<p><strong>ನವದೆಹಲಿ:</strong> ಕೋವಿಡ್ ಲಸಿಕೆ ನೀಡುವ ತಾಲೀಮು ಜ. 2ರಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ.</p>.<p>ಬರುವ ದಿನಗಳಲ್ಲಿ ಲಸಿಕೆ ನೀಡುವ ಬೃಹತ್ ಲಸಿಕಾ ಕಾರ್ಯಕ್ರಮ ನಡೆಯುವುದು. ಅದಕ್ಕೂ ಮುನ್ನ, ಲಸಿಕೆ ನೀಡುವಾಗ ಎದುರಾಗಬಹುದಾದ ಸಮಸ್ಯೆಗಳು, ಯೋಜನೆಯಲ್ಲಿ ಕಂಡುಬರುವ ನ್ಯೂನತೆಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ತಾಲೀಮು ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.</p>.<p>ಲಸಿಕೆ ನೀಡುವ ಕಾರ್ಯಕ್ರಮ ಅನುಷ್ಠಾನಕ್ಕಾಗಿ ‘ಕೋ–ವಿನ್’ ಎಂಬ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ ಬಳಕೆ ಎಷ್ಟರ ಮಟ್ಟಿಗೆ ಕಾರ್ಯಸಾಧು ಎಂಬುದನ್ನು ತಿಳಿದುಕೊಳ್ಳಲು ಸಹ ಈ ತಾಲೀಮು ನೆರವಾಗಲಿದೆ. ಮುಂದಿನ ದಿನಗಳಲ್ಲಿ ಬೃಹತ್ ಲಸಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ತುಂಬಲಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಈ ತಾಲೀಮು ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಲು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದರು. ಸಚಿವಾಲಯದ ಹಿರಿಯ ಅಧಿಕಾರಿಗಳು, ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಕೋವಿಡ್ ಲಸಿಕೆ ನೀಡುವ ತಾಲೀಮು ಜ. 2ರಂದು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಯಲಿದೆ.</p>.<p>ಬರುವ ದಿನಗಳಲ್ಲಿ ಲಸಿಕೆ ನೀಡುವ ಬೃಹತ್ ಲಸಿಕಾ ಕಾರ್ಯಕ್ರಮ ನಡೆಯುವುದು. ಅದಕ್ಕೂ ಮುನ್ನ, ಲಸಿಕೆ ನೀಡುವಾಗ ಎದುರಾಗಬಹುದಾದ ಸಮಸ್ಯೆಗಳು, ಯೋಜನೆಯಲ್ಲಿ ಕಂಡುಬರುವ ನ್ಯೂನತೆಗಳನ್ನು ಗುರುತಿಸಿ, ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ತಾಲೀಮು ನಡೆಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಗುರುವಾರ ತಿಳಿಸಿದೆ.</p>.<p>ಲಸಿಕೆ ನೀಡುವ ಕಾರ್ಯಕ್ರಮ ಅನುಷ್ಠಾನಕ್ಕಾಗಿ ‘ಕೋ–ವಿನ್’ ಎಂಬ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದೆ. ಈ ಆ್ಯಪ್ ಬಳಕೆ ಎಷ್ಟರ ಮಟ್ಟಿಗೆ ಕಾರ್ಯಸಾಧು ಎಂಬುದನ್ನು ತಿಳಿದುಕೊಳ್ಳಲು ಸಹ ಈ ತಾಲೀಮು ನೆರವಾಗಲಿದೆ. ಮುಂದಿನ ದಿನಗಳಲ್ಲಿ ಬೃಹತ್ ಲಸಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಹಮ್ಮಿಕೊಳ್ಳಲು ಸಿಬ್ಬಂದಿಯಲ್ಲಿ ಆತ್ಮವಿಶ್ವಾಸ ತುಂಬಲಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.</p>.<p>ಈ ತಾಲೀಮು ಕಾರ್ಯಕ್ರಮದ ಸಿದ್ಧತೆಯನ್ನು ಪರಿಶೀಲಿಸಲು ಆರೋಗ್ಯ ಸಚಿವಾಲಯದ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರು ಗುರುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದರು. ಸಚಿವಾಲಯದ ಹಿರಿಯ ಅಧಿಕಾರಿಗಳು, ಎಲ್ಲ ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>