‘ದೇಶದಲ್ಲಿ ಕೋವಿಡ್ ಎರಡನೇ ಅಲೆ ಹರಡಲು ನಿಮ್ಮ ಸಂಸ್ಥೆಯೇ ಏಕೈಕ ಜವಾಬ್ದಾರಿಯಾಗಿದೆ’ ಎಂದು ಭಾರತೀಯ ಚುನಾವಣಾ ಆಯೋಗವನ್ನು ಉದ್ದೇಶಿಸಿ ಬ್ಯಾನರ್ಜಿ ಹೇಳಿದ್ದಾರೆ.
ಮತ ಎಣಿಕೆ ತಡೆಯುವ ಎಚ್ಚರಿಕೆ
ಕೋವಿಡ್ -19 ಮಾರ್ಗಸೂಚಿ ಪಾಲನೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಸರಿಯಾದ ಯೋಜನೆ ರೂಪಿಸದಿದ್ದರೆ ಮೇ 2ರಂದು ಮತ ಎಣಿಕೆ ನಡೆಸುವುದಕ್ಕೆ ತಡೆ ನೀಡುವುದಾಗಿ ಹೈಕೋರ್ಟ್ ಎಚ್ಚರಿಕೆ ನೀಡಿದೆ.
‘ಚುನಾವಣಾ ರ್ಯಾಲಿಗಳು ನಡೆದಾಗ ನೀವು ಅನ್ಯ ಗ್ರಹದಲ್ಲಿದ್ದಿರಾ?’ ಎಂದು ಮುಖ್ಯ ನ್ಯಾಯಮೂರ್ತಿಗಳು ಚುನಾವಣಾ ಆಯೋಗವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Madras High Court comes down heavily on Election Commission of India @ECISVEEP for allowing political rallies during #COVID