<p><strong>ನವದೆಹಲಿ:</strong> ‘ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕೆ.ಕವಿತಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಆಮ್ ಆದ್ಮಿ ಪಕ್ಷದ ನಾಯಕರಿಗೆ ₹100 ಕೋಟಿ ಕಿಕ್ಬ್ಯಾಕ್ ನೀಡಿದ್ದಾರೆ ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ಆರೋಪವು ಸತ್ಯಕ್ಕೆ ದೂರವಾಗಿದೆ’ ಎಂದು ದೆಹಲಿ ಹಣಕಾಸು ಸಚಿವೆ ಅತಿಶಿ ತಿಳಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯುವುದು ಬಿಜೆಪಿಯ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಯನ್ನು (ಇ.ಡಿ) ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿದ್ದಾರೆ.</p><p>ಅಬಕಾರಿ ನೀತಿ ಮೂಲಕ ಅನುಕೂಲ ಪಡೆದುಕೊಳ್ಳಲು ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಎಎಪಿಗೆ ₹100 ಕೋಟಿ ನೀಡುವ ಮೂಲಕ ಕೆ.ಕವಿತಾ ಅವರು ‘ಸಂಚು’ ನಡೆಸಿದ್ದರು ಎಂದು ಇ.ಡಿ ಆರೋಪಿಸಿತ್ತು.</p><p>ಎಎಪಿ ಪ್ರಮುಖ ನಾಯಕರಾದ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅವರ ಜೊತೆಗೂಡಿ ಕವಿತಾ ಮತ್ತು ಇತರರು ಸಂಚು ನಡೆಸಿದ್ದರು ಎಂದು ಇ.ಡಿ ದೂರಿತ್ತು.</p><p>ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, 46 ವರ್ಷದ ಕವಿತಾ ಅವರನ್ನು ಇ.ಡಿ ಕಳೆದ ವಾರ ಹೈದರಾಬಾದ್ನ ಅವರ ನಿವಾಸದಲ್ಲಿಯೇ ಬಂಧಿಸಿತ್ತು. ಕವಿತಾ ಅವರನ್ನು ಮಾರ್ಚ್ 23ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿದೆ.</p>.ಅಬಕಾರಿ ನೀತಿಯಲ್ಲಿ ಲಾಭಕ್ಕೆ ಸಂಚು ಎಎಪಿಗೆ ₹100 ಕೋಟಿ ಪಾವತಿ: ಇ.ಡಿ.ದೆಹಲಿ ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಕವಿತಾ.ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ BRS ನಾಯಕಿ ಕವಿತಾ ಬಂಧನ.ಅಬಕಾರಿ ನೀತಿ ಹಗರಣ | ನನ್ನ ಬಂಧನ ಕಾನೂನುಬಾಹಿರ: ಇ.ಡಿ ವಿರುದ್ಧ ಗುಡುಗಿದ ಕವಿತಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ‘ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಎಂಎಲ್ಸಿ ಕೆ.ಕವಿತಾ ಅವರು ದೆಹಲಿ ಅಬಕಾರಿ ನೀತಿ ಪ್ರಕರಣ ಸಂಬಂಧ ಆಮ್ ಆದ್ಮಿ ಪಕ್ಷದ ನಾಯಕರಿಗೆ ₹100 ಕೋಟಿ ಕಿಕ್ಬ್ಯಾಕ್ ನೀಡಿದ್ದಾರೆ ಎಂಬ ಜಾರಿ ನಿರ್ದೇಶನಾಲಯದ (ಇ.ಡಿ) ಆರೋಪವು ಸತ್ಯಕ್ಕೆ ದೂರವಾಗಿದೆ’ ಎಂದು ದೆಹಲಿ ಹಣಕಾಸು ಸಚಿವೆ ಅತಿಶಿ ತಿಳಿಸಿದ್ದಾರೆ.</p><p>ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ದೆಹಲಿ ಮುಖ್ಯಮಂತ್ರಿ ಹಾಗೂ ಎಎಪಿ ರಾಷ್ಟ್ರೀಯ ಸಂಚಾಲಕರಾದ ಅರವಿಂದ ಕೇಜ್ರಿವಾಲ್ ಅವರನ್ನು ಲೋಕಸಭೆ ಚುನಾವಣೆಯಲ್ಲಿ ಪ್ರಚಾರ ಮಾಡದಂತೆ ತಡೆಯುವುದು ಬಿಜೆಪಿಯ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಯನ್ನು (ಇ.ಡಿ) ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿದ್ದಾರೆ.</p><p>ಅಬಕಾರಿ ನೀತಿ ಮೂಲಕ ಅನುಕೂಲ ಪಡೆದುಕೊಳ್ಳಲು ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಎಎಪಿಗೆ ₹100 ಕೋಟಿ ನೀಡುವ ಮೂಲಕ ಕೆ.ಕವಿತಾ ಅವರು ‘ಸಂಚು’ ನಡೆಸಿದ್ದರು ಎಂದು ಇ.ಡಿ ಆರೋಪಿಸಿತ್ತು.</p><p>ಎಎಪಿ ಪ್ರಮುಖ ನಾಯಕರಾದ ಅರವಿಂದ ಕೇಜ್ರಿವಾಲ್, ಮನೀಶ್ ಸಿಸೋಡಿಯಾ ಅವರ ಜೊತೆಗೂಡಿ ಕವಿತಾ ಮತ್ತು ಇತರರು ಸಂಚು ನಡೆಸಿದ್ದರು ಎಂದು ಇ.ಡಿ ದೂರಿತ್ತು.</p><p>ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ, 46 ವರ್ಷದ ಕವಿತಾ ಅವರನ್ನು ಇ.ಡಿ ಕಳೆದ ವಾರ ಹೈದರಾಬಾದ್ನ ಅವರ ನಿವಾಸದಲ್ಲಿಯೇ ಬಂಧಿಸಿತ್ತು. ಕವಿತಾ ಅವರನ್ನು ಮಾರ್ಚ್ 23ರವರೆಗೆ ಇ.ಡಿ ವಶಕ್ಕೆ ಒಪ್ಪಿಸಲಾಗಿದೆ.</p>.ಅಬಕಾರಿ ನೀತಿಯಲ್ಲಿ ಲಾಭಕ್ಕೆ ಸಂಚು ಎಎಪಿಗೆ ₹100 ಕೋಟಿ ಪಾವತಿ: ಇ.ಡಿ.ದೆಹಲಿ ಅಬಕಾರಿ ನೀತಿ ಪ್ರಕರಣ: ಬಂಧನ ಪ್ರಶ್ನಿಸಿ 'ಸುಪ್ರೀಂ' ಮೆಟ್ಟಿಲೇರಿದ ಕವಿತಾ.ದೆಹಲಿ ಅಬಕಾರಿ ನೀತಿ ಹಗರಣ: ಭ್ರಷ್ಟಾಚಾರ ಪ್ರಕರಣದಲ್ಲಿ BRS ನಾಯಕಿ ಕವಿತಾ ಬಂಧನ.ಅಬಕಾರಿ ನೀತಿ ಹಗರಣ | ನನ್ನ ಬಂಧನ ಕಾನೂನುಬಾಹಿರ: ಇ.ಡಿ ವಿರುದ್ಧ ಗುಡುಗಿದ ಕವಿತಾ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>