ಕೋಲ್ಕತ್ತ:ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಮಂಗಳವಾರ ತೃಣಮೂಲ ಕಾಂಗ್ರೆಸ್ ಪಕ್ಷದ (ಟಿಎಂಸಿ) ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರನ್ನು ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೋಮವಾರ ರಾತ್ರಿಯಿಡೀ ಇ.ಡಿ ಮಾಣಿಕ್ ಅವರನ್ನು ವಿಚಾರಣೆ ನಡೆಸಿತ್ತು ಎನ್ನಲಾಗಿದೆ.
‘ಸೋಮವಾರ ಮಧ್ನಾಹ್ನದಿಂದಲೇ ಮಾಣಿಕ್ ಅವರ ವಿಚಾರಣೆ ಆರಂಭಿಸಲಾಗಿತ್ತು. ಆದರೆ, ತನಿಖೆಗೆ ಸಹಕರಿಸದ ಕಾರಣಕ್ಕಾಗಿ ಅವರನ್ನು ಬಂಧಿಸಲಾಗಿದೆ. ಅಷ್ಟೇ ಅಲ್ಲ, ಅವರು ತನಿಖಾಧಿಕಾರಿಗಳ ದಿಕ್ಕು ತಪ್ಪಿಸುವ ಕೆಲಸವನ್ನೂ ಮಾಡಿದ್ದಾರೆ’ ಎಂದೂ ಇ.ಡಿ. ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸಿಬಿಐ ಕೂಡಾ ಈ ಹಗರಣದ ತನಿಖೆ ಕೈಗೊಂಡಿದ್ದು, ಈ ಹಿಂದೆ ಸಿಬಿಐ ಭಟ್ಟಾಚಾರ್ಯ ಅವರನ್ನು ಬಂಧಿಸದಂತೆ ಸುಪ್ರೀಂ ಕೋರ್ಟ್ ರಕ್ಷಣೆ ನೀಡಿತ್ತು.
ಶಾಲಾ ಸೇವಾ ಆಯೋಗದ (ಎಸ್ಎಸ್ಸಿ) ನೇಮಕಾತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯವು ಜುಲೈ ತಿಂಗಳಲ್ಲಿ ಪಶ್ಚಿಮ ಬಂಗಾಳದ ಮಾಜಿ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರನ್ನು ಬಂಧಿಸಿತ್ತು.
al | Former chairman of West Bengal Board of Primary Education & TMC MLA Manik Bhattacharya was arrested today after being questioned overnight by Enforcement Directorate on the School Service Commission (SSC) scam. He will be produced before the Court today.