ಕೇರಳದಲ್ಲಿ ಏಪ್ರಿಲ್ 6ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆಗೆ ಗೆಲ್ಲಲು ಪಣತೊಟ್ಟಿರುವ ರಾಜಕೀಯ ಪಕ್ಷಗಳು ರಾಜ್ಯದಾದ್ಯಂತ ರ್ಯಾಲಿ, ಬಹಿರಂಗ ಸಭೆಗಳು ನಡೆಸುತ್ತಿವೆ. ಇಲ್ಲೆಲ್ಲ ಭಾರಿ ಸಂಖ್ಯೆಯಲ್ಲಿ ಜನ ಸೇರುತ್ತಿದ್ದಾರೆ. ಇದಲ್ಲದೆ, ಕೇರಳದಲ್ಲಿ ಚುನಾವಣಾ ಪ್ರಚಾರದ ಅಂತಿಮ ಹಂತ ಎಂದೇ ಕರೆಯುವ ‘ಕೊಟ್ಟಿಕಲಾಶಂ‘ನಲ್ಲಿ ರಾಜಕೀಯ ಪಕ್ಷಗಳು ತಮ್ಮ ಶಕ್ತಿ ಪ್ರದರ್ಶನಕ್ಕಾಗಿ ಹೆಚ್ಚು ಜನರನ್ನು ಸೇರಿಸುತ್ತಾರೆ. ಜನರು ಸೇರುವುದನ್ನು ತಡೆಯುವುದಕ್ಕಾಗಿ ರಾಜ್ಯ ಚುನಾವಣಾ ಮುಖ್ಯ ಅಧಿಕಾರಿಯ ‘ ಕೊಟ್ಟಿಕಲಾಶಂ‘ ಅನ್ನು ನಿರ್ಬಂಧಿಸುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ್ದರು.