<p><strong>ನವದೆಹಲಿ</strong>: ‘ಮುಂದಿನ ವರ್ಷ ಮೇ ಮತ್ತು ಜೂನ್ ಮಧ್ಯೆ ನಡೆಯಲಿರುವ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಚುನಾವಣೆಗೂ ಮುಂಚಿತವಾಗಿ ಈ ಐದು ರಾಜ್ಯಗಳ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸುತ್ತೇವೆ’ ಎಂದು ಕೇಂದ್ರ ಚುನಾವಣಾ ಆಯೋಗ (ಸಿಇಸಿ) ಬುಧವಾರ ಹೇಳಿದೆ.</p>.<p>‘ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆಯ ಬಳಿಕ ಈ ಕಾರ್ಯ ಆರಂಭಿಸುತ್ತೇವೆ. ಆಯೋಗದ ಬೂತ್ ಮಟ್ಟದ ಸಿಬ್ಬಂದಿಯು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಮತದಾರರ ಪಟ್ಟಿಯು ವಿಶ್ವಾಸಾರ್ಹವಾಗಿ ಇರುವಂತೆ ನೋಡಿಕೊಳ್ಳುವ ಸಾಂವಿಧಾನಿಕ ಹೊಣೆಗಾರಿಕೆ ನಮ್ಮ ಮೇಲಿದೆ. ಆದ್ದರಿಂದ ಸಮಗ್ರ ಪರಿಶೀಲನೆಗೆ ಮುಂದಾಗಿದ್ದೇವೆ’ ಎಂದಿದೆ.</p>.<p>‘ಬಿಹಾರದಲ್ಲಿ ಚುನಾವಣೆ ಇರುವುದರಿಂದ ಈ ರಾಜ್ಯದ ಮತದಾರರ ಪಟ್ಟಿಯನ್ನು ತಕ್ಷಣವೇ ಸಮಗ್ರವಾಗಿ ಪರಿಶೀಲನೆ ಮಾಡುತ್ತೇವೆ’ ಎಂದು ಆಯೋಗ ಹೇಳಿದೆ. 2003ರಲ್ಲಿ ಕೊನೆಯ ಬಾರಿಗೆ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲನೆಗೆ ಒಳಪಡಿಸಲಾಗಿತ್ತು.</p>.<p>‘ಅಕ್ರಮ ವಲಸಿಗರು ಮತದಾರರ ಪಟ್ಟಿಯಲ್ಲಿ ಸೇರಿಕೊಳ್ಳದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆಯೋಗ ಹೇಳಿದೆ. ಬಿಜೆಪಿಗೆ ಸಹಕಾರ ನೀಡಲು ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಅಕ್ರಮ ಎಸಗುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ಹೊತ್ತಿನಲ್ಲಿಯೇ ಆಯೋಗವು ಈ ನಿರ್ಧಾರ ಕೈಗೊಂಡಿದೆ.</p>.<p><strong>ವಾರದಲ್ಲಿ ಮಾಹಿತಿ ನೀಡಿ:</strong> ‘ಮಹಾರಾಷ್ಟ್ರ ಹಾಗೂ ಹರಿಯಾಣದ ಮತದಾರರ ಪಟ್ಟಿ ಮತ್ತು ಮತದಾನದ ದಿನದ ವಿಡಿಯೊ ದೃಶ್ಯಾವಳಿಗಳನ್ನು ಒಂದು ವಾರದ ಒಳಗೆ ನೀಡಿ. ಮತದಾರರ ಪಟ್ಟಿಯ ಮಾಹಿತಿಯು ಕಂಪ್ಯೂಟರ್ ಸ್ವಯಂ ಚಾಲಿತವಾಗಿ ಪರಿಶೀಲಿಸಬಹುದಾದ ಡಿಜಿಟಲ್ ಸ್ವರೂಪದಲ್ಲಿ ಇರಲಿ’ ಎಂದು ಕೇಂದ್ರ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಆಗ್ರಹಿಸಿದೆ.</p>.