<p><strong>ನವದೆಹಲಿ</strong>: ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷವು (ಎನ್ಸಿಪಿ) ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಚುನಾವಣಾ ಆಯೋಗವು ಸೋಮವಾರ ಅನುಮತಿ ನೀಡಿದೆ. </p>.<p>ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ನೇತೃತ್ವದ ಎಂಟು ಮಂದಿ ಸದಸ್ಯರನ್ನೊಳಗೊಂಡ ನಿಯೋಗವು, ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿತ್ತು. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗ ಈ ನಿರ್ಧಾರ ಕೈಗೊಂಡಿದೆ. </p>.<p>ಜನಪ್ರತಿನಿಧಿಗಳ ಕಾಯ್ದೆ–1952ರ ಪ್ರಕಾರ, ಇತರೆ ರಾಜಕೀಯ ಪಕ್ಷಗಳ ರೀತಿ ಎನ್ಸಿಪಿಯ ಶರದ್ ಪವಾರ್ ಬಣವು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಸ್ವಯಂಪ್ರೇರಿತವಾಗಿ ನೀಡುವ ಎಷ್ಟೇ ಪ್ರಮಾಣದ ದೇಣಿಗೆಯನ್ನು ಪಡೆಯಲು ಅವಕಾಶವಿದೆ ಎಂದು ಆಯೋಗ ತಿಳಿಸಿದೆ.</p>.<p>ಕಳೆದ ವರ್ಷದ ಜುಲೈನಲ್ಲಿ ಶರದ್ ಪವಾರ್ ವಿರುದ್ಧ ಬಂಡಾಯ ಸಾರಿದ್ದ ಅಜಿತ್ ಪವಾರ್, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎನ್ಸಿಪಿಯ ಮೂರನೇ ಎರಡರಷ್ಟು ಶಾಸಕರ ಬೆಂಬಲ ತಮಗಿದೆ. ಹೀಗಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಹೆಸರು ಮತ್ತು ಅದರ ಚಿಹ್ನೆಯು ತಮಗೇ ಸೇರಬೇಕು ಎಂದು ಪ್ರತಿಪಾದಿಸಿದ್ದರು. </p>.<p>ಅಜಿತ್ ಪವಾರ್ ಅವರ ಈ ಪ್ರತಿಪಾದನೆಯನ್ನು ಆಯೋಗವು ಎತ್ತಿಹಿಡಿದಿತ್ತು. ಅಲ್ಲದೆ, 2024ರ ಲೋಕಸಭಾ ಚುನಾವಣೆಯ ಭಾಗವಾಗಿ ಹೊಸ ಹೆಸರು ಆಯ್ಕೆ ಮಾಡಿಕೊಳ್ಳುವಂತೆ ಶರದ್ ಪವಾರ್ ಬಣಕ್ಕೆ ಆಯೋಗ ಸೂಚಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷವು (ಎನ್ಸಿಪಿ) ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸಲು ಚುನಾವಣಾ ಆಯೋಗವು ಸೋಮವಾರ ಅನುಮತಿ ನೀಡಿದೆ. </p>.<p>ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ನೇತೃತ್ವದ ಎಂಟು ಮಂದಿ ಸದಸ್ಯರನ್ನೊಳಗೊಂಡ ನಿಯೋಗವು, ಆಯೋಗದ ಅಧಿಕಾರಿಗಳನ್ನು ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿತ್ತು. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಆಯೋಗ ಈ ನಿರ್ಧಾರ ಕೈಗೊಂಡಿದೆ. </p>.<p>ಜನಪ್ರತಿನಿಧಿಗಳ ಕಾಯ್ದೆ–1952ರ ಪ್ರಕಾರ, ಇತರೆ ರಾಜಕೀಯ ಪಕ್ಷಗಳ ರೀತಿ ಎನ್ಸಿಪಿಯ ಶರದ್ ಪವಾರ್ ಬಣವು, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳನ್ನು ಹೊರತುಪಡಿಸಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯು ಸ್ವಯಂಪ್ರೇರಿತವಾಗಿ ನೀಡುವ ಎಷ್ಟೇ ಪ್ರಮಾಣದ ದೇಣಿಗೆಯನ್ನು ಪಡೆಯಲು ಅವಕಾಶವಿದೆ ಎಂದು ಆಯೋಗ ತಿಳಿಸಿದೆ.</p>.<p>ಕಳೆದ ವರ್ಷದ ಜುಲೈನಲ್ಲಿ ಶರದ್ ಪವಾರ್ ವಿರುದ್ಧ ಬಂಡಾಯ ಸಾರಿದ್ದ ಅಜಿತ್ ಪವಾರ್, ಮಹಾರಾಷ್ಟ್ರ ವಿಧಾನಸಭೆಯಲ್ಲಿ ಎನ್ಸಿಪಿಯ ಮೂರನೇ ಎರಡರಷ್ಟು ಶಾಸಕರ ಬೆಂಬಲ ತಮಗಿದೆ. ಹೀಗಾಗಿ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ಹೆಸರು ಮತ್ತು ಅದರ ಚಿಹ್ನೆಯು ತಮಗೇ ಸೇರಬೇಕು ಎಂದು ಪ್ರತಿಪಾದಿಸಿದ್ದರು. </p>.<p>ಅಜಿತ್ ಪವಾರ್ ಅವರ ಈ ಪ್ರತಿಪಾದನೆಯನ್ನು ಆಯೋಗವು ಎತ್ತಿಹಿಡಿದಿತ್ತು. ಅಲ್ಲದೆ, 2024ರ ಲೋಕಸಭಾ ಚುನಾವಣೆಯ ಭಾಗವಾಗಿ ಹೊಸ ಹೆಸರು ಆಯ್ಕೆ ಮಾಡಿಕೊಳ್ಳುವಂತೆ ಶರದ್ ಪವಾರ್ ಬಣಕ್ಕೆ ಆಯೋಗ ಸೂಚಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>