<p><strong>ನವದೆಹಲಿ:</strong> ದೇಶದ ನಿಧಾನಗತಿಯ ಆರ್ಥಿಕ ಬೆಳವಣಿಗೆಯನ್ನು ‘ಹಿಂದೂ ಬೆಳವಣಿಗೆ ದರ’ ಎಂದು ಕರೆಯುವ ಮೂಲಕ, ಸ್ವಯಂಘೋಷಿತ ಬುದ್ಧಿಜೀವಿಗಳು ನಾಗರಿಕತೆಗೆ ಅವಮಾನ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. </p>.<p>‘ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗ’ದಲ್ಲಿ ಶನಿವಾರ ಅವರು ಮಾತನಾಡಿದರು. ‘ಮುಂದಿನ 10 ವರ್ಷಗಳಲ್ಲಿ, ಗುಲಾಮಗಿರಿ ಮನಃಸ್ಥಿತಿಯಿಂದ ದೇಶವನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು’ ಎಂದು ದೇಶದ ಜನರಿಗೆ ಕರೆ ನೀಡಿದರು. </p>.<p>‘ಜಗತ್ತು ಆರ್ಥಿಕ ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಭಾರತವು ಆತ್ಮವಿಶ್ವಾಸದಿಂದಿದೆ. ಯಾವುದೇ ದೇಶವು ಆತ್ಮವಿಶ್ವಾಸವಿಲ್ಲದೇ ಮುಂದುವರಿಯಲು ಸಾಧ್ಯವಿಲ್ಲ. ಭಾರತದ ಪ್ರತಿಯೊಂದು ವಲಯವೂ ವಸಾಹತುಶಾಹಿ ಮನಃಸ್ಥಿತಿಯನ್ನು ತೊರೆದು ಹೊಸ ಸಾಧನೆಗಳನ್ನು ಮಾಡುತ್ತಿದೆ’ ಎಂದು ಹೇಳಿದರು. </p>.<p class="title">‘ಅಭಿವೃದ್ಧಿ ಹೊಂದಿದ ಭಾರತದ ಗುರಿ ಸಾಧಿಸಲು ವಸಾಹತುಶಾಹಿ ಮನಃಸ್ಥಿತಿಯು ಪ್ರಮುಖ ಅಡಚಣೆಯಾಗಿದೆ. ಇದರಿಂದ ಮುಕ್ತವಾಗುವತ್ತ ದೇಶವು ಕೆಲಸ ಮಾಡುತ್ತಿದೆ. ದೇಶದ ನಿಧಾನಗತಿಯ ಆರ್ಥಿಕತೆಯ ಮೇಲೆ ಹಿಂದೂ ನಾಗರಿಕತೆಯು ಪರಿಣಾಮ ಬೀರಿದೆ ಎಂಬ ತಪ್ಪು ಗ್ರಹಿಕೆಯನ್ನು ತಳ್ಳಿಹಾಕಲಾಗುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೇಶದ ನಿಧಾನಗತಿಯ ಆರ್ಥಿಕ ಬೆಳವಣಿಗೆಯನ್ನು ‘ಹಿಂದೂ ಬೆಳವಣಿಗೆ ದರ’ ಎಂದು ಕರೆಯುವ ಮೂಲಕ, ಸ್ವಯಂಘೋಷಿತ ಬುದ್ಧಿಜೀವಿಗಳು ನಾಗರಿಕತೆಗೆ ಅವಮಾನ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. </p>.<p>‘ಹಿಂದೂಸ್ತಾನ್ ಟೈಮ್ಸ್ ನಾಯಕತ್ವ ಶೃಂಗ’ದಲ್ಲಿ ಶನಿವಾರ ಅವರು ಮಾತನಾಡಿದರು. ‘ಮುಂದಿನ 10 ವರ್ಷಗಳಲ್ಲಿ, ಗುಲಾಮಗಿರಿ ಮನಃಸ್ಥಿತಿಯಿಂದ ದೇಶವನ್ನು ಸಂಪೂರ್ಣವಾಗಿ ಮುಕ್ತಗೊಳಿಸಬೇಕು’ ಎಂದು ದೇಶದ ಜನರಿಗೆ ಕರೆ ನೀಡಿದರು. </p>.<p>‘ಜಗತ್ತು ಆರ್ಥಿಕ ಅನಿಶ್ಚಿತತೆಯನ್ನು ಎದುರಿಸುತ್ತಿರುವ ಸಮಯದಲ್ಲಿ ಭಾರತವು ಆತ್ಮವಿಶ್ವಾಸದಿಂದಿದೆ. ಯಾವುದೇ ದೇಶವು ಆತ್ಮವಿಶ್ವಾಸವಿಲ್ಲದೇ ಮುಂದುವರಿಯಲು ಸಾಧ್ಯವಿಲ್ಲ. ಭಾರತದ ಪ್ರತಿಯೊಂದು ವಲಯವೂ ವಸಾಹತುಶಾಹಿ ಮನಃಸ್ಥಿತಿಯನ್ನು ತೊರೆದು ಹೊಸ ಸಾಧನೆಗಳನ್ನು ಮಾಡುತ್ತಿದೆ’ ಎಂದು ಹೇಳಿದರು. </p>.<p class="title">‘ಅಭಿವೃದ್ಧಿ ಹೊಂದಿದ ಭಾರತದ ಗುರಿ ಸಾಧಿಸಲು ವಸಾಹತುಶಾಹಿ ಮನಃಸ್ಥಿತಿಯು ಪ್ರಮುಖ ಅಡಚಣೆಯಾಗಿದೆ. ಇದರಿಂದ ಮುಕ್ತವಾಗುವತ್ತ ದೇಶವು ಕೆಲಸ ಮಾಡುತ್ತಿದೆ. ದೇಶದ ನಿಧಾನಗತಿಯ ಆರ್ಥಿಕತೆಯ ಮೇಲೆ ಹಿಂದೂ ನಾಗರಿಕತೆಯು ಪರಿಣಾಮ ಬೀರಿದೆ ಎಂಬ ತಪ್ಪು ಗ್ರಹಿಕೆಯನ್ನು ತಳ್ಳಿಹಾಕಲಾಗುತ್ತಿದೆ’ ಎಂದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>