<p><strong>‘ಪ್ರಮಾಣ ಪತ್ರ ನೀಡಿ’</strong></p><p>ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳ್ಳುವವರು ಮತ್ತು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಹೋದವರು ತಮ್ಮ ಹುಟ್ಟಿದ ದಿನಾಂಕ ಇರುವ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಆಯೋಗ ಹೇಳಿದೆ. ‘1987ರ ಜುಲೈ 1 ಮತ್ತು 2004ರ ಡಿಸೆಂಬರ್ 2ರ ಮಧ್ಯೆ ಜನಿಸಿರುವವರು ತಮ್ಮ ಹುಟ್ಟಿದ ದಿನಾಂಕ ಮತ್ತು ಸ್ಥಳ ನಮೂದಾಗಿರುವ ದಾಖಲೆಯ ಸಮೇತ ಪ್ರಮಾಣ ಪತ್ರವನ್ನು ನೀಡಬೇಕು’ ಎಂದಿದೆ.</p><p><strong>ಯಾಕಾಗಿ ಪರಿಶೀಲನೆ?: </strong></p><p>ನಗರೀಕರಣ, ನಿರಂತರ ವಲಸೆ, ಹೊಸ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ, ಮೃತಪಟ್ಟ ಮತದಾರರ ಮಾಹಿತಿಯನ್ನು ಆಯೋಗಕ್ಕೆ ನೀಡದೇ ಇರುವುದು,ಬೇರೆ ರಾಜ್ಯದ ಮತದಾರರ ಹೆಸರು ಇನ್ನೊಂದು ರಾಜ್ಯದ ಮತದಾರರ ಪಟ್ಟಿಯಲ್ಲಿ ಇರುವುದು– ಈ ಎಲ್ಲ ಕಾರಣಗಳಿಂದಾಗಿ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಬೇಕಾಗಿದೆ ಎಂದು ಆಯೋಗ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಮುಂದಿನ ವರ್ಷ ಮೇ ಮತ್ತು ಜೂನ್ ಮಧ್ಯೆ ನಡೆಯಲಿರುವ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ಚುನಾವಣೆಗೂ ಮುಂಚಿತವಾಗಿ ಈ ಐದು ರಾಜ್ಯಗಳ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸುತ್ತೇವೆ’ ಎಂದು ಕೇಂದ್ರ ಚುನಾವಣಾ ಆಯೋಗ (ಸಿಇಸಿ) ಬುಧವಾರ ಹೇಳಿದೆ.</p>.<p>‘ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಬಿಹಾರ ಚುನಾವಣೆಯ ಬಳಿಕ ಈ ಕಾರ್ಯ ಆರಂಭಿಸುತ್ತೇವೆ. ಆಯೋಗದ ಬೂತ್ ಮಟ್ಟದ ಸಿಬ್ಬಂದಿಯು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ. ಮತದಾರರ ಪಟ್ಟಿಯು ವಿಶ್ವಾಸಾರ್ಹವಾಗಿ ಇರುವಂತೆ ನೋಡಿಕೊಳ್ಳುವ ಸಾಂವಿಧಾನಿಕ ಹೊಣೆಗಾರಿಕೆ ನಮ್ಮ ಮೇಲಿದೆ. ಆದ್ದರಿಂದ ಸಮಗ್ರ ಪರಿಶೀಲನೆಗೆ ಮುಂದಾಗಿದ್ದೇವೆ’ ಎಂದಿದೆ.</p>.<p>‘ಬಿಹಾರದಲ್ಲಿ ಚುನಾವಣೆ ಇರುವುದರಿಂದ ಈ ರಾಜ್ಯದ ಮತದಾರರ ಪಟ್ಟಿಯನ್ನು ತಕ್ಷಣವೇ ಸಮಗ್ರವಾಗಿ ಪರಿಶೀಲನೆ ಮಾಡುತ್ತೇವೆ’ ಎಂದು ಆಯೋಗ ಹೇಳಿದೆ. 