<p><strong>ನವದೆಹಲಿ</strong>: ಪಶ್ಚಿಮ ಬಂಗಾಳದ ಸಂದೇಶ್ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಮತ್ತು ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರಿಗೆ ಸೇರಿದ ₹12.78 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿರುವುದಾಗಿ ಮಂಗಳವಾರ ಜಾರಿ ನಿರ್ದೇಶನಾಲಯ(ಇ.ಡಿ) ಹೇಳಿದೆ.</p><p> ಬ್ಯಾಂಕ್ ಠೇವಣಿ, ಕೋಲ್ಕತ್ತ ಮತ್ತು ಸಂದೇಶ್ಖಾಲಿಯಲ್ಲಿರುವ ಅಪಾರ್ಟ್ಮೆಂಟ್, ಕೃಷಿ ಭೂಮಿ ಮತ್ತು ಮೀನುಗಾರಿಕಾ ಜಾಗಗಳು ಇದರಲ್ಲಿ ಸೇರಿವೆ ಎಂದು ಇ.ಡಿ ಹೇಳಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಈ ಸಂಬಂಧ ಇ.ಡಿ ಆದೇಶ ಹೊರಡಿಸಿದೆ.</p><p>ಜನವರಿ 5ರಂದು ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ಇ.ಡಿ ತಂಡದ ಮೇಲೆ ಶೇಖ್ ಬೆಂಬಲಿಗರು ದಾಳಿ ಮಾಡಿದ ಆರೋಪವಿದೆ.</p><p> ಪ್ರಕರಣ ಸಂಬಂಧ ಫೆಬ್ರುವರಿ 29ರಂದು ಪಶ್ಚಿಮ ಬಂಗಾಳ ಪೊಲೀಸರು ಶೇಖ್ ಅವರನ್ನು ಬಂಧಿಸಿದ್ದರು. ಬಂಧನದ ಬಳಿಕ ಅವರನ್ನು ಟಿಎಂಸಿಯಿಂದ ಅಮಾನತು ಮಾಡಲಾಗಿತ್ತು.</p><p> ಟಿಎಂಸಿ ನಾಯಕ ಶಹಜಹಾನ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂದೇಶ್ಖಾಲಿಯ ಹಲವು ಮಹಿಳೆಯರು ಆರೋಪಿಸಿದ್ದು, ಅಕ್ರಮವಾಗಿ ರೈತರ ಭೂಮಿ ವಶಪಡಿಸಿಕೊಂಡ ಆರೋಪವೂ ಅವರ ಮೇಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಶೇಖ್ ಅವರನ್ನು ಇಂದು ಸಿಬಿಐ ವಶಕ್ಕೆ ಒಪ್ಪಿಸಿದ್ದಾರೆ.</p> .ಕೋಲ್ಕತ್ತ: ಸಂದೇಶ್ಖಾಲಿ; ಸಿಬಿಐಗೆ ಶಹಜಹಾನ್ ಒಪ್ಪಿಸಲು ಹೈಕೋರ್ಟ್ ಸೂಚನೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ</strong>: ಪಶ್ಚಿಮ ಬಂಗಾಳದ ಸಂದೇಶ್ಖಾಲಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ ಮತ್ತು ಅಮಾನತುಗೊಂಡಿರುವ ಟಿಎಂಸಿ ನಾಯಕ ಶಹಜಹಾನ್ ಶೇಖ್ ಅವರಿಗೆ ಸೇರಿದ ₹12.78 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿರುವುದಾಗಿ ಮಂಗಳವಾರ ಜಾರಿ ನಿರ್ದೇಶನಾಲಯ(ಇ.ಡಿ) ಹೇಳಿದೆ.</p><p> ಬ್ಯಾಂಕ್ ಠೇವಣಿ, ಕೋಲ್ಕತ್ತ ಮತ್ತು ಸಂದೇಶ್ಖಾಲಿಯಲ್ಲಿರುವ ಅಪಾರ್ಟ್ಮೆಂಟ್, ಕೃಷಿ ಭೂಮಿ ಮತ್ತು ಮೀನುಗಾರಿಕಾ ಜಾಗಗಳು ಇದರಲ್ಲಿ ಸೇರಿವೆ ಎಂದು ಇ.ಡಿ ಹೇಳಿದೆ. ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಈ ಸಂಬಂಧ ಇ.ಡಿ ಆದೇಶ ಹೊರಡಿಸಿದೆ.</p><p>ಜನವರಿ 5ರಂದು ಉತ್ತರ 24 ಪರಗಣ ಜಿಲ್ಲೆಯ ಸಂದೇಶ್ಖಾಲಿಯಲ್ಲಿ ಇ.ಡಿ ತಂಡದ ಮೇಲೆ ಶೇಖ್ ಬೆಂಬಲಿಗರು ದಾಳಿ ಮಾಡಿದ ಆರೋಪವಿದೆ.</p><p> ಪ್ರಕರಣ ಸಂಬಂಧ ಫೆಬ್ರುವರಿ 29ರಂದು ಪಶ್ಚಿಮ ಬಂಗಾಳ ಪೊಲೀಸರು ಶೇಖ್ ಅವರನ್ನು ಬಂಧಿಸಿದ್ದರು. ಬಂಧನದ ಬಳಿಕ ಅವರನ್ನು ಟಿಎಂಸಿಯಿಂದ ಅಮಾನತು ಮಾಡಲಾಗಿತ್ತು.</p><p> ಟಿಎಂಸಿ ನಾಯಕ ಶಹಜಹಾನ್ ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಸಂದೇಶ್ಖಾಲಿಯ ಹಲವು ಮಹಿಳೆಯರು ಆರೋಪಿಸಿದ್ದು, ಅಕ್ರಮವಾಗಿ ರೈತರ ಭೂಮಿ ವಶಪಡಿಸಿಕೊಂಡ ಆರೋಪವೂ ಅವರ ಮೇಲಿದೆ. ಹೈಕೋರ್ಟ್ ಆದೇಶದ ಮೇರೆಗೆ ಶೇಖ್ ಅವರನ್ನು ಇಂದು ಸಿಬಿಐ ವಶಕ್ಕೆ ಒಪ್ಪಿಸಿದ್ದಾರೆ.</p> .ಕೋಲ್ಕತ್ತ: ಸಂದೇಶ್ಖಾಲಿ; ಸಿಬಿಐಗೆ ಶಹಜಹಾನ್ ಒಪ್ಪಿಸಲು ಹೈಕೋರ್ಟ್ ಸೂಚನೆ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>