<p><strong>ನವದೆಹಲಿ</strong>: ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ಕರ್ತವ್ಯ ರದ್ದು ಮಾಡುವ ಮತ್ತು ಅವರ ಕೆಲಸದ ಅವಧಿ ದಿನಕ್ಕೆ 12 ತಾಸು ಮೀರುವಂತಿಲ್ಲ ಎಂಬ ನಿಯಮಗಳನ್ನು ರೂಪಿಸಿರುವ ಪಶ್ಚಿಮ ಬಂಗಾಳ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ವೇಳೆ ಈ ವಿಚಾರ ಪ್ರಸ್ತಾಪಗೊಂಡಿತು. ಆಗ, ಈ ಕುರಿತ ಅಧಿಸೂಚನೆಯನ್ನು ಸರಿಪಡಿಸಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತು.</p>.<p>‘ಮಹಿಳಾ ವೈದ್ಯರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವಂತಿಲ್ಲ ಎಂದು ನೀವು ಹೇಳುವಂತಿಲ್ಲ. ಅವರಿಗೆ ಭದ್ರತೆ ಒದಗಿಸುವುದು ನಿಮ್ಮ ಕರ್ತವ್ಯ. ಪೈಲಟ್ಗಳು, ಸೇನೆ ಸಿಬ್ಬಂದಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಾರೆ. ಕೆಲಸದ ಅವಧಿ ಎಲ್ಲ ವೈದ್ಯರಿಗೂ ನ್ಯಾಯಯುತವಾಗಿರಬೇಕು’ ಎಂದೂ ನ್ಯಾಯಪೀಠ ಹೇಳಿತು.</p>.<p>ನ್ಯಾಯಪೀಠದ ಸೂಚನೆಯ ನಂತರ, ಮಹಿಳಾ ವೈದ್ಯರಿಗೆ ಸಂಬಂಧಿಸಿದ ಈ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯುವುದಾಗಿ ಪಶ್ಚಿಮ ಬಂಗಾಳ ಸರ್ಕಾರವು ಪೀಠಕ್ಕೆ ತಿಳಿಸಿತು.</p>.<p>ವೈದ್ಯರು ಸೇರಿದಂತೆ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಭದ್ರತೆಗಾಗಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಕ ಮಾಡಿಕೊಳ್ಳುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನೂ ಪೀಠ ಪ್ರಶ್ನಿಸಿತು.</p>.<p>‘ವೈದ್ಯರಿಗೆ ಸೂಕ್ತ ಭದ್ರತೆ ಇಲ್ಲದಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯ ಸರ್ಕಾರ ಕನಿಷ್ಠ ಪಕ್ಷ ಪೊಲೀಸರನ್ನಾದರೂ ನಿಯೋಜಿಸಬೇಕಿತ್ತು. ಇದು, ಕೆಲಸಕ್ಕಾಗಿ ಕೋಲ್ಕತ್ತಕ್ಕೆ ಬರುವ ವೈದ್ಯ ವಿದ್ಯಾರ್ಥಿಗಳ ಸುರಕ್ಷತೆಯ ಪ್ರಶ್ನೆ’ ಎಂದೂ ಪೀಠ ಹೇಳಿತು.</p>.<p>‘ಕ್ರಮ ಇಲ್ಲ’: ಪ್ರತಿಭಟನೆ ನಡೆಸುತ್ತಿರುವ ವೈದ್ಯರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ, ನ್ಯಾಯಪೀಠಕ್ಕೆ ತಿಳಿಸಿತು.</p>.