<p><strong>ಅಹಮದಾಬಾದ್:</strong> ಗುಜರಾತಿನ ದಾಹೋದ್ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮೇ 7ರಂದು ನಡೆದ ಮತದಾನ ಪ್ರಕ್ರಿಯೆಯನ್ನು ವ್ಯಕ್ತಿಯೊಬ್ಬ ಇನ್ಸ್ಟಾಗ್ರಾಮ್ನಲ್ಲಿ ನೇರ ಪ್ರಸಾರ ಮಾಡಿದ್ದ ವಿಡಿಯೊ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಆ ಮತಗಟ್ಟೆಗೆ ಇದೇ 11ರಂದು ಮರು ಮತದಾನ ಮಾಡಲು ಆದೇಶ ಹೊರಡಿಸಿದೆ. </p>.<p>ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಸೈಡಿಂಗ್ ಅಧಿಕಾರಿ, ಸಹಾಯಕ ಪ್ರಿಸೈಡಿಂಗ್ ಅಧಿಕಾರಿ, ಇಬ್ಬರು ಮತಗಟ್ಟೆ ಅಧಿಕಾರಿಗಳು ಹಾಗೂ ಒಬ್ಬ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ ಎಂದು ಗುಜರಾತಿನ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮಹಿಸಾಗರ ಜಿಲ್ಲೆಯ ಸಂತ್ರಾಂಪುರ ತಾಲ್ಲೂಕಿನ ಪಾರ್ಥಂಪುರ ಮತಗಟ್ಟೆಯಲ್ಲಿ ಈ ಪ್ರಕರಣ ನಡೆದಿತ್ತು. ಈ ಕುರಿತು ಚುನಾವಣಾಧಿಕಾರಿ ಮತ್ತು ವೀಕ್ಷಕರು ಸಲ್ಲಿಸಿದ ವರದಿಯನ್ನು ಗಣನೆಗೆ ತೆಗೆದುಕೊಂಡ ಆಯೋಗವು, ಆ ಮತಗಟ್ಟೆಯಲ್ಲಿ ನಡೆದಿದ್ದ ಮತದಾನವನ್ನು ಅಸಿಂಧು ಎಂದು ಘೋಷಿಸಿತು ಎಂದು ಸಿಇಒ ಹೇಳಿದ್ದಾರೆ. </p>.<p>ಮೇ 11ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಮತಗಟ್ಟೆಯಲ್ಲಿ ಇಲ್ಲಿ ಹೊಸದಾಗಿ ಮತದಾನ ನಡೆಯಲಿದೆ.</p>.<p>ಆರೋಪಿ ವಿಜಯ್ ಭಾಭೋರ್ ಎಂಬಾತನು ಐದು ನಿಮಿಷಗಳ ಕಾಲ ಮತಗಟ್ಟೆಯಲ್ಲಿ ಉಳಿದುಕೊಂಡು ಮತದಾನವನ್ನು ಇನ್ಸ್ಟಾಗ್ರಾಮ್ನಲ್ಲಿ ನೇರ ಪ್ರಸಾರ ಮಾಡಿದ್ದಾನೆ. ಅಲ್ಲದೆ ಇಬ್ಬರು ಮತದಾರರ ಪರವಾಗಿ ಮತ ಚಲಾಯಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತ ವಿಡಿಯೊದೊಂದಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿ, ಮರು ಮತದಾನಕ್ಕೆ ಆಗ್ರಹಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಹಮದಾಬಾದ್:</strong> ಗುಜರಾತಿನ ದಾಹೋದ್ ಲೋಕಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮೇ 7ರಂದು ನಡೆದ ಮತದಾನ ಪ್ರಕ್ರಿಯೆಯನ್ನು ವ್ಯಕ್ತಿಯೊಬ್ಬ ಇನ್ಸ್ಟಾಗ್ರಾಮ್ನಲ್ಲಿ ನೇರ ಪ್ರಸಾರ ಮಾಡಿದ್ದ ವಿಡಿಯೊ ವ್ಯಾಪಕವಾಗಿ ಹರಿದಾಡಿದ ಬೆನ್ನಲ್ಲೇ, ಚುನಾವಣಾ ಆಯೋಗವು ಆ ಮತಗಟ್ಟೆಗೆ ಇದೇ 11ರಂದು ಮರು ಮತದಾನ ಮಾಡಲು ಆದೇಶ ಹೊರಡಿಸಿದೆ. </p>.<p>ಅಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಿಸೈಡಿಂಗ್ ಅಧಿಕಾರಿ, ಸಹಾಯಕ ಪ್ರಿಸೈಡಿಂಗ್ ಅಧಿಕಾರಿ, ಇಬ್ಬರು ಮತಗಟ್ಟೆ ಅಧಿಕಾರಿಗಳು ಹಾಗೂ ಒಬ್ಬ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಲಾಗಿದೆ ಎಂದು ಗುಜರಾತಿನ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.</p>.<p>ಮಹಿಸಾಗರ ಜಿಲ್ಲೆಯ ಸಂತ್ರಾಂಪುರ ತಾಲ್ಲೂಕಿನ ಪಾರ್ಥಂಪುರ ಮತಗಟ್ಟೆಯಲ್ಲಿ ಈ ಪ್ರಕರಣ ನಡೆದಿತ್ತು. ಈ ಕುರಿತು ಚುನಾವಣಾಧಿಕಾರಿ ಮತ್ತು ವೀಕ್ಷಕರು ಸಲ್ಲಿಸಿದ ವರದಿಯನ್ನು ಗಣನೆಗೆ ತೆಗೆದುಕೊಂಡ ಆಯೋಗವು, ಆ ಮತಗಟ್ಟೆಯಲ್ಲಿ ನಡೆದಿದ್ದ ಮತದಾನವನ್ನು ಅಸಿಂಧು ಎಂದು ಘೋಷಿಸಿತು ಎಂದು ಸಿಇಒ ಹೇಳಿದ್ದಾರೆ. </p>.<p>ಮೇ 11ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಮತಗಟ್ಟೆಯಲ್ಲಿ ಇಲ್ಲಿ ಹೊಸದಾಗಿ ಮತದಾನ ನಡೆಯಲಿದೆ.</p>.<p>ಆರೋಪಿ ವಿಜಯ್ ಭಾಭೋರ್ ಎಂಬಾತನು ಐದು ನಿಮಿಷಗಳ ಕಾಲ ಮತಗಟ್ಟೆಯಲ್ಲಿ ಉಳಿದುಕೊಂಡು ಮತದಾನವನ್ನು ಇನ್ಸ್ಟಾಗ್ರಾಮ್ನಲ್ಲಿ ನೇರ ಪ್ರಸಾರ ಮಾಡಿದ್ದಾನೆ. ಅಲ್ಲದೆ ಇಬ್ಬರು ಮತದಾರರ ಪರವಾಗಿ ಮತ ಚಲಾಯಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತ ವಿಡಿಯೊದೊಂದಿಗೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿ, ಮರು ಮತದಾನಕ್ಕೆ ಆಗ್ರಹಿಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>