<p><strong>ಚೆನ್ನೈ:</strong> ಪ್ರವಾಸಿ ವಾಹನಗಳ ಸಂಖ್ಯೆ ನಿಯಂತ್ರಿಸುವ ಹೊಸ 'ಇ-ಪಾಸ್' ವ್ಯವಸ್ಥೆಯು ಪ್ರವಾಸಿ ಪಟ್ಟಣಗಳಾದ ಊಟಿ ಮತ್ತು ಕೊಡೈಕೆನಾಲ್ನಲ್ಲಿ ಮೊದಲ ಬಾರಿಗೆ ಜಾರಿಗೆ ಬಂದಿದೆ.</p>.<p>ಪ್ರಾಕೃತಿಕ ಸುಂದರ ತಾಣ ನೀಲಗಿರಿ ಜಿಲ್ಲೆಯೊಳಗೆ ವಾರದ ದಿನಗಳಲ್ಲಿ ಆರು ಸಾವಿರ ವಾಹನಗಳಿಗೆ ಮಾತ್ರ ಪ್ರವೇಶ ಸಿಗಲಿದೆ. ವಾರಾಂತ್ಯದಲ್ಲಿ ಈ ಸಂಖ್ಯೆ ಎಂಟು ಸಾವಿರಕ್ಕೆ ಮಿತಿಗೊಳಿಸಲಾಗಿದೆ.</p>.<p>ಹೊಸ ವ್ಯವಸ್ಥೆಯು ಜೂನ್ 30ರವರೆಗೆ ಜಾರಿಯಲ್ಲಿರಲಿದೆ. ಮದ್ರಾಸ್ ಹೈಕೋರ್ಟ್ ಆದೇಶದಂತೆ ಜಾರಿಗೆ ತರಲಾದ ಈ ವ್ಯವಸ್ಥೆ ವಿರೋಧಿಸಿ, ನೀಲಗಿರಿ ಜಿಲ್ಲೆಗಳಲ್ಲಿ ವ್ಯಾಪಾರಿಗಳು ಅಂಗಡಿಮುಂಗಟ್ಟುಗಳನ್ನು ಬುಧವಾರ ಮುಚ್ಚಿದ್ದರು. </p>.<p>ಈ ಎರಡು ಪಟ್ಟಣಗಳು, ಕಳೆದ ಕೆಲವು ವರ್ಷಗಳಲ್ಲಿ, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಭಾರಿ ಸಂಖ್ಯೆಯಲ್ಲಿ ಭೇಟಿ ನೀಡಿದ್ದ ಪ್ರವಾಸಿಗರ ದಟ್ಟಣೆಯಿಂದ ನಲುಗಿದ್ದವು. ಪ್ರವಾಸಿ ತಾಣಗಳ ಪರಿಸರದ ಮೇಲೆ ಇದು ಗಂಭೀರ ಪರಿಣಾಮ ಕೂಡ ಬೀರಿತ್ತು.</p>.<p>ಊಟಿಗೆ 2024ರ ಏಪ್ರಿಲ್ನಲ್ಲಿ ಪ್ರವಾಸಿಗರು ಭಾರಿ ಸಂಖ್ಯೆಯಲ್ಲಿ ಭೇಟಿ ನೀಡಿದ್ದು, ವಾರಾಂತ್ಯದಲ್ಲಿ ಸುಮಾರು 20 ಸಾವಿರ ವಾಹನಗಳು ಪ್ರವೇಶಿಸಿದ್ದವು. ಇದರಿಂದಾಗಿ ವಾಹನಗಳ ಸಂಖ್ಯೆಯ ಮೇಲೆ ನಿಗಾ ಇಡಲು ‘ಇ-ಪಾಸ್‘ ವ್ಯವಸ್ಥೆ ಪರಿಚಯಿಸುವಂತೆ ಹೈಕೋರ್ಟ್ ಆದೇಶಿಸಿತ್ತು.</p>.<p>ಹವಾಮಾನ ಬದಲಾವಣೆಯ ಪರಿಣಾಮಗಳು ಈಗಾಗಲೇ ಊಟಿಯಲ್ಲಿ ಕಾಣಬರುತ್ತಿವೆ. ಪಟ್ಟಣದಲ್ಲಿ 2024ರ ಜನವರಿಯಲ್ಲಿ ಶೂನ್ಯ ತಾಪಮಾನ ದಾಖಲಾಗಿತ್ತು. ಬೇಸಿಗೆಯಲ್ಲಿ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಇದು 1951ರ ನಂತರದಲ್ಲಿ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವೆನಿಸಿದೆ.</p>.<p>ಕೊಡೈಕೆನಾಲ್ ಮತ್ತು ಊಟಿಯಲ್ಲಿನ ವಾಹನ ಸಂಚಾರ ಸಾಮರ್ಥ್ಯದ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿ ಸಂಚಾರ ನಿರ್ವಹಣೆಗೆ ಸೂಕ್ತ ಶಿಫಾರಸು ಮಾಡಲು ರಾಜ್ಯ ಸರ್ಕಾರವು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್ (ಐಐಟಿ-ಎಂ) ಮತ್ತು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ-ಬಿ) ನೆರವು ಪಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ:</strong> ಪ್ರವಾಸಿ ವಾಹನಗಳ ಸಂಖ್ಯೆ ನಿಯಂತ್ರಿಸುವ ಹೊಸ 'ಇ-ಪಾಸ್' ವ್ಯವಸ್ಥೆಯು ಪ್ರವಾಸಿ ಪಟ್ಟಣಗಳಾದ ಊಟಿ ಮತ್ತು ಕೊಡೈಕೆನಾಲ್ನಲ್ಲಿ ಮೊದಲ ಬಾರಿಗೆ ಜಾರಿಗೆ ಬಂದಿದೆ.