<p><strong>ನವದೆಹಲಿ</strong>: ಭಯೋತ್ಪಾದಕ ಸಂಘಟನೆಗಳಾದ ಸಿಮಿ ಮತ್ತು ಇಂಡಿಯನ್ ಮುಜಾಹಿದ್ದೀನ್ (ಐಎಂ) ವಿರುದ್ಧದ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ₹ 6.34 ಲಕ್ಷ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.</p>.<p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಜಪ್ತಿ ಮಾಡಲಾದ ಸ್ಥಿರ ಆಸ್ತಿಯು ಆರೋಪಿ ರಾಜು ಖಾನ್ಗೆ ಸೇರಿದ್ದು ಎಂದು ತನಿಖಾ ಸಂಸ್ಥೆಯು ಶನಿವಾರ ಹೇಳಿದೆ.</p>.<p>ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ನಿಬಂಧನೆಗಳಡಿ ಧೀರಜ್ ಸಾವೊ ಮತ್ತು ಇತರರ ವಿರುದ್ಧ ಛತ್ತೀಸಘಡ ಪೊಲೀಸರು ರಾಯಪುರದಲ್ಲಿ ದಾಖಲಿಸಿರುವ ಎಫ್ಐಆರ್ನಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.</p>.<p>‘ಪಾಕಿಸ್ತಾನದ ಖಾಲಿದ್’ ಎಂಬ ಸಂಸ್ಥೆಯ ಸೂಚನೆ ಮೇರೆಗೆ ಭಾರತದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಹಣವನ್ನು ಸ್ವೀಕರಿಸಲು ಕೆಲವು ಬ್ಯಾಂಕ್ ಖಾತೆಗಳನ್ನು ಬಳಸಲಾಗಿದೆ. ಸ್ವೀಕರಿಸಿದ ಮೊತ್ತವನ್ನು ಜುಬೈರ್ ಹುಸೇನ್, ಆಯಿಶಾ ಬಾನು ಮತ್ತು ರಾಜು ಖಾನ್ಗೆ ವರ್ಗಾಯಿಸಲಾಗಿದೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.</p>.<p>ರಾಜು ಖಾನ್ ಈ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ. ಖಾಲಿದ್ ಹಾಗೂ ಸಾವೊ ಸೂಚನೆ ಮೇರೆಗೆ ₹ 48 ಲಕ್ಷಕ್ಕೂ ಹೆಚ್ಚು ಮೊತ್ತದ ಹಣಕಾಸು ವಹಿವಾಟು ನಡೆಸಿದ್ದಾನೆ ಎಂದು ಇ.ಡಿ ತಿಳಿಸಿದೆ.</p>.<p>ಈ ಹಿಂದೆಯೂ ₹ 3 ಲಕ್ಷ ಮೌಲ್ಯದ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಭಯೋತ್ಪಾದಕ ಸಂಘಟನೆಗಳಾದ ಸಿಮಿ ಮತ್ತು ಇಂಡಿಯನ್ ಮುಜಾಹಿದ್ದೀನ್ (ಐಎಂ) ವಿರುದ್ಧದ ಹಣ ಅಕ್ರಮ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದ ಪ್ರಕರಣದ ತನಿಖೆಯ ಭಾಗವಾಗಿ ₹ 6.34 ಲಕ್ಷ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.</p>.<p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಜಪ್ತಿ ಮಾಡಲಾದ ಸ್ಥಿರ ಆಸ್ತಿಯು ಆರೋಪಿ ರಾಜು ಖಾನ್ಗೆ ಸೇರಿದ್ದು ಎಂದು ತನಿಖಾ ಸಂಸ್ಥೆಯು ಶನಿವಾರ ಹೇಳಿದೆ.</p>.<p>ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆಯ (ಯುಎಪಿಎ) ನಿಬಂಧನೆಗಳಡಿ ಧೀರಜ್ ಸಾವೊ ಮತ್ತು ಇತರರ ವಿರುದ್ಧ ಛತ್ತೀಸಘಡ ಪೊಲೀಸರು ರಾಯಪುರದಲ್ಲಿ ದಾಖಲಿಸಿರುವ ಎಫ್ಐಆರ್ನಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.</p>.<p>‘ಪಾಕಿಸ್ತಾನದ ಖಾಲಿದ್’ ಎಂಬ ಸಂಸ್ಥೆಯ ಸೂಚನೆ ಮೇರೆಗೆ ಭಾರತದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಹಣವನ್ನು ಸ್ವೀಕರಿಸಲು ಕೆಲವು ಬ್ಯಾಂಕ್ ಖಾತೆಗಳನ್ನು ಬಳಸಲಾಗಿದೆ. ಸ್ವೀಕರಿಸಿದ ಮೊತ್ತವನ್ನು ಜುಬೈರ್ ಹುಸೇನ್, ಆಯಿಶಾ ಬಾನು ಮತ್ತು ರಾಜು ಖಾನ್ಗೆ ವರ್ಗಾಯಿಸಲಾಗಿದೆ’ ಎಂದು ಎಫ್ಐಆರ್ನಲ್ಲಿ ಉಲ್ಲೇಖವಾಗಿದೆ.</p>.<p>ರಾಜು ಖಾನ್ ಈ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ. ಖಾಲಿದ್ ಹಾಗೂ ಸಾವೊ ಸೂಚನೆ ಮೇರೆಗೆ ₹ 48 ಲಕ್ಷಕ್ಕೂ ಹೆಚ್ಚು ಮೊತ್ತದ ಹಣಕಾಸು ವಹಿವಾಟು ನಡೆಸಿದ್ದಾನೆ ಎಂದು ಇ.ಡಿ ತಿಳಿಸಿದೆ.</p>.<p>ಈ ಹಿಂದೆಯೂ ₹ 3 ಲಕ್ಷ ಮೌಲ್ಯದ ಆಸ್ತಿಯನ್ನು ಇ.ಡಿ ಜಪ್ತಿ ಮಾಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>