<p><strong>ನವದೆಹಲಿ: </strong>ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಹೂಡಿಕೆದಾರರಿಗೆ ₹ 6,300 ಕೋಟಿಗೂ ಅಧಿಕ ಮೊತ್ತ ವಂಚಿಸಿ, ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಅಗ್ರಿ ಗೋಲ್ಡ್ ಸಮೂಹದ ಮೂವರು ಪ್ರವರ್ತಕರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ತಿಳಿಸಿದೆ.</p>.<p>ಅವ್ವ ವೆಂಕಟರಾಮರಾವ್, ಅವ್ವ ವೆಂಕಟ ಎಸ್.ನಾರಾಯಣರಾವ್ ಹಾಗೂ ಅವ್ವ ಹೇಮಸುಂದರ ವರಪ್ರಸಾದ್ ಎಂಬುವವರೇ ಬಂಧಿತರು. ಇವರು ಈ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.</p>.<p>‘ಮೂವರನ್ನು ಹೈದರಾಬಾದ್ನಲ್ಲಿರುವ ವಿಶೇಷ ಕೋರ್ಟ್ಗೆ ಮಂಗಳವಾರ ಹಾಜರುಪಡಿಸಲಾಯಿತು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದೂ ಇ.ಡಿ ಅಧಿಕಾರಿಗಳು ಹೇಳಿದ್ದಾರೆ.</p>.<p>ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಮೂವರ ವಿರುದ್ಧ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ವಿವಿಧೆಡೆ ಎಫ್ಐಆರ್ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಇ.ಡಿ, ವಿಜಯವಾಡ, ಹೈದರಾಬಾದ್ಗಳಲ್ಲಿರುವ ಕಂಪನಿಯ ಪ್ರವರ್ತಕರು ಹಾಗೂ ಲೆಕ್ಕಪರಿಶೋಧಕರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿತ್ತು. ಈ ವೇಳೆ, ₹ 22 ಲಕ್ಷ ನಗದು, ಆಸ್ತಿಗೆ ಸಂಬಂಧಿಸಿದ ದಾಖಲೆಗಳು, ಡಿಜಿಟಲ್ ಸಾಧನಗಳನ್ನು ಜಪ್ತಿ ಮಾಡಲಾಯಿತು ಎಂದು ಇ.ಡಿ ಮೂಲಗಳು ಹೇಳಿವೆ.</p>.<p>ಒಡಿಶಾ, ತಮಿಳುನಾಡು, ಮಹಾರಾಷ್ಟ್ರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಛತ್ತೀಸಗಡದಲ್ಲಿ ಸಹ ಜನರು ಈ ಕಂಪನಿಯಲ್ಲಿ ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ: </strong>ಹಣ ದ್ವಿಗುಣಗೊಳಿಸುವ ಆಮಿಷವೊಡ್ಡಿ ಹೂಡಿಕೆದಾರರಿಗೆ ₹ 6,300 ಕೋಟಿಗೂ ಅಧಿಕ ಮೊತ್ತ ವಂಚಿಸಿ, ಅಕ್ರಮ ಹಣ ವರ್ಗಾವಣೆ ಮಾಡಿದ ಆರೋಪದ ಮೇಲೆ ಅಗ್ರಿ ಗೋಲ್ಡ್ ಸಮೂಹದ ಮೂವರು ಪ್ರವರ್ತಕರನ್ನು ಬಂಧಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಬುಧವಾರ ತಿಳಿಸಿದೆ.</p>.<p>ಅವ್ವ ವೆಂಕಟರಾಮರಾವ್, ಅವ್ವ ವೆಂಕಟ ಎಸ್.ನಾರಾಯಣರಾವ್ ಹಾಗೂ ಅವ್ವ ಹೇಮಸುಂದರ ವರಪ್ರಸಾದ್ ಎಂಬುವವರೇ ಬಂಧಿತರು. ಇವರು ಈ ವಂಚನೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ದಾರೆ.</p>.<p>‘ಮೂವರನ್ನು ಹೈದರಾಬಾದ್ನಲ್ಲಿರುವ ವಿಶೇಷ ಕೋರ್ಟ್ಗೆ ಮಂಗಳವಾರ ಹಾಜರುಪಡಿಸಲಾಯಿತು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ’ ಎಂದೂ ಇ.ಡಿ ಅಧಿಕಾರಿಗಳು ಹೇಳಿದ್ದಾರೆ.</p>.<p>ಹೂಡಿಕೆದಾರರಿಗೆ ವಂಚಿಸಿದ ಆರೋಪದ ಮೇಲೆ ಮೂವರ ವಿರುದ್ಧ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳ ವಿವಿಧೆಡೆ ಎಫ್ಐಆರ್ ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡಿದ್ದ ಇ.ಡಿ, ವಿಜಯವಾಡ, ಹೈದರಾಬಾದ್ಗಳಲ್ಲಿರುವ ಕಂಪನಿಯ ಪ್ರವರ್ತಕರು ಹಾಗೂ ಲೆಕ್ಕಪರಿಶೋಧಕರಿಗೆ ಸೇರಿದ ಮನೆ, ಕಚೇರಿಗಳ ಮೇಲೆ ಇತ್ತೀಚೆಗೆ ದಾಳಿ ನಡೆಸಿತ್ತು. ಈ ವೇಳೆ, ₹ 22 ಲಕ್ಷ ನಗದು, ಆಸ್ತಿಗೆ ಸಂಬಂಧಿಸಿದ ದಾಖಲೆಗಳು, ಡಿಜಿಟಲ್ ಸಾಧನಗಳನ್ನು ಜಪ್ತಿ ಮಾಡಲಾಯಿತು ಎಂದು ಇ.ಡಿ ಮೂಲಗಳು ಹೇಳಿವೆ.</p>.<p>ಒಡಿಶಾ, ತಮಿಳುನಾಡು, ಮಹಾರಾಷ್ಟ್ರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು ಹಾಗೂ ಛತ್ತೀಸಗಡದಲ್ಲಿ ಸಹ ಜನರು ಈ ಕಂಪನಿಯಲ್ಲಿ ಹೂಡಿಕೆ ಮಾಡಿ, ಹಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>