<p><strong>ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ರಿಲಯನ್ಸ್ ಇನ್ಸೂರೆನ್ಸ್ ಹಗರಣಕ್ಕೆ ಸಂಬಂಧಿಸಿದಂತೆ ₹ 36.57 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ಜಪ್ತಿ ಮಾಡಿಕೊಂಡಿದ್ದಾರೆ. </strong></p>.<p><strong>ಸಿಬಿಐ ದಾಖಲಿಸಿರುವ ಪ್ರಥಮ ತನಿಖಾ ವರದಿಯಲ್ಲಿ (ಎಫ್ಐಆರ್) ರಿಯಯನ್ಸ್ ಜನರಲ್ ಇನ್ಸೂರೆನ್ಸ್ ಮತ್ತು ಟ್ರಿನಿಟಿ ರಿಇನ್ಸೂರೆನ್ಸ್ನ ಮಧ್ಯವರ್ತಿಗಳನ್ನು ಆರೋಪಿಗಳಾಗಿ ಉಲ್ಲೇಖಿಸಲಾಗಿದೆ. ಸರ್ಕಾರಿ ನೌಕರರು, ಅವರ ಕುಟುಂಬ ಸದಸ್ಯರಿಗೆ ಜಾರಿಗೊಳಿಸಿದ್ದ ಆರೋಗ್ಯ ವಿಮಾ ಭದ್ರತೆಯ ಯೋಜನೆಗೆ ಸಂಬಂಧಿಸಿದ ಹಗರಣ ಇದಾಗಿದೆ.</strong></p>.<p>ಹಿಂದಿನ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, 2018ರಲ್ಲಿ ಅನಿಲ್ ಅಂಬಾನಿ ಮಾಲೀಕತ್ವದ ಕಂಪನಿ ಜೊತೆಗಿನ ಒಪ್ಪಂದವನ್ನು ರದ್ದುಪಡಿಸಿದ್ದರು. ಈ ಯೋಜನೆ ಜಾರಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾರಣ ನೀಡಲಾಗಿತ್ತು.</p><p>ನಿರ್ದಿಷ್ಟ ಕಂಪನಿಗೆ ನೆರವಾಗಲು ರಜೆ ದಿನ ಟೆಂಡರ್ ತೆರೆಯಲಾಗಿತ್ತು. ‘ಸಂಬಂಧಿಸಿದ ಕಡತಗಳಿಗೆ ಅನುಮೋದನೆ ನೀಡಲು ತಮಗೆ ₹300 ಕೋಟಿ ಲಂಚದ ಆಮಿಷ ಒಡ್ಡಲಾಗಿತ್ತು‘ ಎಂದು ಮಲ್ಲಿಕ್ 2021ರ ಅಕ್ಟೋಬರ್ನಲ್ಲಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದ್ದ ರಿಲಯನ್ಸ್ ಇನ್ಸೂರೆನ್ಸ್ ಹಗರಣಕ್ಕೆ ಸಂಬಂಧಿಸಿದಂತೆ ₹ 36.57 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ಜಪ್ತಿ ಮಾಡಿಕೊಂಡಿದ್ದಾರೆ. </strong></p>.<p><strong>ಸಿಬಿಐ ದಾಖಲಿಸಿರುವ ಪ್ರಥಮ ತನಿಖಾ ವರದಿಯಲ್ಲಿ (ಎಫ್ಐಆರ್) ರಿಯಯನ್ಸ್ ಜನರಲ್ ಇನ್ಸೂರೆನ್ಸ್ ಮತ್ತು ಟ್ರಿನಿಟಿ ರಿಇನ್ಸೂರೆನ್ಸ್ನ ಮಧ್ಯವರ್ತಿಗಳನ್ನು ಆರೋಪಿಗಳಾಗಿ ಉಲ್ಲೇಖಿಸಲಾಗಿದೆ. ಸರ್ಕಾರಿ ನೌಕರರು, ಅವರ ಕುಟುಂಬ ಸದಸ್ಯರಿಗೆ ಜಾರಿಗೊಳಿಸಿದ್ದ ಆರೋಗ್ಯ ವಿಮಾ ಭದ್ರತೆಯ ಯೋಜನೆಗೆ ಸಂಬಂಧಿಸಿದ ಹಗರಣ ಇದಾಗಿದೆ.</strong></p>.<p>ಹಿಂದಿನ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್, 2018ರಲ್ಲಿ ಅನಿಲ್ ಅಂಬಾನಿ ಮಾಲೀಕತ್ವದ ಕಂಪನಿ ಜೊತೆಗಿನ ಒಪ್ಪಂದವನ್ನು ರದ್ದುಪಡಿಸಿದ್ದರು. ಈ ಯೋಜನೆ ಜಾರಿಯಲ್ಲಿ ಭಾರಿ ಅಕ್ರಮ ನಡೆದಿದೆ ಎಂದು ಕಾರಣ ನೀಡಲಾಗಿತ್ತು.</p><p>ನಿರ್ದಿಷ್ಟ ಕಂಪನಿಗೆ ನೆರವಾಗಲು ರಜೆ ದಿನ ಟೆಂಡರ್ ತೆರೆಯಲಾಗಿತ್ತು. ‘ಸಂಬಂಧಿಸಿದ ಕಡತಗಳಿಗೆ ಅನುಮೋದನೆ ನೀಡಲು ತಮಗೆ ₹300 ಕೋಟಿ ಲಂಚದ ಆಮಿಷ ಒಡ್ಡಲಾಗಿತ್ತು‘ ಎಂದು ಮಲ್ಲಿಕ್ 2021ರ ಅಕ್ಟೋಬರ್ನಲ್ಲಿ ಆರೋಪಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>