<p><strong>ಮುಂಬೈ: </strong>ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಸೇವೆ ಸೇರಿದಂತೆ ಸೂಕ್ತ ಸೌಲಭ್ಯಗಳು ದೊರೆಯದೆ ರೋಗಿಗಳು ತೊಂದರೆಗೊಳಗಾದ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದರೂ ಸರ್ಕಾರಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಇದೀಗ ಇಂತಹ ಮತ್ತೊಂದು ಪ್ರಕರಣ ಮಹಾರಾಷ್ಟ್ರದ ನಂದದ್ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.</p>.<p>ಸ್ಟ್ರೆಚರ್ ಸೌಲಭ್ಯ ದೊರೆಯದ ಕಾರಣ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕರು ಬೆಡ್ಶೀಟ್ನಲ್ಲಿ ಕೂರಿಸಿ ಎಳೆದುಕೊಂಡು ಹೋಗಿರುವ ಅಮಾನವೀಯ ಘಟನೆ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>ಮೇ. 05ರಂದು <strong><a href="https://www.prajavani.net/news/article/2017/06/02/496016.html" target="_blank">ಡೆಹ್ರಾಡೂನ್ನ ಸರ್ಕಾರಿ ಆಸ್ಪತ್ರೆ</a></strong>ಯಲ್ಲಿ ಇಂತದೇ ಪ್ರಕರಣ ವರದಿಯಾಗಿತ್ತು. ಆಸ್ಪತ್ರೆ ಸಿಬ್ಬಂದಿಸ್ಟ್ರೆಚರ್ ನೀಡಲು ನಿರಾಕರಿಸಿದ ಕಾರಣ ಅನಾರೋಗ್ಯದಿಂದ ನರಳುತ್ತಿದ್ದ ಸಹೋದರನನ್ನು ವ್ಯಕ್ತಿಯೊಬ್ಬರು ಬೆನ್ನ ಮೇಲೆ ಹೊತ್ತೊಯ್ದಿದ್ದರು.</p>.<p>ಕರ್ನಾಟಕದಲ್ಲಿಯೂ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ.</p>.<p><a href="https://www.prajavani.net/news/article/2017/06/02/496016.html" target="_blank"><strong>ಶಿವಮೊಗ್ಗದಮೆಗ್ಗಾನ್ ಆಸ್ಪತ್ರೆ</strong></a>ಯಲ್ಲಿಕಳದೆ ವರ್ಷ ಜೂನ್ ತಿಂಗಳಲ್ಲಿ ಘಟನೆ ನಡೆದಿತ್ತು. ಎಕ್ಸ್ರೇ ಮಾಡಿಸುವ ಕೊಠಡಿಗೆ ಪತಿಯನ್ನು ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ ಸ್ಟ್ರೆಚರ್ ನೀಡದ ಕಾರಣ ವೃದ್ದೆಯೊಬ್ಬರು ಪತಿಯ ಕಾಲು ಹಿಡಿದುಕೊಂಡು ಎಳೆದುಕೊಂಡು ಹೋಗಿದ್ದರು.</p>.<p>ಸಿಸಿಟಿವಿಯಲ್ಲಿ ಸೆರೆಯಾಗಿದ್ದಈ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.</p>.<p><strong><a href="https://www.prajavani.net/news/article/2017/10/10/525051.html" target="_blank">ಹೊಸಪೇಟೆ ಸರ್ಕಾರಿ ಆಸ್ಪತ್ರೆ</a></strong>ಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದಕಾರಣ ತನ್ನ ಪೋಷಕರಿಬ್ಬರೂ ಒಂದೇ ದಿನ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಯುವಕನೊಬ್ಬ, ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರತಿಭಟಿಸಿ ತಾಯಿ ಶವವನ್ನು ಹೆಗಲ ಮೇಲೆಯೇ ಹೊತ್ತು ಹೊರನಡೆದಿದ್ದರು. ಈ ಘಟನೆ2017ರ ಅಕ್ಟೋಬರ್ನಲ್ಲಿ ಬೆಳಕಿಗೆ ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ: </strong>ಸರ್ಕಾರಿ ಆಸ್ಪತ್ರೆಗಳಲ್ಲಿ ಆಂಬುಲೆನ್ಸ್ ಸೇವೆ ಸೇರಿದಂತೆ ಸೂಕ್ತ ಸೌಲಭ್ಯಗಳು ದೊರೆಯದೆ ರೋಗಿಗಳು ತೊಂದರೆಗೊಳಗಾದ ಪ್ರಕರಣಗಳು ನಿರಂತರವಾಗಿ ವರದಿಯಾಗುತ್ತಿದ್ದರೂ ಸರ್ಕಾರಗಳು ಎಚ್ಚೆತ್ತುಕೊಳ್ಳುತ್ತಿಲ್ಲ. ಇದೀಗ ಇಂತಹ ಮತ್ತೊಂದು ಪ್ರಕರಣ ಮಹಾರಾಷ್ಟ್ರದ ನಂದದ್ ಸರ್ಕಾರಿ ಆಸ್ಪತ್ರೆಯಲ್ಲಿ ವರದಿಯಾಗಿದೆ.</p>.<p>ಸ್ಟ್ರೆಚರ್ ಸೌಲಭ್ಯ ದೊರೆಯದ ಕಾರಣ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯನ್ನು ಸಂಬಂಧಿಕರು ಬೆಡ್ಶೀಟ್ನಲ್ಲಿ ಕೂರಿಸಿ ಎಳೆದುಕೊಂಡು ಹೋಗಿರುವ ಅಮಾನವೀಯ ಘಟನೆ ಗುರುವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.</p>.<p>ಮೇ. 05ರಂದು <strong><a href="https://www.prajavani.net/news/article/2017/06/02/496016.html" target="_blank">ಡೆಹ್ರಾಡೂನ್ನ ಸರ್ಕಾರಿ ಆಸ್ಪತ್ರೆ</a></strong>ಯಲ್ಲಿ ಇಂತದೇ ಪ್ರಕರಣ ವರದಿಯಾಗಿತ್ತು. ಆಸ್ಪತ್ರೆ ಸಿಬ್ಬಂದಿಸ್ಟ್ರೆಚರ್ ನೀಡಲು ನಿರಾಕರಿಸಿದ ಕಾರಣ ಅನಾರೋಗ್ಯದಿಂದ ನರಳುತ್ತಿದ್ದ ಸಹೋದರನನ್ನು ವ್ಯಕ್ತಿಯೊಬ್ಬರು ಬೆನ್ನ ಮೇಲೆ ಹೊತ್ತೊಯ್ದಿದ್ದರು.</p>.<p>ಕರ್ನಾಟಕದಲ್ಲಿಯೂ ಇಂತಹ ಹಲವು ಪ್ರಕರಣಗಳು ವರದಿಯಾಗಿವೆ.</p>.<p><a href="https://www.prajavani.net/news/article/2017/06/02/496016.html" target="_blank"><strong>ಶಿವಮೊಗ್ಗದಮೆಗ್ಗಾನ್ ಆಸ್ಪತ್ರೆ</strong></a>ಯಲ್ಲಿಕಳದೆ ವರ್ಷ ಜೂನ್ ತಿಂಗಳಲ್ಲಿ ಘಟನೆ ನಡೆದಿತ್ತು. ಎಕ್ಸ್ರೇ ಮಾಡಿಸುವ ಕೊಠಡಿಗೆ ಪತಿಯನ್ನು ಕರೆದೊಯ್ಯಲು ಆಸ್ಪತ್ರೆಯ ಸಿಬ್ಬಂದಿ ಸ್ಟ್ರೆಚರ್ ನೀಡದ ಕಾರಣ ವೃದ್ದೆಯೊಬ್ಬರು ಪತಿಯ ಕಾಲು ಹಿಡಿದುಕೊಂಡು ಎಳೆದುಕೊಂಡು ಹೋಗಿದ್ದರು.</p>.<p>ಸಿಸಿಟಿವಿಯಲ್ಲಿ ಸೆರೆಯಾಗಿದ್ದಈ ದೃಶ್ಯಾವಳಿ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.</p>.<p><strong><a href="https://www.prajavani.net/news/article/2017/10/10/525051.html" target="_blank">ಹೊಸಪೇಟೆ ಸರ್ಕಾರಿ ಆಸ್ಪತ್ರೆ</a></strong>ಯಲ್ಲಿ ಸಮರ್ಪಕ ಚಿಕಿತ್ಸೆ ಸಿಗದಕಾರಣ ತನ್ನ ಪೋಷಕರಿಬ್ಬರೂ ಒಂದೇ ದಿನ ಮೃತಪಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದ ಯುವಕನೊಬ್ಬ, ಆಸ್ಪತ್ರೆ ಸಿಬ್ಬಂದಿ ವಿರುದ್ಧ ಪ್ರತಿಭಟಿಸಿ ತಾಯಿ ಶವವನ್ನು ಹೆಗಲ ಮೇಲೆಯೇ ಹೊತ್ತು ಹೊರನಡೆದಿದ್ದರು. ಈ ಘಟನೆ2017ರ ಅಕ್ಟೋಬರ್ನಲ್ಲಿ ಬೆಳಕಿಗೆ ಬಂದಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>