<p><strong>ನವದೆಹಲಿ:</strong> ದೆಹಲಿಯಲ್ಲಿ ಶನಿವಾರ ಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು (ಡ್ರೈ ರನ್) ಆರಂಭಿಸಲಾಗಿದ್ದು, ಇದಕ್ಕಾಗಿ ಮೂರು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದೆಹಲಿಯ ಶಹದಾರದಲ್ಲಿರುವ ಗುರು ತೇಜ್ ಬಹದ್ದೂರ್ ಆಸ್ಪತ್ರೆ, ದರಿಯಗಂಜ್ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ದ್ವಾರಕದಲ್ಲಿರುವ ವೆಂಕಟೇಶ್ವರ ಆಸ್ಪತ್ರೆಯನ್ನು ಕೋವಿಡ್ ಲಸಿಕೆಯ ಪೂರ್ವಾಭ್ಯಾಸಕ್ಕಾಗಿ ಆಯ್ಕೆ ಮಾಡಲಾಗಿದೆ.</p>.<p>ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.</p>.<p>ಕೋವಿಡ್ ಲಸಿಕೆ ಲಭ್ಯವಾಗುವವರೆಗೂ ಅಸ್ಸಾಂನಲ್ಲಿಯೂ ನಿಯಮಿತವಾಗಿ ಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ</p>.<p>‘ಲಸಿಕೆ ನಮಗೆ ಸಿಗುವುದಕ್ಕಿಂತ ಮುಂಚಿತವೇ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದ್ಧೇವೆ. ಜನರಿಗೆ ಲಸಿಕೆ ನೀಡುವಾಗ ಯಾವುದೇ ಕೊರತೆಗಳು ಉಂಟಾಗಬಾರದು’ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ನನಿರ್ದೇಶಕ ಎಸ್. ಲಕ್ಷ್ಮಣನ್ ತಿಳಿಸಿದ್ದಾರೆ.</p>.<p>ದೇಶದಾದ್ಯಂತ ಜನವರಿ 2 ರಿಂದಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. ಯೋಜನೆ ಮತ್ತು ಅನುಷ್ಠಾನದ ನಡುವಿನ ಸಂಪರ್ಕ ಮತ್ತು ಸವಾಲುಗಳ ಬಗ್ಗೆ ತಿಳಿಯಲು ಈ ಪೂರ್ವಾಭ್ಯಾಸವನ್ನು ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿಯಲ್ಲಿ ಶನಿವಾರ ಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು (ಡ್ರೈ ರನ್) ಆರಂಭಿಸಲಾಗಿದ್ದು, ಇದಕ್ಕಾಗಿ ಮೂರು ಸ್ಥಳಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ದೆಹಲಿಯ ಶಹದಾರದಲ್ಲಿರುವ ಗುರು ತೇಜ್ ಬಹದ್ದೂರ್ ಆಸ್ಪತ್ರೆ, ದರಿಯಗಂಜ್ನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ದ್ವಾರಕದಲ್ಲಿರುವ ವೆಂಕಟೇಶ್ವರ ಆಸ್ಪತ್ರೆಯನ್ನು ಕೋವಿಡ್ ಲಸಿಕೆಯ ಪೂರ್ವಾಭ್ಯಾಸಕ್ಕಾಗಿ ಆಯ್ಕೆ ಮಾಡಲಾಗಿದೆ.</p>.<p>ದೆಹಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಲಸಿಕೆ ಸಂಗ್ರಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.</p>.<p>ಕೋವಿಡ್ ಲಸಿಕೆ ಲಭ್ಯವಾಗುವವರೆಗೂ ಅಸ್ಸಾಂನಲ್ಲಿಯೂ ನಿಯಮಿತವಾಗಿ ಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ</p>.<p>‘ಲಸಿಕೆ ನಮಗೆ ಸಿಗುವುದಕ್ಕಿಂತ ಮುಂಚಿತವೇ ಅದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದ್ಧೇವೆ. ಜನರಿಗೆ ಲಸಿಕೆ ನೀಡುವಾಗ ಯಾವುದೇ ಕೊರತೆಗಳು ಉಂಟಾಗಬಾರದು’ ಎಂದು ರಾಷ್ಟ್ರೀಯ ಆರೋಗ್ಯ ಮಿಷನ್ನನಿರ್ದೇಶಕ ಎಸ್. ಲಕ್ಷ್ಮಣನ್ ತಿಳಿಸಿದ್ದಾರೆ.</p>.<p>ದೇಶದಾದ್ಯಂತ ಜನವರಿ 2 ರಿಂದಕೋವಿಡ್ ಲಸಿಕೆಯ ಪೂರ್ವಾಭ್ಯಾಸವನ್ನು ನಡೆಸಲು ಕೇಂದ್ರ ಸರ್ಕಾರ ಸೂಚಿಸಿದೆ. ಯೋಜನೆ ಮತ್ತು ಅನುಷ್ಠಾನದ ನಡುವಿನ ಸಂಪರ್ಕ ಮತ್ತು ಸವಾಲುಗಳ ಬಗ್ಗೆ ತಿಳಿಯಲು ಈ ಪೂರ್ವಾಭ್ಯಾಸವನ್ನು ನಡೆಸಲಾಗುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>