<p class="title"><strong>ನವದೆಹಲಿ:</strong>‘ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಅವಕಾಶವಾಗುವಂತೆ ಕಾನೂನಿನಲ್ಲಿ ಬದಲಾವಣೆ ತನ್ನಿ’ ಎಂದು ಚುನಾವಣಾ ಆಯೋಗವು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದೆ.</p>.<p class="title">‘ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವುದನ್ನು ತಪ್ಪಿಸಲು ಇದು ಅನಿವಾರ್ಯ’ ಎಂದು ಚುನಾವಣಾ ಆಯೋಗ ಹೇಳಿದೆ.</p>.<p class="title">‘ಹೊಸದಾಗಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವವರು, ಅದರ ಜತೆಯಲ್ಲೇ ಆಧಾರ್ ಸಂಖ್ಯೆಯನ್ನೂ ನೀಡಬೇಕು. ಈಗಾಗಲೇ ಮತದಾರರ ಗುರುತಿನ ಚೀಟಿ ಹೊಂದಿರುವವರೂ ಆಧಾರ್ ವಿವರವನ್ನು ಆಯೋಗಕ್ಕೆ ಸಲ್ಲಿಸಬೇಕು. ಇದಕ್ಕಾಗಿ ಜನಪ್ರತಿನಿಧಿಗಳ ಕಾಯ್ದೆಗೆ ತಿದ್ದುಪಡಿ ತರಬೇಕು’ ಎಂದು ಆಯೋಗವು ತನ್ನ ಪತ್ರದಲ್ಲಿ ವಿವರಿಸಿದೆ.</p>.<p class="title">‘2015ರಲ್ಲೇ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಿಸುವ ಅಭಿಯಾನಕ್ಕೆ ಆಯೋಗವು ಚಾಲನೆ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ಈ ಕ್ರಮಕ್ಕೆ ತಡೆ ನೀಡಿತ್ತು. ಕಾನೂನಿಗೆ ತಿದ್ದುಪಡಿ ತರುವುದು ಅನಿವಾರ್ಯ’ ಎಂದು ಕಾನೂನು ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="title"><strong>ನವದೆಹಲಿ:</strong>‘ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಲು ಅವಕಾಶವಾಗುವಂತೆ ಕಾನೂನಿನಲ್ಲಿ ಬದಲಾವಣೆ ತನ್ನಿ’ ಎಂದು ಚುನಾವಣಾ ಆಯೋಗವು ಕೇಂದ್ರ ಕಾನೂನು ಸಚಿವಾಲಯಕ್ಕೆ ಪತ್ರ ಬರೆದಿದೆ.</p>.<p class="title">‘ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚು ಮತದಾರರ ಗುರುತಿನ ಚೀಟಿ ಹೊಂದಿರುವುದನ್ನು ತಪ್ಪಿಸಲು ಇದು ಅನಿವಾರ್ಯ’ ಎಂದು ಚುನಾವಣಾ ಆಯೋಗ ಹೇಳಿದೆ.</p>.<p class="title">‘ಹೊಸದಾಗಿ ಮತದಾರರ ಗುರುತಿನ ಚೀಟಿಗೆ ಅರ್ಜಿ ಸಲ್ಲಿಸುವವರು, ಅದರ ಜತೆಯಲ್ಲೇ ಆಧಾರ್ ಸಂಖ್ಯೆಯನ್ನೂ ನೀಡಬೇಕು. ಈಗಾಗಲೇ ಮತದಾರರ ಗುರುತಿನ ಚೀಟಿ ಹೊಂದಿರುವವರೂ ಆಧಾರ್ ವಿವರವನ್ನು ಆಯೋಗಕ್ಕೆ ಸಲ್ಲಿಸಬೇಕು. ಇದಕ್ಕಾಗಿ ಜನಪ್ರತಿನಿಧಿಗಳ ಕಾಯ್ದೆಗೆ ತಿದ್ದುಪಡಿ ತರಬೇಕು’ ಎಂದು ಆಯೋಗವು ತನ್ನ ಪತ್ರದಲ್ಲಿ ವಿವರಿಸಿದೆ.</p>.<p class="title">‘2015ರಲ್ಲೇ ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಿಸುವ ಅಭಿಯಾನಕ್ಕೆ ಆಯೋಗವು ಚಾಲನೆ ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ಈ ಕ್ರಮಕ್ಕೆ ತಡೆ ನೀಡಿತ್ತು. ಕಾನೂನಿಗೆ ತಿದ್ದುಪಡಿ ತರುವುದು ಅನಿವಾರ್ಯ’ ಎಂದು ಕಾನೂನು ಸಚಿವಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>