2003ರಲ್ಲಿ ಕೊನೆಯ ಬಾರಿಗೆ ಬಿಹಾರದಲ್ಲಿ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲನೆಗೆ ಒಳಪಡಿಸಲಾಗಿತ್ತು.</p>.<p>‘ಅಕ್ರಮ ವಲಸಿಗರು ಮತದಾರರ ಪಟ್ಟಿಯಲ್ಲಿ ಸೇರಿಕೊಳ್ಳದಂತೆ ಕ್ರಮ ಕೈಗೊಳ್ಳಲಾಗುವುದು’ ಎಂದು ಆಯೋಗ ಹೇಳಿದೆ. ಬಿಜೆಪಿಗೆ ಸಹಕಾರ ನೀಡಲು ಚುನಾವಣಾ ಆಯೋಗವು ಮತದಾರರ ಪಟ್ಟಿಯಲ್ಲಿ ಅಕ್ರಮ ಎಸಗುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿರುವ ಹೊತ್ತಿನಲ್ಲಿಯೇ ಆಯೋಗವು ಈ ನಿರ್ಧಾರ ಕೈಗೊಂಡಿದೆ.</p>.<p><strong>ವಾರದಲ್ಲಿ ಮಾಹಿತಿ ನೀಡಿ:</strong> ‘ಮಹಾರಾಷ್ಟ್ರ ಹಾಗೂ ಹರಿಯಾಣದ ಮತದಾರರ ಪಟ್ಟಿ ಮತ್ತು ಮತದಾನದ ದಿನದ ವಿಡಿಯೊ ದೃಶ್ಯಾವಳಿಗಳನ್ನು ಒಂದು ವಾರದ ಒಳಗೆ ನೀಡಿ. ಮತದಾರರ ಪಟ್ಟಿಯ ಮಾಹಿತಿಯು ಕಂಪ್ಯೂಟರ್ ಸ್ವಯಂ ಚಾಲಿತವಾಗಿ ಪರಿಶೀಲಿಸಬಹುದಾದ ಡಿಜಿಟಲ್ ಸ್ವರೂಪದಲ್ಲಿ ಇರಲಿ’ ಎಂದು ಕೇಂದ್ರ ಚುನಾವಣಾ ಆಯೋಗವನ್ನು ಕಾಂಗ್ರೆಸ್ ಆಗ್ರಹಿಸಿದೆ.</p>.<p><strong>‘ಪ್ರಮಾಣ ಪತ್ರ ನೀಡಿ’</strong></p><p>ಮತದಾರರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಳ್ಳುವವರು ಮತ್ತು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ವಲಸೆ ಹೋದವರು ತಮ್ಮ ಹುಟ್ಟಿದ ದಿನಾಂಕ ಇರುವ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಆಯೋಗ ಹೇಳಿದೆ. ‘1987ರ ಜುಲೈ 1 ಮತ್ತು 2004ರ ಡಿಸೆಂಬರ್ 2ರ ಮಧ್ಯೆ ಜನಿಸಿರುವವರು ತಮ್ಮ ಹುಟ್ಟಿದ ದಿನಾಂಕ ಮತ್ತು ಸ್ಥಳ ನಮೂದಾಗಿರುವ ದಾಖಲೆಯ ಸಮೇತ ಪ್ರಮಾಣ ಪತ್ರವನ್ನು ನೀಡಬೇಕು’ ಎಂದಿದೆ.</p><p><strong>ಯಾಕಾಗಿ ಪರಿಶೀಲನೆ?: </strong></p><p>ನಗರೀಕರಣ, ನಿರಂತರ ವಲಸೆ, ಹೊಸ ಮತದಾರರ ಸಂಖ್ಯೆಯಲ್ಲಿ ಹೆಚ್ಚಳ, ಮೃತಪಟ್ಟ ಮತದಾರರ ಮಾಹಿತಿಯನ್ನು ಆಯೋಗಕ್ಕೆ ನೀಡದೇ ಇರುವುದು,ಬೇರೆ ರಾಜ್ಯದ ಮತದಾರರ ಹೆಸರು ಇನ್ನೊಂದು ರಾಜ್ಯದ ಮತದಾರರ ಪಟ್ಟಿಯಲ್ಲಿ ಇರುವುದು– ಈ ಎಲ್ಲ ಕಾರಣಗಳಿಂದಾಗಿ ಮತದಾರರ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಬೇಕಾಗಿದೆ ಎಂದು ಆಯೋಗ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>