<p><strong>ನವದೆಹಲಿ:</strong> ಬ್ಯಾಂಕ್ ವಂಚನೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭೂಷಣ್ ಪವರ್ ಮತ್ತು ಸ್ಟೀಲ್ ಲಿ. (ಬಿಪಿಸಿಎಲ್)ನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಸಂಜಯ್ ಸಿಂಘಲ್ ಪತ್ನಿ ಆರತಿ ಒಡೆತನದ ₹486 ಕೋಟಿ ಮೌಲ್ಯದ ಬಂಗಲೆಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.</p><p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಕ್ರಮ ಜರುಗಿಸಲಾಗಿದ್ದು, ದೆಹಲಿಯ ಅಮೃತಾ ಶೆರ್ಗಿಲ್ ಮಾರ್ಗದಲ್ಲಿರುವ ಬಂಗಲೆಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.</p><p>2019ರ ನವೆಂಬರ್ನಲ್ಲಿ ಸಂಜಯ್ ಸಿಂಘಲ್ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಪ್ರಕರಣ ಸಂಬಂಧ ಸಂಜಯ್ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ವಿಚಾರಣೆ ಇನ್ನೂ ಬಾಕಿ ಇದೆ.</p><p>ಸಂಜಯ್ ಸೇರಿದಂತೆ ಇತರ ಆರೋಪಿಗಳು ವಿವಿಧ ಬ್ಯಾಂಕ್ಗಳಿಗೆ ₹47,204 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣ ಸಂಬಂಧ ಇ.ಡಿ ಈ ಹಿಂದೆಯೂ ವಿವಿಧ ಕಡೆಗಳಲ್ಲಿ ಆಸ್ತಿಗಳನ್ನು ಜಪ್ತಿ ಮಾಡಿತ್ತು. ಇದರ ಮೊತ್ತ ₹4,938 ಕೋಟಿಯಷ್ಟಿದ್ದು, ಆ ಪೈಕಿ ₹4,025 ಕೋಟಿಯನ್ನು ಬ್ಯಾಂಕ್ಗಳಿಗೆ ಹಿಂತಿರುಗಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬ್ಯಾಂಕ್ ವಂಚನೆ ಸಂಬಂಧಿತ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಭೂಷಣ್ ಪವರ್ ಮತ್ತು ಸ್ಟೀಲ್ ಲಿ. (ಬಿಪಿಸಿಎಲ್)ನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಸಂಜಯ್ ಸಿಂಘಲ್ ಪತ್ನಿ ಆರತಿ ಒಡೆತನದ ₹486 ಕೋಟಿ ಮೌಲ್ಯದ ಬಂಗಲೆಯನ್ನು ಜಪ್ತಿ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ತಿಳಿಸಿದೆ.</p><p>ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ (ಪಿಎಂಎಲ್ಎ) ಕ್ರಮ ಜರುಗಿಸಲಾಗಿದ್ದು, ದೆಹಲಿಯ ಅಮೃತಾ ಶೆರ್ಗಿಲ್ ಮಾರ್ಗದಲ್ಲಿರುವ ಬಂಗಲೆಯನ್ನು ಜಪ್ತಿ ಮಾಡಲಾಗಿದೆ ಎಂದು ಇ.ಡಿ ಅಧಿಕಾರಿಗಳು ತಿಳಿಸಿದ್ದಾರೆ.</p><p>2019ರ ನವೆಂಬರ್ನಲ್ಲಿ ಸಂಜಯ್ ಸಿಂಘಲ್ ಅವರನ್ನು ಇ.ಡಿ ಅಧಿಕಾರಿಗಳು ಬಂಧಿಸಿದ್ದರು. ಪ್ರಕರಣ ಸಂಬಂಧ ಸಂಜಯ್ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ವಿಚಾರಣೆ ಇನ್ನೂ ಬಾಕಿ ಇದೆ.</p><p>ಸಂಜಯ್ ಸೇರಿದಂತೆ ಇತರ ಆರೋಪಿಗಳು ವಿವಿಧ ಬ್ಯಾಂಕ್ಗಳಿಗೆ ₹47,204 ಕೋಟಿ ವಂಚಿಸಿದ ಆರೋಪ ಎದುರಿಸುತ್ತಿದ್ದಾರೆ. ಇದೇ ಪ್ರಕರಣ ಸಂಬಂಧ ಇ.ಡಿ ಈ ಹಿಂದೆಯೂ ವಿವಿಧ ಕಡೆಗಳಲ್ಲಿ ಆಸ್ತಿಗಳನ್ನು ಜಪ್ತಿ ಮಾಡಿತ್ತು. ಇದರ ಮೊತ್ತ ₹4,938 ಕೋಟಿಯಷ್ಟಿದ್ದು, ಆ ಪೈಕಿ ₹4,025 ಕೋಟಿಯನ್ನು ಬ್ಯಾಂಕ್ಗಳಿಗೆ ಹಿಂತಿರುಗಿಸಲಾಗಿದೆ ಎಂದು ಅಧಿಕಾರಿಗಳು ವಿವರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>