<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲಾ ನ್ಯಾಯಾಲಯವು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಉಚ್ಛಾಟಿತ ನಾಯಕ ಶಹಜಹಾನ್ ಶೇಖ್ ಅವರನ್ನು ಏಪ್ರಿಲ್ 9ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.</p><p>ಕೋಲ್ಕತ್ತ ಹೈಕೋರ್ಟ್, ಶೇಖ್ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಿತ್ತು. ಅದರಂತೆ, ಶೇಖ್ ಅವರನ್ನು ಮಾರ್ಚ್ 6ರಿಂದ ವಶಕ್ಕೆ ಪಡೆದಿದ್ದ ಸಿಬಿಐ, ಬಸಿರ್ಹತ್ ನ್ಯಾಯಾಲಯದ ಎದುರು ಗುರುವಾರ ಹಾಜರುಪಡಿಸಿತ್ತು. ಈ ವೇಳೆ ಹೆಚ್ಚುವರಿ ಪ್ರಥಮ ದರ್ಜೆ ಮ್ಯಾಜಿಸ್ಟೇಟ್ ಅವರು, ಶೇಖ್ ಹಾಗೂ ಇತರ ಇಬ್ಬರು ಆರೋಪಿಗಳನ್ನು ಏಪ್ರಿಲ್ 9ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಪಡಿತರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಶೇಖ್ ವಿರುದ್ಧ ತನಿಖೆಗೆ ಮುಂದಾಗಿತ್ತು. ಈ ಸಂಬಂಧ, ಸಂದೇಶ್ಖಾಲಿಯಲ್ಲಿರುವ ಶೇಖ್ ಅವರಿಗೆ ಸೇರಿದ ಸ್ಥಳಗಳಲ್ಲಿ ಕಾರ್ಯಾಚರಣೆಗೆ ಮುಂದಾದಾಗ, ಇ.ಡಿ ಅಧಿಕಾರಿಗಳ ಮೇಲೆ ಜನವರಿ 5ರಂದು ಹಲ್ಲೆ ನಡೆದಿತ್ತು.</p><p>ಹಗರಣ ಹಾಗೂ ಹಲ್ಲೆ ಪ್ರಕರಣದಿಂದಾಗಿ 55 ದಿನಗಳ ಕಾಲ ತಲೆ ಮರೆಸಿಕೊಂಡಿದ್ದ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು ಫೆಬ್ರುವರಿ 29ರಂದು ಬಂಧಿಸಿತ್ತು.</p><p>ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಸ್ಥಳೀಯರ ಭೂಮಿ ಕಬಳಿಸಿರುವ ಆರೋಪವೂ ಶೇಖ್ ಮೇಲಿದೆ.</p>.ಪಶ್ಚಿಮ ಬಂಗಾಳದಲ್ಲಿ ಇ.ಡಿ ತಂಡದ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ.ಸಂದೇಶ್ಖಾಲಿ ಲೈಂಗಿಕ ಕಿರುಕುಳ, ಭೂ ಕಬಳಿಕೆ ಪ್ರಕರಣದ ಮುಖ್ಯ ಆರೋಪಿ ಶಹಜಹಾನ್ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲಾ ನ್ಯಾಯಾಲಯವು, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಉಚ್ಛಾಟಿತ ನಾಯಕ ಶಹಜಹಾನ್ ಶೇಖ್ ಅವರನ್ನು ಏಪ್ರಿಲ್ 9ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.</p><p>ಕೋಲ್ಕತ್ತ ಹೈಕೋರ್ಟ್, ಶೇಖ್ ವಿರುದ್ಧದ ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಿತ್ತು. ಅದರಂತೆ, ಶೇಖ್ ಅವರನ್ನು ಮಾರ್ಚ್ 6ರಿಂದ ವಶಕ್ಕೆ ಪಡೆದಿದ್ದ ಸಿಬಿಐ, ಬಸಿರ್ಹತ್ ನ್ಯಾಯಾಲಯದ ಎದುರು ಗುರುವಾರ ಹಾಜರುಪಡಿಸಿತ್ತು. ಈ ವೇಳೆ ಹೆಚ್ಚುವರಿ ಪ್ರಥಮ ದರ್ಜೆ ಮ್ಯಾಜಿಸ್ಟೇಟ್ ಅವರು, ಶೇಖ್ ಹಾಗೂ ಇತರ ಇಬ್ಬರು ಆರೋಪಿಗಳನ್ನು ಏಪ್ರಿಲ್ 9ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.</p><p>ಪಡಿತರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಹಗರಣದ ವಿಚಾರವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಶೇಖ್ ವಿರುದ್ಧ ತನಿಖೆಗೆ ಮುಂದಾಗಿತ್ತು. ಈ ಸಂಬಂಧ, ಸಂದೇಶ್ಖಾಲಿಯಲ್ಲಿರುವ ಶೇಖ್ ಅವರಿಗೆ ಸೇರಿದ ಸ್ಥಳಗಳಲ್ಲಿ ಕಾರ್ಯಾಚರಣೆಗೆ ಮುಂದಾದಾಗ, ಇ.ಡಿ ಅಧಿಕಾರಿಗಳ ಮೇಲೆ ಜನವರಿ 5ರಂದು ಹಲ್ಲೆ ನಡೆದಿತ್ತು.</p><p>ಹಗರಣ ಹಾಗೂ ಹಲ್ಲೆ ಪ್ರಕರಣದಿಂದಾಗಿ 55 ದಿನಗಳ ಕಾಲ ತಲೆ ಮರೆಸಿಕೊಂಡಿದ್ದ ಶೇಖ್ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್ ವಿಶೇಷ ಪಡೆಯು ಫೆಬ್ರುವರಿ 29ರಂದು ಬಂಧಿಸಿತ್ತು.</p><p>ಸಂದೇಶ್ಖಾಲಿಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಸ್ಥಳೀಯರ ಭೂಮಿ ಕಬಳಿಸಿರುವ ಆರೋಪವೂ ಶೇಖ್ ಮೇಲಿದೆ.</p>.ಪಶ್ಚಿಮ ಬಂಗಾಳದಲ್ಲಿ ಇ.ಡಿ ತಂಡದ ಮೇಲೆ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ.ಸಂದೇಶ್ಖಾಲಿ ಲೈಂಗಿಕ ಕಿರುಕುಳ, ಭೂ ಕಬಳಿಕೆ ಪ್ರಕರಣದ ಮುಖ್ಯ ಆರೋಪಿ ಶಹಜಹಾನ್ ಸೆರೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>