<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶಾನಲಯವು (ಇ.ಡಿ), ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟನನ್ನು ಶನಿವಾರ ಬಂಧಿಸಿದೆ.</p>.<p>ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.</p>.<p>ಇದನ್ನೂ ಓದಿ: <a href="https://www.prajavani.net/india-news/delhi-excise-policy-pmla-case-ed-arrests-advertising-company-director-1013835.html" itemprop="url">ದೆಹಲಿ ಅಬಕಾರಿ ನೀತಿ ಹಗರಣ: ಜಾಹೀರಾತು ಕಂಪನಿ ನಿರ್ದೇಶಕ ಬಂಧನ </a></p>.<p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ರಾಘವ್ ಮಾಗುಂಟ ಅವರನ್ನು ಬಂಧಿಸಲಾಗಿದೆ.</p>.<p>ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಕಸ್ಟಡಿಗೆ ಕೇಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ವಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿಯನ್ನು ಇ.ಡಿ ಬಂಧಿಸಿದೆ.</p>.<p>ಪ್ರಕರಣದಲ್ಲಿ ಇದುವರೆಗೆ ಇ.ಡಿ ಎರಡು ಚಾರ್ಜ್ಶೀಟ್ ಫೈಲ್ ಮಾಡಿದೆ. ಕೇಂದ್ರ ತನಿಖಾ ದಳ ಸಹ ಎಫ್ಐಆರ್ ದಾಖಲಿಸಿದೆ.</p>.<p>ಸಿಬಿಐ ಮತ್ತು ಇ.ಡಿ ದೂರುಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸರ್ಕಾರದ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ದೆಹಲಿ ಅಬಕಾರಿ ನೀತಿ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶಾನಲಯವು (ಇ.ಡಿ), ವೈಎಸ್ಆರ್ ಕಾಂಗ್ರೆಸ್ ಸಂಸದ ಮಾಗುಂಟ ಶ್ರೀನಿವಾಸುಲು ರೆಡ್ಡಿ ಅವರ ಪುತ್ರ ರಾಘವ್ ಮಾಗುಂಟನನ್ನು ಶನಿವಾರ ಬಂಧಿಸಿದೆ.</p>.<p>ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.</p>.<p>ಇದನ್ನೂ ಓದಿ: <a href="https://www.prajavani.net/india-news/delhi-excise-policy-pmla-case-ed-arrests-advertising-company-director-1013835.html" itemprop="url">ದೆಹಲಿ ಅಬಕಾರಿ ನೀತಿ ಹಗರಣ: ಜಾಹೀರಾತು ಕಂಪನಿ ನಿರ್ದೇಶಕ ಬಂಧನ </a></p>.<p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ರಾಘವ್ ಮಾಗುಂಟ ಅವರನ್ನು ಬಂಧಿಸಲಾಗಿದೆ.</p>.<p>ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಕಸ್ಟಡಿಗೆ ಕೇಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಈ ವಾರದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ನ ಶಿರೋಮಣಿ ಅಕಾಲಿ ದಳದ ಶಾಸಕ ದೀಪ್ ಮಲ್ಹೋತ್ರಾ ಅವರ ಪುತ್ರ ಗೌತಮ್ ಮಲ್ಹೋತ್ರಾ ಮತ್ತು ಜಾಹೀರಾತು ಕಂಪನಿ ಚಾರಿಯಟ್ ಪ್ರೊಡಕ್ಷನ್ ಪ್ರೈವೆಟ್ ಲಿಮಿಟೆಡ್ ನಿರ್ದೇಶಕ ರಾಜೇಶ್ ಜೋಶಿಯನ್ನು ಇ.ಡಿ ಬಂಧಿಸಿದೆ.</p>.<p>ಪ್ರಕರಣದಲ್ಲಿ ಇದುವರೆಗೆ ಇ.ಡಿ ಎರಡು ಚಾರ್ಜ್ಶೀಟ್ ಫೈಲ್ ಮಾಡಿದೆ. ಕೇಂದ್ರ ತನಿಖಾ ದಳ ಸಹ ಎಫ್ಐಆರ್ ದಾಖಲಿಸಿದೆ.</p>.<p>ಸಿಬಿಐ ಮತ್ತು ಇ.ಡಿ ದೂರುಗಳಲ್ಲಿ ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಸರ್ಕಾರದ ಇತರೆ ಅಧಿಕಾರಿಗಳು ಆರೋಪಿಗಳೆಂದು ಹೆಸರಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>