<p><strong>ಸೊಲ್ಲಾಪುರ</strong>: ‘ಜಾರಿ ನಿರ್ದೇಶನಾಲಯವನ್ನು (ಇ.ಡಿ) ರಾಜಕೀಯ ವಿರೋಧಿಗಳ ದನಿ ಅಡಗಿಸಲು ಹಾಗೂ ಅವರಲ್ಲಿ ಭಯ ಉಂಟು ಮಾಡುವ ಸಾಧನವನ್ನಾಗಿ ಬಳಸಿಕೊಳ್ಳಲಾಗುತ್ತಿದೆ’ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ.</p>.<p>ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ನಲ್ಲಿ (ಎಂಎಸ್ಸಿಬಿ) ನಡೆದಿದೆ ಎನ್ನಲಾದ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೊಮ್ಮಗ ಮತ್ತು ಪಕ್ಷದ ಶಾಸಕ ರೋಹಿತ್ ಪವಾರ್ ಅವರಿಗೆ ಇದೇ 24ರಂದು ವಿಚಾರಣೆಗೆ ಹಾಜರಾಗಬೇಕೆಂದು ಇ.ಡಿ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಂಥ ಪ್ರವೃತ್ತಿಗಳನ್ನು ಹತ್ತಿಕ್ಕಲು ನಾವು ಜನರ ಬಳಿ ಹೋಗಬೇಕು’ ಎಂದು ಅವರು ವಾಗ್ದಾಳಿ ನಡೆಸಿದರು.</p>.<p>ಎಂಎಸ್ಸಿಬಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಮುಂಬೈ ಪೊಲೀಸ್ನ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಈ ಎಫ್ಐಆರ್ ಆಧಾರದ ಮೇರೆಗೆ ಇ.ಡಿಯು ಶಾಸಕ ರೋಹಿತ್ ಪವಾರ್ ಅವರ ಒಡೆತನದ ಬಾರಾಮತಿ ಆಗ್ರೊ ಕಂಪನಿ ಹಾಗೂ ಕಂಪನಿಗೆ ಸಂಬಂಧಿಸಿದ ಪುಣೆ, ಔರಂಗಾಬಾದ್ನಲ್ಲಿನ ಕೆಲವು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೊಲ್ಲಾಪುರ</strong>: ‘ಜಾರಿ ನಿರ್ದೇಶನಾಲಯವನ್ನು (ಇ.ಡಿ) ರಾಜಕೀಯ ವಿರೋಧಿಗಳ ದನಿ ಅಡಗಿಸಲು ಹಾಗೂ ಅವರಲ್ಲಿ ಭಯ ಉಂಟು ಮಾಡುವ ಸಾಧನವನ್ನಾಗಿ ಬಳಸಿಕೊಳ್ಳಲಾಗುತ್ತಿದೆ’ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಶನಿವಾರ ಹೇಳಿದ್ದಾರೆ.</p>.<p>ಮಹಾರಾಷ್ಟ್ರ ರಾಜ್ಯ ಸಹಕಾರಿ ಬ್ಯಾಂಕ್ನಲ್ಲಿ (ಎಂಎಸ್ಸಿಬಿ) ನಡೆದಿದೆ ಎನ್ನಲಾದ ಹಗರಣದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮೊಮ್ಮಗ ಮತ್ತು ಪಕ್ಷದ ಶಾಸಕ ರೋಹಿತ್ ಪವಾರ್ ಅವರಿಗೆ ಇದೇ 24ರಂದು ವಿಚಾರಣೆಗೆ ಹಾಜರಾಗಬೇಕೆಂದು ಇ.ಡಿ ಸಮನ್ಸ್ ನೀಡಿರುವ ಹಿನ್ನೆಲೆಯಲ್ಲಿ ಅವರು ಈ ರೀತಿ ಪ್ರತಿಕ್ರಿಯಿಸಿದರು.</p>.<p>‘ಕೇಂದ್ರ ಸರ್ಕಾರ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇಂಥ ಪ್ರವೃತ್ತಿಗಳನ್ನು ಹತ್ತಿಕ್ಕಲು ನಾವು ಜನರ ಬಳಿ ಹೋಗಬೇಕು’ ಎಂದು ಅವರು ವಾಗ್ದಾಳಿ ನಡೆಸಿದರು.</p>.<p>ಎಂಎಸ್ಸಿಬಿಯಲ್ಲಿ ನಡೆದಿದೆ ಎನ್ನಲಾದ ಹಗರಣದ ಕುರಿತು ಮುಂಬೈ ಪೊಲೀಸ್ನ ಆರ್ಥಿಕ ಅಪರಾಧ ವಿಭಾಗ ಎಫ್ಐಆರ್ ದಾಖಲಿಸಿತ್ತು. ಈ ಎಫ್ಐಆರ್ ಆಧಾರದ ಮೇರೆಗೆ ಇ.ಡಿಯು ಶಾಸಕ ರೋಹಿತ್ ಪವಾರ್ ಅವರ ಒಡೆತನದ ಬಾರಾಮತಿ ಆಗ್ರೊ ಕಂಪನಿ ಹಾಗೂ ಕಂಪನಿಗೆ ಸಂಬಂಧಿಸಿದ ಪುಣೆ, ಔರಂಗಾಬಾದ್ನಲ್ಲಿನ ಕೆಲವು ಸ್ಥಳಗಳ ಮೇಲೆ ದಾಳಿ ನಡೆಸಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>