</p>.<p>ಪ್ರಾಕೃತಿಕ ಸುಂದರ ತಾಣ ನೀಲಗಿರಿ ಜಿಲ್ಲೆಯೊಳಗೆ ವಾರದ ದಿನಗಳಲ್ಲಿ ಆರು ಸಾವಿರ ವಾಹನಗಳಿಗೆ ಮಾತ್ರ ಪ್ರವೇಶ ಸಿಗಲಿದೆ. ವಾರಾಂತ್ಯದಲ್ಲಿ ಈ ಸಂಖ್ಯೆ ಎಂಟು ಸಾವಿರಕ್ಕೆ ಮಿತಿಗೊಳಿಸಲಾಗಿದೆ.</p>.<p>ಹೊಸ ವ್ಯವಸ್ಥೆಯು ಜೂನ್ 30ರವರೆಗೆ ಜಾರಿಯಲ್ಲಿರಲಿದೆ. ಮದ್ರಾಸ್ ಹೈಕೋರ್ಟ್ ಆದೇಶದಂತೆ ಜಾರಿಗೆ ತರಲಾದ ಈ ವ್ಯವಸ್ಥೆ ವಿರೋಧಿಸಿ, ನೀಲಗಿರಿ ಜಿಲ್ಲೆಗಳಲ್ಲಿ ವ್ಯಾಪಾರಿಗಳು ಅಂಗಡಿಮುಂಗಟ್ಟುಗಳನ್ನು ಬುಧವಾರ ಮುಚ್ಚಿದ್ದರು. </p>.<p>ಈ ಎರಡು ಪಟ್ಟಣಗಳು, ಕಳೆದ ಕೆಲವು ವರ್ಷಗಳಲ್ಲಿ, ಮೇ ಮತ್ತು ಜೂನ್ ತಿಂಗಳುಗಳಲ್ಲಿ ಭಾರಿ ಸಂಖ್ಯೆಯಲ್ಲಿ ಭೇಟಿ ನೀಡಿದ್ದ ಪ್ರವಾಸಿಗರ ದಟ್ಟಣೆಯಿಂದ ನಲುಗಿದ್ದವು. ಪ್ರವಾಸಿ ತಾಣಗಳ ಪರಿಸರದ ಮೇಲೆ ಇದು ಗಂಭೀರ ಪರಿಣಾಮ ಕೂಡ ಬೀರಿತ್ತು.</p>.<p>ಊಟಿಗೆ 2024ರ ಏಪ್ರಿಲ್ನಲ್ಲಿ ಪ್ರವಾಸಿಗರು ಭಾರಿ ಸಂಖ್ಯೆಯಲ್ಲಿ ಭೇಟಿ ನೀಡಿದ್ದು, ವಾರಾಂತ್ಯದಲ್ಲಿ ಸುಮಾರು 20 ಸಾವಿರ ವಾಹನಗಳು ಪ್ರವೇಶಿಸಿದ್ದವು. ಇದರಿಂದಾಗಿ ವಾಹನಗಳ ಸಂಖ್ಯೆಯ ಮೇಲೆ ನಿಗಾ ಇಡಲು ‘ಇ-ಪಾಸ್‘ ವ್ಯವಸ್ಥೆ ಪರಿಚಯಿಸುವಂತೆ ಹೈಕೋರ್ಟ್ ಆದೇಶಿಸಿತ್ತು.</p>.<p>ಹವಾಮಾನ ಬದಲಾವಣೆಯ ಪರಿಣಾಮಗಳು ಈಗಾಗಲೇ ಊಟಿಯಲ್ಲಿ ಕಾಣಬರುತ್ತಿವೆ. ಪಟ್ಟಣದಲ್ಲಿ 2024ರ ಜನವರಿಯಲ್ಲಿ ಶೂನ್ಯ ತಾಪಮಾನ ದಾಖಲಾಗಿತ್ತು. ಬೇಸಿಗೆಯಲ್ಲಿ ತಾಪಮಾನವು 29 ಡಿಗ್ರಿ ಸೆಲ್ಸಿಯಸ್ಗೆ ತಲುಪಿತ್ತು. ಇದು 1951ರ ನಂತರದಲ್ಲಿ ದಾಖಲಾದ ಅತಿ ಹೆಚ್ಚಿನ ಉಷ್ಣಾಂಶವೆನಿಸಿದೆ.</p>.<p>ಕೊಡೈಕೆನಾಲ್ ಮತ್ತು ಊಟಿಯಲ್ಲಿನ ವಾಹನ ಸಂಚಾರ ಸಾಮರ್ಥ್ಯದ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿ ಸಂಚಾರ ನಿರ್ವಹಣೆಗೆ ಸೂಕ್ತ ಶಿಫಾರಸು ಮಾಡಲು ರಾಜ್ಯ ಸರ್ಕಾರವು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮದ್ರಾಸ್ (ಐಐಟಿ-ಎಂ) ಮತ್ತು ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ (ಐಐಎಂ-ಬಿ) ನೆರವು ಪಡೆಯುತ್ತಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>