<p><strong>ಕೋಲ್ಕತ್ತ</strong>: ದುರ್ಗಾಪುರದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ತಂದೆ ಬುಧವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷಮೆಯಾಚಿಸಿದ್ದಾರೆ.</p>.<p>‘ಮಮತಾ ನಮಗೆ ತಾಯಿಯಂತೆ. ನಿಮ್ಮ ವಿರುದ್ಧ ನಾನು ಏನಾದರೂ ತಪ್ಪು ಮಾತನಾಡಿದ್ದರೆ ನನ್ನನ್ನು ಕ್ಷಮಿಸಿ’ ಎಂದಿರುವ ಅವರು, ‘ನಮ್ಮ ಪುತ್ರಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಮಮತಾ ಅವರ ಬಳಿ ಮನವಿ ಮಾಡಿದ್ದಾರೆ. </p>.<p>‘ನಾನು ಅವರ ಪಾದಗಳಿಗೆ ಸಹಸ್ರ ಪ್ರಣಾಮಗಳನ್ನು ಸಲ್ಲಿಸುತ್ತೇನೆ ಹಾಗೂ ನನ್ನ ಮಗಳಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ’ ಎಂದು ಅವರು ಬುಧವಾರ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. </p>.<p>‘ಮಹಿಳೆಯರು ರಾತ್ರಿ ವೇಳೆ ಹೊರಗೆ ಹೋಗಬಾರದು’ ಎಂಬ ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಸಂತ್ರಸ್ತೆಯ ತಂದೆ ಟೀಕಿಸಿದ್ದರು. ‘ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತವಲ್ಲ. ಅಲ್ಲಿ ಔರಂಗಜೇಬನ ಆಡಳಿತವಿದೆ. ನಾನು ಮಗಳನ್ನು ಅಲ್ಲಿಂದ ಒಡಿಶಾಗೆ ಮರಳಿ ಕರೆತರುತ್ತೇನೆ. ಅವಳ ಜೀವ ನಮಗೆ ಮುಖ್ಯ, ಆ ನಂತರ ಉದ್ಯೋಗ’ ಎಂದು ಅವರು ಸೋಮವಾರ ಹೇಳಿದ್ದರು. </p>.<p>‘ವೈದ್ಯರು ಹೇಳಿದ ಮೇಲಷ್ಟೇ ನಾನು ಮಗಳನ್ನು ಕರೆತರುತ್ತೇನೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸುತ್ತೇನೆ. ಆದರೆ, ಈ ನಿರ್ಧಾರ ತೆಗೆದುಕೊಳ್ಳುವುದು ಅಲ್ಲಿನ ಆಡಳಿತ’ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ದುರ್ಗಾಪುರದ ವೈದ್ಯಕೀಯ ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂತ್ರಸ್ತೆಯ ತಂದೆ ಬುಧವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕ್ಷಮೆಯಾಚಿಸಿದ್ದಾರೆ.</p>.<p>‘ಮಮತಾ ನಮಗೆ ತಾಯಿಯಂತೆ. ನಿಮ್ಮ ವಿರುದ್ಧ ನಾನು ಏನಾದರೂ ತಪ್ಪು ಮಾತನಾಡಿದ್ದರೆ ನನ್ನನ್ನು ಕ್ಷಮಿಸಿ’ ಎಂದಿರುವ ಅವರು, ‘ನಮ್ಮ ಪುತ್ರಿಗೆ ನ್ಯಾಯ ದೊರಕಿಸಿಕೊಡಬೇಕು’ ಎಂದು ಮಮತಾ ಅವರ ಬಳಿ ಮನವಿ ಮಾಡಿದ್ದಾರೆ. </p>.<p>‘ನಾನು ಅವರ ಪಾದಗಳಿಗೆ ಸಹಸ್ರ ಪ್ರಣಾಮಗಳನ್ನು ಸಲ್ಲಿಸುತ್ತೇನೆ ಹಾಗೂ ನನ್ನ ಮಗಳಿಗೆ ನ್ಯಾಯ ಒದಗಿಸಬೇಕೆಂದು ವಿನಂತಿಸುತ್ತೇನೆ’ ಎಂದು ಅವರು ಬುಧವಾರ ಸುದ್ದಿವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. </p>.<p>‘ಮಹಿಳೆಯರು ರಾತ್ರಿ ವೇಳೆ ಹೊರಗೆ ಹೋಗಬಾರದು’ ಎಂಬ ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನು ಸಂತ್ರಸ್ತೆಯ ತಂದೆ ಟೀಕಿಸಿದ್ದರು. ‘ಪಶ್ಚಿಮ ಬಂಗಾಳವು ಮಹಿಳೆಯರಿಗೆ ಸುರಕ್ಷಿತವಲ್ಲ. ಅಲ್ಲಿ ಔರಂಗಜೇಬನ ಆಡಳಿತವಿದೆ. ನಾನು ಮಗಳನ್ನು ಅಲ್ಲಿಂದ ಒಡಿಶಾಗೆ ಮರಳಿ ಕರೆತರುತ್ತೇನೆ. ಅವಳ ಜೀವ ನಮಗೆ ಮುಖ್ಯ, ಆ ನಂತರ ಉದ್ಯೋಗ’ ಎಂದು ಅವರು ಸೋಮವಾರ ಹೇಳಿದ್ದರು. </p>.<p>‘ವೈದ್ಯರು ಹೇಳಿದ ಮೇಲಷ್ಟೇ ನಾನು ಮಗಳನ್ನು ಕರೆತರುತ್ತೇನೆ. ಈ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಒತ್ತಾಯಿಸುತ್ತೇನೆ. ಆದರೆ, ಈ ನಿರ್ಧಾರ ತೆಗೆದುಕೊಳ್ಳುವುದು ಅಲ್ಲಿನ ಆಡಳಿತ’ ಎಂದು ಅವರು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>