<p>ಈ ಕುರಿತು ಕಿರಿಯ ವೈದ್ಯರ ಪರ ಹಾಜರಿದ್ದ ಹಿರಿಯ ವಕೀಲ ಇಂದಿರಾ ಜೈಸಿಂಗ್ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಮಹಿಳಾ ವೈದ್ಯರಿಗೆ ರಾತ್ರಿ ಪಾಳಿ ಕರ್ತವ್ಯ ರದ್ದು ಮಾಡುವ ಮತ್ತು ಅವರ ಕೆಲಸದ ಅವಧಿ ದಿನಕ್ಕೆ 12 ತಾಸು ಮೀರುವಂತಿಲ್ಲ ಎಂಬ ನಿಯಮಗಳನ್ನು ರೂಪಿಸಿರುವ ಪಶ್ಚಿಮ ಬಂಗಾಳ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ.</p>.<p>ವೈದ್ಯ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ವೇಳೆ ಈ ವಿಚಾರ ಪ್ರಸ್ತಾಪಗೊಂಡಿತು. ಆಗ, ಈ ಕುರಿತ ಅಧಿಸೂಚನೆಯನ್ನು ಸರಿಪಡಿಸಬೇಕು ಎಂದು ಪಶ್ಚಿಮ ಬಂಗಾಳ ಸರ್ಕಾರಕ್ಕೆ ನ್ಯಾಯಪೀಠ ಸೂಚಿಸಿತು.</p>.<p>‘ಮಹಿಳಾ ವೈದ್ಯರು ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುವಂತಿಲ್ಲ ಎಂದು ನೀವು ಹೇಳುವಂತಿಲ್ಲ. ಅವರಿಗೆ ಭದ್ರತೆ ಒದಗಿಸುವುದು ನಿಮ್ಮ ಕರ್ತವ್ಯ. ಪೈಲಟ್ಗಳು, ಸೇನೆ ಸಿಬ್ಬಂದಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಾರೆ. ಕೆಲಸದ ಅವಧಿ ಎಲ್ಲ ವೈದ್ಯರಿಗೂ ನ್ಯಾಯಯುತವಾಗಿರಬೇಕು’ ಎಂದೂ ನ್ಯಾಯಪೀಠ ಹೇಳಿತು.</p>.<p>ನ್ಯಾಯಪೀಠದ ಸೂಚನೆಯ ನಂತರ, ಮಹಿಳಾ ವೈದ್ಯರಿಗೆ ಸಂಬಂಧಿಸಿದ ಈ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯುವುದಾಗಿ ಪಶ್ಚಿಮ ಬಂಗಾಳ ಸರ್ಕಾರವು ಪೀಠಕ್ಕೆ ತಿಳಿಸಿತು.</p>.<p>ವೈದ್ಯರು ಸೇರಿದಂತೆ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ಭದ್ರತೆಗಾಗಿ ಗುತ್ತಿಗೆ ಆಧಾರದಲ್ಲಿ ನೌಕರರನ್ನು ನೇಮಕ ಮಾಡಿಕೊಳ್ಳುವ ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರವನ್ನೂ ಪೀಠ ಪ್ರಶ್ನಿಸಿತು.</p>.<p>‘ವೈದ್ಯರಿಗೆ ಸೂಕ್ತ ಭದ್ರತೆ ಇಲ್ಲದಂತಹ ಸ್ಥಿತಿಯಲ್ಲಿ ನಾವಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿ ರಾಜ್ಯ ಸರ್ಕಾರ ಕನಿಷ್ಠ ಪಕ್ಷ ಪೊಲೀಸರನ್ನಾದರೂ ನಿಯೋಜಿಸಬೇಕಿತ್ತು. ಇದು, ಕೆಲಸಕ್ಕಾಗಿ ಕೋಲ್ಕತ್ತಕ್ಕೆ ಬರುವ ವೈದ್ಯ ವಿದ್ಯಾರ್ಥಿಗಳ ಸುರಕ್ಷತೆಯ ಪ್ರಶ್ನೆ’ ಎಂದೂ ಪೀಠ ಹೇಳಿತು.</p>.<p>‘ಕ್ರಮ ಇಲ್ಲ’: ಪ್ರತಿಭಟನೆ ನಡೆಸುತ್ತಿರುವ ವೈದ್ಯರ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ, ನ್ಯಾಯಪೀಠಕ್ಕೆ ತಿಳಿಸಿತು.</p>.<p>ಈ ಕುರಿತು ಕಿರಿಯ ವೈದ್ಯರ ಪರ ಹಾಜರಿದ್ದ ಹಿರಿಯ ವಕೀಲ ಇಂದಿರಾ ಜೈಸಿಂಗ್ ಪ್ರಸ್ತಾಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>