<p><strong>ನವದೆಹಲಿ (ಪಿಟಿಐ):</strong> ಹಣ ಅಕ್ರಮ ವರ್ಗಾವಣೆ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ), ಗುರುಗ್ರಾಮ ಮೂಲದ ‘ಎಂ3ಎಂ’ ಸಮೂಹದ ನಿರ್ದೇಶಕ ರೂಪಕುಮಾರ್ ಬನ್ಸಲ್ ಎಂಬುವವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.</p>.<p>ತನಿಖೆಯ ಭಾಗವಾಗಿ ಬನ್ಸಾಲ್ ಅವರನ್ನು ಗುರುವಾರ ವಶಕ್ಕೆ ಪಡೆಯಲಾಗಿತ್ತು ಎಂದೂ ಅವರು ತಿಳಿಸಿದ್ದಾರೆ.</p>.<p>ಜೂನ್ 1ರಂದು ‘ಎಂ3ಎಂ’ ಸಮೂಹದ ಕಚೇರಿ ಹಾಗೂ ನಿರ್ದೇಶಕರಿಗೆ ಸೇರಿದ ಸ್ಥಳಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ದೆಹಲಿ ಮತ್ತು ಗುರುಗ್ರಾಮ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಐಆರ್ಇಒ’ ಎಂಬ ರಿಯಲ್ ಎಸ್ಟೇಟ್ ಸಮೂಹದ ಮೇಲೂ ದಾಳಿ ನಡೆಸಿತ್ತು.</p>.<p>‘ಈ ಎರಡು ಸಮೂಹದ ಮೇಲೆ ನಡೆಸಿದ ದಾಳಿ ವೇಳೆ, ₹ 60 ಕೋಟಿ ಮೌಲ್ಯದ ಐಷಾರಾಮಿ ಕಾರುಗಳು, ₹ 5.75 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಇ.ಡಿ ಸೋಮವಾರ ತಿಳಿಸಿತ್ತು.</p>.<p>ಈ ದಾಳಿ ಹಾಗೂ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ, ‘ಎಂ3ಎಂ’ ಸಮೂಹದ ನಿರ್ದೇಶಕರಾದ ಬಸಂತ್ ಬನ್ಸಲ್, ರೂಪಕುಮಾರ್ ಬನ್ಸಲ್ ಹಾಗೂ ಪಂಕಜ್ ಬನ್ಸಲ್ ಅವರು, ‘ತಾವು ಯಾವುದೇ ತಪ್ಪು ಮಾಡಿಲ್ಲ’ ಎಂದು ಹೇಳಿ, ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಹಣ ಅಕ್ರಮ ವರ್ಗಾವಣೆ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ), ಗುರುಗ್ರಾಮ ಮೂಲದ ‘ಎಂ3ಎಂ’ ಸಮೂಹದ ನಿರ್ದೇಶಕ ರೂಪಕುಮಾರ್ ಬನ್ಸಲ್ ಎಂಬುವವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.</p>.<p>ತನಿಖೆಯ ಭಾಗವಾಗಿ ಬನ್ಸಾಲ್ ಅವರನ್ನು ಗುರುವಾರ ವಶಕ್ಕೆ ಪಡೆಯಲಾಗಿತ್ತು ಎಂದೂ ಅವರು ತಿಳಿಸಿದ್ದಾರೆ.</p>.<p>ಜೂನ್ 1ರಂದು ‘ಎಂ3ಎಂ’ ಸಮೂಹದ ಕಚೇರಿ ಹಾಗೂ ನಿರ್ದೇಶಕರಿಗೆ ಸೇರಿದ ಸ್ಥಳಗಳ ಮೇಲೆ ಇ.ಡಿ ದಾಳಿ ನಡೆಸಿತ್ತು. ದೆಹಲಿ ಮತ್ತು ಗುರುಗ್ರಾಮ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಐಆರ್ಇಒ’ ಎಂಬ ರಿಯಲ್ ಎಸ್ಟೇಟ್ ಸಮೂಹದ ಮೇಲೂ ದಾಳಿ ನಡೆಸಿತ್ತು.</p>.<p>‘ಈ ಎರಡು ಸಮೂಹದ ಮೇಲೆ ನಡೆಸಿದ ದಾಳಿ ವೇಳೆ, ₹ 60 ಕೋಟಿ ಮೌಲ್ಯದ ಐಷಾರಾಮಿ ಕಾರುಗಳು, ₹ 5.75 ಕೋಟಿ ಮೌಲ್ಯದ ಚಿನ್ನಾಭರಣಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಇ.ಡಿ ಸೋಮವಾರ ತಿಳಿಸಿತ್ತು.</p>.<p>ಈ ದಾಳಿ ಹಾಗೂ ಸಮನ್ಸ್ ಜಾರಿ ಮಾಡಿದ ಬೆನ್ನಲ್ಲೇ, ‘ಎಂ3ಎಂ’ ಸಮೂಹದ ನಿರ್ದೇಶಕರಾದ ಬಸಂತ್ ಬನ್ಸಲ್, ರೂಪಕುಮಾರ್ ಬನ್ಸಲ್ ಹಾಗೂ ಪಂಕಜ್ ಬನ್ಸಲ್ ಅವರು, ‘ತಾವು ಯಾವುದೇ ತಪ್ಪು ಮಾಡಿಲ್ಲ’ ಎಂದು ಹೇಳಿ, ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>