<p><strong>ರಾಯ್ಪುರ</strong>:ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಸೌಮ್ಯಾಚೌರಾಸಿಯಾ ಅವರನ್ನುಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ (ಪಿಎಂಎಲ್ಎ) ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.</p>.<p>ರಾಜ್ಯದಲ್ಲಿ ನಡೆದಿರುವಗಣಿ ತೆರಿಗೆ ಹಗರಣಕ್ಕೆ ಸಂಬಂಧಿಸಿದತನಿಖೆಯ ವೇಳೆ,ಪಿಎಂಎಲ್ಎನ ಕ್ರಿಮಿನಲ್ ಸೆಕ್ಷನ್ಗಳಅಡಿಯಲ್ಲಿ ಚೌರಾಸಿಯಾ ಅವರನ್ನು ಬಂಧಿಸಲಾಗಿದೆ. ಅವರು ಸರ್ಕಾರದ ಪ್ರಭಾವಿ ಅಧಿಕಾರಿ ಎನಿಸಿದ್ದರು. ಬಂಧನದ ಬಳಿಕ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ರಾಜ್ಯದಿಂದ ರಫ್ತಾಗುವಪ್ರತಿ ಟನ್ ಕಲ್ಲಿದ್ದಲಿಗೆಅಕ್ರಮವಾಗಿ ₹ 25 ಸುಂಕ ವಿಧಿಸಲಾಗಿದೆ. ಈ ಭಾರಿ ಹಗರಣದಲ್ಲಿ ಹಿರಿಯ ಅಧಿಕಾರಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಮಧ್ಯವರ್ತಿಗಳು ಭಾಗಿಯಾಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ದೂರು ದಾಖಲಿಸಿಕೊಂಡಿತ್ತು. ಅದರಂತೆ ಇ.ಡಿ. ರಾಜ್ಯದಾದ್ಯಂತ ಕಾರ್ಯಾಚರಣೆ ಆರಂಭಿಸಿತ್ತು.</p>.<p>ಐಎಎಸ್ ಅಧಿಕಾರಿ ಸಮೀರ್ ಬಿಷ್ಣೋಯಿ ಹಾಗೂ ಇನ್ನಿಬ್ಬರನ್ನುಅಕ್ಟೋಬರ್ನಲ್ಲಿ ಬಂಧಿಸಲಾಗಿತ್ತು.</p>.<p>ಇ.ಡಿ ಕಾರ್ಯಾಚರಣೆ ವಿರುದ್ಧ ಕಳೆದವಾರ ವಾಗ್ದಾಳಿ ನಡೆಸಿದ್ದ ಬಘೇಲ್ ಅವರು, ತನಿಖಾ ಸಂಸ್ಥೆಯು ತನ್ನ ಮಿತಿ ಮೀರುತ್ತಿದೆ. ರಾಜ್ಯದ ಜನರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯ್ಪುರ</strong>:ಛತ್ತೀಸಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ಕಚೇರಿಯ ಉಪ ಕಾರ್ಯದರ್ಶಿ ಸೌಮ್ಯಾಚೌರಾಸಿಯಾ ಅವರನ್ನುಹಣ ಅಕ್ರಮ ವರ್ಗಾವಣೆ ನಿಯಂತ್ರಣ ಕಾಯ್ದೆಯಡಿ (ಪಿಎಂಎಲ್ಎ) ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ಬಂಧಿಸಿದ್ದಾರೆ.</p>.<p>ರಾಜ್ಯದಲ್ಲಿ ನಡೆದಿರುವಗಣಿ ತೆರಿಗೆ ಹಗರಣಕ್ಕೆ ಸಂಬಂಧಿಸಿದತನಿಖೆಯ ವೇಳೆ,ಪಿಎಂಎಲ್ಎನ ಕ್ರಿಮಿನಲ್ ಸೆಕ್ಷನ್ಗಳಅಡಿಯಲ್ಲಿ ಚೌರಾಸಿಯಾ ಅವರನ್ನು ಬಂಧಿಸಲಾಗಿದೆ. ಅವರು ಸರ್ಕಾರದ ಪ್ರಭಾವಿ ಅಧಿಕಾರಿ ಎನಿಸಿದ್ದರು. ಬಂಧನದ ಬಳಿಕ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.</p>.<p>ರಾಜ್ಯದಿಂದ ರಫ್ತಾಗುವಪ್ರತಿ ಟನ್ ಕಲ್ಲಿದ್ದಲಿಗೆಅಕ್ರಮವಾಗಿ ₹ 25 ಸುಂಕ ವಿಧಿಸಲಾಗಿದೆ. ಈ ಭಾರಿ ಹಗರಣದಲ್ಲಿ ಹಿರಿಯ ಅಧಿಕಾರಿಗಳು, ಉದ್ಯಮಿಗಳು, ರಾಜಕಾರಣಿಗಳು ಮತ್ತು ಮಧ್ಯವರ್ತಿಗಳು ಭಾಗಿಯಾಗಿದ್ದಾರೆ ಎಂದು ಆದಾಯ ತೆರಿಗೆ ಇಲಾಖೆ ದೂರು ದಾಖಲಿಸಿಕೊಂಡಿತ್ತು. ಅದರಂತೆ ಇ.ಡಿ. ರಾಜ್ಯದಾದ್ಯಂತ ಕಾರ್ಯಾಚರಣೆ ಆರಂಭಿಸಿತ್ತು.</p>.<p>ಐಎಎಸ್ ಅಧಿಕಾರಿ ಸಮೀರ್ ಬಿಷ್ಣೋಯಿ ಹಾಗೂ ಇನ್ನಿಬ್ಬರನ್ನುಅಕ್ಟೋಬರ್ನಲ್ಲಿ ಬಂಧಿಸಲಾಗಿತ್ತು.</p>.<p>ಇ.ಡಿ ಕಾರ್ಯಾಚರಣೆ ವಿರುದ್ಧ ಕಳೆದವಾರ ವಾಗ್ದಾಳಿ ನಡೆಸಿದ್ದ ಬಘೇಲ್ ಅವರು, ತನಿಖಾ ಸಂಸ್ಥೆಯು ತನ್ನ ಮಿತಿ ಮೀರುತ್ತಿದೆ. ರಾಜ್ಯದ ಜನರನ್ನು ಅಮಾನವೀಯವಾಗಿ ನಡೆಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>