<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಎಂಎಲ್ಸಿ, ಬಿಎಸ್ಪಿ ಮುಖಂಡ ಮೊಹಮ್ಮದ್ ಇಕ್ಬಾಲ್ ಮತ್ತು ಅವರ ಕುಟುಂಬಕ್ಕೆ ಸೇರಿದ ₹4,440 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಹೇಳಿದೆ. </p>.<p>ಸಹಾರನ್ಪುರದಲ್ಲಿರುವ ಗ್ಲೋಕಲ್ ವಿಶ್ವವಿದ್ಯಾಲಯಕ್ಕೆ ಸೇರಿದ 121 ಎಕರೆ ಜಮೀನು, ಕಟ್ಟಡಗಳು ಕೂಡಾ ಇದರಲ್ಲಿ ಸೇರಿವೆ. ‘ವಿ.ವಿಗೆ ಸೇರಿದ ಆಸ್ತಿಯು ಅಬ್ದುಲ್ ವಹೀದ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್’ ಹೆಸರಿನಲ್ಲಿ ನೋಂದಣಿಯಾಗಿದೆ. ಈ ಟ್ರಸ್ಟ್ನ ನಿರ್ವಹಣೆಯನ್ನು ಮೊಹಮ್ಮದ್ ಇಕ್ಬಾಲ್ ಮತ್ತು ಅವರ ಕುಟುಂಬದ ಸದಸ್ಯರು ನೋಡಿಕೊಳ್ಳುತ್ತಿದ್ದಾರೆ’ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.</p>.<p>‘ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇಕ್ಬಾಲ್ ಅವರು ದುಬೈನಲ್ಲಿ ತಲೆಮರೆಸಿಕೊಂಡಿದ್ದು, ಅವರ ನಾಲ್ವರು ಪುತ್ರರು ಮತ್ತು ಸಹೋದರ ವಿವಿಧ ಪ್ರಕರಣಗಳಲ್ಲಿ ಜೈಲಿನಲ್ಲಿದ್ದಾರೆ’ ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಉತ್ತರ ಪ್ರದೇಶದ ಮಾಜಿ ಎಂಎಲ್ಸಿ, ಬಿಎಸ್ಪಿ ಮುಖಂಡ ಮೊಹಮ್ಮದ್ ಇಕ್ಬಾಲ್ ಮತ್ತು ಅವರ ಕುಟುಂಬಕ್ಕೆ ಸೇರಿದ ₹4,440 ಕೋಟಿ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿರುವುದಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರ ಹೇಳಿದೆ. </p>.<p>ಸಹಾರನ್ಪುರದಲ್ಲಿರುವ ಗ್ಲೋಕಲ್ ವಿಶ್ವವಿದ್ಯಾಲಯಕ್ಕೆ ಸೇರಿದ 121 ಎಕರೆ ಜಮೀನು, ಕಟ್ಟಡಗಳು ಕೂಡಾ ಇದರಲ್ಲಿ ಸೇರಿವೆ. ‘ವಿ.ವಿಗೆ ಸೇರಿದ ಆಸ್ತಿಯು ಅಬ್ದುಲ್ ವಹೀದ್ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್’ ಹೆಸರಿನಲ್ಲಿ ನೋಂದಣಿಯಾಗಿದೆ. ಈ ಟ್ರಸ್ಟ್ನ ನಿರ್ವಹಣೆಯನ್ನು ಮೊಹಮ್ಮದ್ ಇಕ್ಬಾಲ್ ಮತ್ತು ಅವರ ಕುಟುಂಬದ ಸದಸ್ಯರು ನೋಡಿಕೊಳ್ಳುತ್ತಿದ್ದಾರೆ’ ಎಂದು ಇ.ಡಿ ಪ್ರಕಟಣೆ ತಿಳಿಸಿದೆ.</p>.<p>‘ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇಕ್ಬಾಲ್ ಅವರು ದುಬೈನಲ್ಲಿ ತಲೆಮರೆಸಿಕೊಂಡಿದ್ದು, ಅವರ ನಾಲ್ವರು ಪುತ್ರರು ಮತ್ತು ಸಹೋದರ ವಿವಿಧ ಪ್ರಕರಣಗಳಲ್ಲಿ ಜೈಲಿನಲ್ಲಿದ್ದಾರೆ’ ಎಂದು ಇ.ಡಿ ಅಧಿಕಾರಿಗಳು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>