<p><strong>ನವದೆಹಲಿ</strong>: ‘ಹಲವು ರಾಜ್ಯಗಳಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯವನ್ನು ಮನಸ್ಸಿಗೆ ತೋಚಿದಂತೆ ನಡೆಸಲಾಗುತ್ತಿಲ್ಲ. ಈ ಪ್ರಕ್ರಿಯೆಯಿಂದ ತೊಂದರೆ ಎದುರಿಸುತ್ತಿರುವುದಾಗಿ ಹೇಳಿ ಈ ವರೆಗೆ ಯಾವೊಬ್ಬ ಮತದಾರನೂ ನ್ಯಾಯಾಲಯದ ಕದ ತಟ್ಟಿಲ್ಲ’ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಗುರುವಾರ ತಿಳಿಸಿದೆ.</p>.<p>‘ಎಸ್ಐಆರ್ ನಡೆಸುತ್ತಿರುವ ವೇಳೆ ಕೆಲವೆಡೆ ತಪ್ಪುಗಳಾಗಿರಬಹುದು. ಆದರೆ, ಇಡೀ ಪ್ರಕ್ರಿಯೆ ನ್ಯಾಯಸಮ್ಮತವಾಗಿಯೇ ನಡೆಯುತ್ತಿದೆ’ ಎಂದು ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಅವರು ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠಕ್ಕೆ ತಿಳಿಸಿದರು.</p>.<p>‘ಎಸ್ಐಆರ್ಗೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿರುವವರು ಯಾರು ಎಂಬುದನ್ನು ಗಮನಿಸಿ. ರಾಜಕೀಯ ಪಕ್ಷಗಳ ನಾಯಕರು, ಖಾಸಗಿ ವ್ಯಕ್ತಿಗಳು ಹಾಗೂ ಎನ್ಜಿಒಗಳು ಕೋರ್ಟ್ಗೆ ಅರ್ಜಿ ಸಲ್ಲಿಸಿವೆ. ತಾವು ಅನಾಮಧೇಯ ವ್ಯಕ್ತಿಗಳನ್ನು ಪ್ರತಿನಿಧಿಸುತ್ತಿದ್ದೇವೆ ಎನ್ನುವ ಮೂಲಕ ಇವರು ಕೋಲಾಹಲ ಸೃಷ್ಟಿಸುತ್ತಿದ್ದಾರೆ’ ಎಂದೂ ದ್ವಿವೇದಿ ಹೇಳಿದರು.</p>.<p>ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರೂ ಈ ಪೀಠದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ‘ಹಲವು ರಾಜ್ಯಗಳಲ್ಲಿ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್ಐಆರ್) ಕಾರ್ಯವನ್ನು ಮನಸ್ಸಿಗೆ ತೋಚಿದಂತೆ ನಡೆಸಲಾಗುತ್ತಿಲ್ಲ. ಈ ಪ್ರಕ್ರಿಯೆಯಿಂದ ತೊಂದರೆ ಎದುರಿಸುತ್ತಿರುವುದಾಗಿ ಹೇಳಿ ಈ ವರೆಗೆ ಯಾವೊಬ್ಬ ಮತದಾರನೂ ನ್ಯಾಯಾಲಯದ ಕದ ತಟ್ಟಿಲ್ಲ’ ಎಂದು ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್ಗೆ ಗುರುವಾರ ತಿಳಿಸಿದೆ.</p>.<p>‘ಎಸ್ಐಆರ್ ನಡೆಸುತ್ತಿರುವ ವೇಳೆ ಕೆಲವೆಡೆ ತಪ್ಪುಗಳಾಗಿರಬಹುದು. ಆದರೆ, ಇಡೀ ಪ್ರಕ್ರಿಯೆ ನ್ಯಾಯಸಮ್ಮತವಾಗಿಯೇ ನಡೆಯುತ್ತಿದೆ’ ಎಂದು ಆಯೋಗದ ಪರ ವಕೀಲ ರಾಕೇಶ್ ದ್ವಿವೇದಿ ಅವರು ಮುಖ್ಯನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠಕ್ಕೆ ತಿಳಿಸಿದರು.</p>.<p>‘ಎಸ್ಐಆರ್ಗೆ ಆಕ್ಷೇಪಿಸಿ ಅರ್ಜಿ ಸಲ್ಲಿಸಿರುವವರು ಯಾರು ಎಂಬುದನ್ನು ಗಮನಿಸಿ. ರಾಜಕೀಯ ಪಕ್ಷಗಳ ನಾಯಕರು, ಖಾಸಗಿ ವ್ಯಕ್ತಿಗಳು ಹಾಗೂ ಎನ್ಜಿಒಗಳು ಕೋರ್ಟ್ಗೆ ಅರ್ಜಿ ಸಲ್ಲಿಸಿವೆ. ತಾವು ಅನಾಮಧೇಯ ವ್ಯಕ್ತಿಗಳನ್ನು ಪ್ರತಿನಿಧಿಸುತ್ತಿದ್ದೇವೆ ಎನ್ನುವ ಮೂಲಕ ಇವರು ಕೋಲಾಹಲ ಸೃಷ್ಟಿಸುತ್ತಿದ್ದಾರೆ’ ಎಂದೂ ದ್ವಿವೇದಿ ಹೇಳಿದರು.</p>.<p>ನ್ಯಾಯಮೂರ್ತಿ ಜಾಯ್ಮಾಲ್ಯ ಬಾಗ್ಚಿ ಅವರೂ ಈ ಪೀಠದಲ್ಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>