<p class="bodytext"><strong>ನವದೆಹಲಿ (ಪಿಟಿಐ): </strong>‘ನೀವು ಹಾಟ್ ಸೀಟಿನಲ್ಲಿ ಇಲ್ಲದಿದ್ದರೆ ಸರ್ಕಾರ ಅಥವಾ ನ್ಯಾಯಾಲಯಗಳನ್ನು ಟೀಕಿಸುವುದು ತುಂಬಾ ಸುಲಭ. ಆದರೆ ವಿಶ್ವದ ಕೆಲವು ಮುಂದುವರಿದ ರಾಷ್ಟ್ರಗಳು ಕೂಡ ಕೋವಿಡ್ -19 ಸಾಂಕ್ರಾಮಿಕ ರೋಗದ ವೇಳೆ ಕಷ್ಟಗಳನ್ನು ಎದುರಿಸಬೇಕಾಯಿತು’ ಎಂದು ಸುಪ್ರೀಂ ಕೋರ್ಟ್, ಎರಡನೇ ಅಲೆಯ ವೇಳೆ ಆಮ್ಲಜನಕದ ಪೂರೈಕೆ ಕೊರತೆಯ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದ ಅರ್ಜಿದಾರರಿಗೆ ಸೋಮವಾರ ಹೇಳಿದೆ.</p>.<p>ಈ ವರ್ಷದ ಮಾರ್ಚ್ನಿಂದ ಮೇ ವರೆಗೆ ಕೊರೊನಾ ಎರಡನೇ ಅಲೆಯ ವೇಳೆ ಕೋವಿಡ್ -19 ರೋಗಿಗಳಿಗೆ ಆಮ್ಲಜನಕ ಪೂರೈಸದಿರುವುದು ಮತ್ತು ಆಮ್ಲಜನಕದ ಅಲಭ್ಯತೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಅಥವಾ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ಸ್ಥಾಪಿಸಬೇಕು ಎಂದು ಕೋರಿರುವ ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p class="bodytext">ನರೇಶ್ ಕುಮಾರ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಬಿ.ವಿ. ನಾಗರತ್ನ ಅವರಿದ್ದ ಪೀಠವು, ‘ದೇಶವು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ಅಧಿಕಾರಿಗಳ ಸ್ಥೈರ್ಯವನ್ನು ಕುಗ್ಗಿಸುವ ಕೆಲಸವನ್ನೂ ಯಾರೂ ಮಾಡಬಾರದು’ ಎಂದು ತಾಕೀತು ಮಾಡಿದೆ.</p>.<p class="bodytext">ನರೇಶ್ ಕುಮಾರ್ ಪರವಾಗಿ ವಾದಿಸಿದ ವಕೀಲ ಮೇಧಾಂಶು ತ್ರಿಪಾಠಿ, ಆಮ್ಲಜನಕದ ಕೊರತೆಯಿಂದಾಗಿ ಎರಡನೇ ಅಲೆಯ ವೇಳೆ ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ವಾದಿಸಿದರು.</p>.<p class="bodytext">‘ವಿಶ್ವದ ಅತ್ಯಂತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಅವರಿಗೂ ಸಹ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ನೀವು ಹಾಟ್ ಸೀಟಿನಲ್ಲಿ ಇಲ್ಲದಿದ್ದರೆ ಸರ್ಕಾರವನ್ನು ಅಥವಾ ನ್ಯಾಯಾಲಯಗಳನ್ನು ಟೀಕಿಸುವುದು ತುಂಬಾ ಸುಲಭ’ ಎಂದು ಪೀಠ, ಅರ್ಜಿದಾರರ ಮೇಲೆ ಅಸಮಾಧಾನ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="bodytext"><strong>ನವದೆಹಲಿ (ಪಿಟಿಐ): </strong>‘ನೀವು ಹಾಟ್ ಸೀಟಿನಲ್ಲಿ ಇಲ್ಲದಿದ್ದರೆ ಸರ್ಕಾರ ಅಥವಾ ನ್ಯಾಯಾಲಯಗಳನ್ನು ಟೀಕಿಸುವುದು ತುಂಬಾ ಸುಲಭ. ಆದರೆ ವಿಶ್ವದ ಕೆಲವು ಮುಂದುವರಿದ ರಾಷ್ಟ್ರಗಳು ಕೂಡ ಕೋವಿಡ್ -19 ಸಾಂಕ್ರಾಮಿಕ ರೋಗದ ವೇಳೆ ಕಷ್ಟಗಳನ್ನು ಎದುರಿಸಬೇಕಾಯಿತು’ ಎಂದು ಸುಪ್ರೀಂ ಕೋರ್ಟ್, ಎರಡನೇ ಅಲೆಯ ವೇಳೆ ಆಮ್ಲಜನಕದ ಪೂರೈಕೆ ಕೊರತೆಯ ಬಗ್ಗೆ ತನಿಖೆ ನಡೆಸುವಂತೆ ಕೋರಿದ್ದ ಅರ್ಜಿದಾರರಿಗೆ ಸೋಮವಾರ ಹೇಳಿದೆ.</p>.<p>ಈ ವರ್ಷದ ಮಾರ್ಚ್ನಿಂದ ಮೇ ವರೆಗೆ ಕೊರೊನಾ ಎರಡನೇ ಅಲೆಯ ವೇಳೆ ಕೋವಿಡ್ -19 ರೋಗಿಗಳಿಗೆ ಆಮ್ಲಜನಕ ಪೂರೈಸದಿರುವುದು ಮತ್ತು ಆಮ್ಲಜನಕದ ಅಲಭ್ಯತೆ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಅಥವಾ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ಆಯೋಗ ಸ್ಥಾಪಿಸಬೇಕು ಎಂದು ಕೋರಿರುವ ಪಿಐಎಲ್ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.</p>.<p class="bodytext">ನರೇಶ್ ಕುಮಾರ್ ಎಂಬುವವರು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್ ಮತ್ತು ಬಿ.ವಿ. ನಾಗರತ್ನ ಅವರಿದ್ದ ಪೀಠವು, ‘ದೇಶವು ಕಠಿಣ ಪರಿಸ್ಥಿತಿಯನ್ನು ಎದುರಿಸುತ್ತಿರುವ ಈ ಸಮಯದಲ್ಲಿ, ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ಅಧಿಕಾರಿಗಳ ಸ್ಥೈರ್ಯವನ್ನು ಕುಗ್ಗಿಸುವ ಕೆಲಸವನ್ನೂ ಯಾರೂ ಮಾಡಬಾರದು’ ಎಂದು ತಾಕೀತು ಮಾಡಿದೆ.</p>.<p class="bodytext">ನರೇಶ್ ಕುಮಾರ್ ಪರವಾಗಿ ವಾದಿಸಿದ ವಕೀಲ ಮೇಧಾಂಶು ತ್ರಿಪಾಠಿ, ಆಮ್ಲಜನಕದ ಕೊರತೆಯಿಂದಾಗಿ ಎರಡನೇ ಅಲೆಯ ವೇಳೆ ಲಕ್ಷ ಜನರು ಸಾವನ್ನಪ್ಪಿದ್ದಾರೆ ಎಂದು ವಾದಿಸಿದರು.</p>.<p class="bodytext">‘ವಿಶ್ವದ ಅತ್ಯಂತ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಅವರಿಗೂ ಸಹ ಸಾಂಕ್ರಾಮಿಕ ರೋಗ ನಿಯಂತ್ರಿಸಲು ಸಾಧ್ಯವಾಗಲಿಲ್ಲ. ನೀವು ಹಾಟ್ ಸೀಟಿನಲ್ಲಿ ಇಲ್ಲದಿದ್ದರೆ ಸರ್ಕಾರವನ್ನು ಅಥವಾ ನ್ಯಾಯಾಲಯಗಳನ್ನು ಟೀಕಿಸುವುದು ತುಂಬಾ ಸುಲಭ’ ಎಂದು ಪೀಠ, ಅರ್ಜಿದಾರರ ಮೇಲೆ ಅಸಮಾಧಾನ ವ್ಯಕ್ತಪಡಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>