<p><strong>ನವದೆಹಲಿ</strong>: ಛತ್ತೀಸಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ, ಕಾಂಗ್ರೆಸ್ ಕಚೇರಿ ಹಾಗೂ ಪಕ್ಷದ ಶಾಸಕ ಕವಾಸಿ ಲಖ್ಮಾ ಅವರಿಗೆ ಸೇರಿದ ಆಸ್ತಿಗಳು ಸೇರಿ ಒಟ್ಟು ₹6.15 ಕೋಟಿ ಮೌಲ್ಯದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ ಎಂದು ಮೂಲಗಳು ಹೇಳಿವೆ.</p>.<p>ಶಾಸಕ ಲಖ್ಮಾ, ಅವರ ಪುತ್ರ ಹರೀಶ್ ಲಖ್ಮಾ ಅವರಿಗೆ ಸೇರಿದ ಸ್ವತ್ತುಗಳು ಹಾಗೂ ಸುಕ್ಮಾ ಜಿಲ್ಲೆಯಲ್ಲಿರುವ ಪಕ್ಷದ ಕಚೇರಿ ಕಟ್ಟಡವನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ₹2,100 ಕೋಟಿ ಮೊತ್ತ ಒಳಗೊಂಡ ಮದ್ಯದ ಹಗರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ಮೂಲಗಳು ಹೇಳಿವೆ.</p>.<p>ರಾಯಪುರ, ಸುಕ್ಮಾ ಹಾಗೂ ಧಮ್ತಾರಿ ಜಿಲ್ಲೆಗಳಲ್ಲಿರುವ ಶಾಸಕ ಲಖ್ಮಾ ಅವರಿಗೆ ಸೇರಿದ ಸ್ಥಳಗಳಲ್ಲಿ ಕಳೆದ ವರ್ಷ ಡಿಸೆಂಬರ್ನಲ್ಲಿ ಇ.ಡಿ ದಾಳಿ ನಡೆಸಿತ್ತು. ನಂತರ, ಶಾಸಕ ಲಖ್ಮಾ ಅವರನ್ನು ಬಂಧಿಸಿತ್ತು.</p>.<p>ಕವಾಸಿ ಲಖ್ಮಾ ಅವರು ಈ ಹಿಂದಿನ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಛತ್ತೀಸಗಢದಲ್ಲಿ ನಡೆದಿದೆ ಎನ್ನಲಾದ ಮದ್ಯ ಹಗರಣ ಜೊತೆ ನಂಟಿನ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ, ಕಾಂಗ್ರೆಸ್ ಕಚೇರಿ ಹಾಗೂ ಪಕ್ಷದ ಶಾಸಕ ಕವಾಸಿ ಲಖ್ಮಾ ಅವರಿಗೆ ಸೇರಿದ ಆಸ್ತಿಗಳು ಸೇರಿ ಒಟ್ಟು ₹6.15 ಕೋಟಿ ಮೌಲ್ಯದ ಸ್ವತ್ತುಗಳನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜಪ್ತಿ ಮಾಡಿದೆ ಎಂದು ಮೂಲಗಳು ಹೇಳಿವೆ.</p>.<p>ಶಾಸಕ ಲಖ್ಮಾ, ಅವರ ಪುತ್ರ ಹರೀಶ್ ಲಖ್ಮಾ ಅವರಿಗೆ ಸೇರಿದ ಸ್ವತ್ತುಗಳು ಹಾಗೂ ಸುಕ್ಮಾ ಜಿಲ್ಲೆಯಲ್ಲಿರುವ ಪಕ್ಷದ ಕಚೇರಿ ಕಟ್ಟಡವನ್ನು ಜಪ್ತಿ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.</p>.<p>ಈ ಹಿಂದಿನ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ₹2,100 ಕೋಟಿ ಮೊತ್ತ ಒಳಗೊಂಡ ಮದ್ಯದ ಹಗರಣಕ್ಕೆ ಸಂಬಂಧಿಸಿದ ತನಿಖೆಯ ಭಾಗವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದೂ ಮೂಲಗಳು ಹೇಳಿವೆ.</p>.<p>ರಾಯಪುರ, ಸುಕ್ಮಾ ಹಾಗೂ ಧಮ್ತಾರಿ ಜಿಲ್ಲೆಗಳಲ್ಲಿರುವ ಶಾಸಕ ಲಖ್ಮಾ ಅವರಿಗೆ ಸೇರಿದ ಸ್ಥಳಗಳಲ್ಲಿ ಕಳೆದ ವರ್ಷ ಡಿಸೆಂಬರ್ನಲ್ಲಿ ಇ.ಡಿ ದಾಳಿ ನಡೆಸಿತ್ತು. ನಂತರ, ಶಾಸಕ ಲಖ್ಮಾ ಅವರನ್ನು ಬಂಧಿಸಿತ್ತು.</p>.<p>ಕವಾಸಿ ಲಖ್ಮಾ ಅವರು ಈ ಹಿಂದಿನ ಮುಖ್ಯಮಂತ್ರಿ ಭೂಪೇಶ್ ಬಘೇಲ್ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವರಾಗಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>