲಂಧರ್ ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆ ಹಾಗೂ ಮಾದಕ ವಸ್ತು ಕಳ್ಳ ಸಾಗಣೆ ಪ್ರಕರಣದ ಅಪರಾಧಿಗೆ 3.5 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ದಂಡ ವಿಧಿಸಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.</p><p>ಹಣ ಅಕ್ರಮ ವರ್ಗಾವಣೆ ಪ್ರಕರಣ ಕಾಯ್ದೆಯಡಿ (PMLA) ಶಿಕ್ಷೆ ವಿಧಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನವದೀಪ್ ಸಿಂಗ್ ಎಂಬಾತನನ್ನು ಅಪರಾಧಿ ಎಂದು ಆಗಸ್ಟ್ 17ರಂದು ತೀರ್ಪು ನೀಡಿತ್ತು. ಒಂದು ವೇಳೆ ದಂಡ ಪಾವತಿಸದಿದ್ದರೆ, ಶಿಕ್ಷೆಯನ್ನು ಮೂರು ತಿಂಗಳು ವಿಸ್ತಾರಿಸಲಾಗುವುದು ಎಂದು ಎಚ್ಚರಿಸಿದೆ.</p><p>ಈ ಹಿಂದೆ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದ್ದ ₹9 ಲಕ್ಷ ನಗದು ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಲಾಗಿದೆ.</p><p>ನವದೀಪ್ ಸಿಂಗ್ ಹಾಗೂ ಇತರರ ವಿರುದ್ಧ ಪಂಜಾಬ್ ಪೊಲೀಸರು 2017ರಲ್ಲಿ, ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.</p><p>ಪೊಲೀಸ್ ತನಿಖೆಯ ಪ್ರಕಾರ, ನವದೀಪ್ ಸಿಂಗ್ ಹಾಗೂ ಈಗಾಗಲೇ ಮೃತಪಟ್ಟಿರುವ ಸರಬ್ಜಿತ್ ಸಿಂಗ್ ಮತ್ತು ಪಾಲ್ ಸಿಂಗ್, ಕೆನಡಾದ ಪ್ರಜೆ ರೂಪಿಂದರ್ ಸಿಂಗ್ ಅಲಿಯಾಸ್ ರಾಬ್ ಸಿಧು ಜೊತೆಗೂಡಿ ಹೆರಾಯಿನ್ ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಂಜಾಬಿನ ಜಲಂಧರ್ ವಿಶೇಷ ನ್ಯಾಯಾಲಯವು ಹಣ ಅಕ್ರಮ ವರ್ಗಾವಣೆ ಹಾಗೂ ಮಾದಕ ವಸ್ತು ಕಳ್ಳ ಸಾಗಣೆ ಪ್ರಕರಣದ ಅಪರಾಧಿಗೆ 3.5 ವರ್ಷ ಕಠಿಣ ಜೈಲು ಶಿಕ್ಷೆ, 50 ಸಾವಿರ ದಂಡ ವಿಧಿಸಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.</p><p>ಹಣ ಅಕ್ರಮ ವರ್ಗಾವಣೆ ಪ್ರಕರಣ ಕಾಯ್ದೆಯಡಿ (PMLA) ಶಿಕ್ಷೆ ವಿಧಿಸಿದೆ.</p><p>ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ನವದೀಪ್ ಸಿಂಗ್ ಎಂಬಾತನನ್ನು ಅಪರಾಧಿ ಎಂದು ಆಗಸ್ಟ್ 17ರಂದು ತೀರ್ಪು ನೀಡಿತ್ತು. ಒಂದು ವೇಳೆ ದಂಡ ಪಾವತಿಸದಿದ್ದರೆ, ಶಿಕ್ಷೆಯನ್ನು ಮೂರು ತಿಂಗಳು ವಿಸ್ತಾರಿಸಲಾಗುವುದು ಎಂದು ಎಚ್ಚರಿಸಿದೆ.</p><p>ಈ ಹಿಂದೆ ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿದ್ದ ₹9 ಲಕ್ಷ ನಗದು ಹಣವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಲಾಗಿದೆ.</p><p>ನವದೀಪ್ ಸಿಂಗ್ ಹಾಗೂ ಇತರರ ವಿರುದ್ಧ ಪಂಜಾಬ್ ಪೊಲೀಸರು 2017ರಲ್ಲಿ, ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (ಎನ್ಡಿಪಿಎಸ್) ಕಾಯ್ದೆಯ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.</p><p>ಪೊಲೀಸ್ ತನಿಖೆಯ ಪ್ರಕಾರ, ನವದೀಪ್ ಸಿಂಗ್ ಹಾಗೂ ಈಗಾಗಲೇ ಮೃತಪಟ್ಟಿರುವ ಸರಬ್ಜಿತ್ ಸಿಂಗ್ ಮತ್ತು ಪಾಲ್ ಸಿಂಗ್, ಕೆನಡಾದ ಪ್ರಜೆ ರೂಪಿಂದರ್ ಸಿಂಗ್ ಅಲಿಯಾಸ್ ರಾಬ್ ಸಿಧು ಜೊತೆಗೂಡಿ ಹೆರಾಯಿನ್ ಕಳ್ಳಸಾಗಣೆ ಮಾಡುತ್ತಿದ್ದರು ಎಂದು ಜಾರಿ ನಿರ್ದೇಶನಾಲಯ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>