<p><strong>ಹೈದರಾಬಾದ್</strong>: ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p><p>ನಟರಾದ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಪ್ರಣೀತಾ ಸುಭಾಶ್, ಅನನ್ಯಾ ನಾಗಲ್ಲಾ, ಟಿ.ವಿ ನಿರೂಪಕಿ ಶ್ರೀಮುಖಿ ಹಾಗೂ ತೆಲಂಗಾಣದ ಸಾಮಾಜಿಕ ಜಾಲತಾಣಗಳ ಇನ್ಫ್ಲುಯೆನ್ಸರ್ಗಳು, ಯುಟ್ಯೂಬರ್ಗಳ ಹೆಸರನ್ನೂ ಪ್ರಕರಣದಲ್ಲಿ ಹೆಸರಿಸಲಾಗಿದೆ.</p><p>ಈ ಆ್ಯಪ್ಗಳು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದಿಂದ ಕಾನೂನು ಬಾಹಿರವಾಗಿ ಕೋಟ್ಯಂತರ ರೂಪಾಯಿ ಗಳಿಸಿವೆ ಎಂಬ ಆರೋಪವಿದೆ ಎಂದು ಮೂಲಗಳು ಹೇಳಿವೆ. </p><p>ರಾಜ್ಯದ ಐದು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳನ್ನು ಗಮನದಲ್ಲಿಟ್ಟುಕೊಂಡು ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲು ಮಾಡಿದೆ. </p><p><strong>ಯಾವ ಆ್ಯಪ್ಗಳು</strong></p><p>ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳಾದ ‘ಜಂಗ್ಲಿ ರಮ್ಮಿ’, ‘ಜೀತ್ವಿನ್’, ‘ಲೋಟಸ್365’ ಇತ್ಯಾದಿ ಆನ್ಲೈನ್ ಬೆಟ್ಟಿಂಗ್ ಅಪ್ಲಿಕೇಷನ್ಗಳನ್ನು ಅನುಮೋದಿಸಿ, ಅವುಗಳ ಪರ ಈ ಸೆಲೆಬ್ರಿಟಿಗಳು ಪ್ರಚಾರ ನಡೆಸಿದ್ದಾರೆ. ಇದಕ್ಕಾಗಿ ಅವರು ಅಪಾರ ಹಣ ಪಡೆದಿದ್ದಾರೆ ಎಂಬ ಶಂಕೆಯಿದೆ ಎಂದು ಮೂಲಗಳು ತಿಳಿಸಿವೆ. </p><p>‘ಈ ಆ್ಯಪ್ಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ ಎಂಬುದು ಗೊತ್ತಿಲ್ಲ. ಅಲ್ಲದೆ ಅವುಗಳ ಕಾನೂನು ಬಾಹಿರ ಬೆಟ್ಟಿಂಗ್ ಚಟುವಟಿಕೆಗಳಲ್ಲಿ ನಾವು ಪಾಲ್ಗೊಂಡಿಲ್ಲ’ ಎಂಬುದಾಗಿ ಪ್ರಕರಣದಲ್ಲಿ ಹೆಸರಿಸಲಾಗಿರುವ ಕೆಲ ನಟರು ಈ ಹಿಂದೆಯೇ ಹೇಳಿಕೆ ನೀಡಿದ್ದರು ಎಂದು ಮೂಲಗಳು ಹೇಳಿವೆ. </p><p>ಜಾರಿ ನಿರ್ದೇಶನಾಲಯವು ಮುಂದಿನ ದಿನಗಳಲ್ಲಿ ಈ ಸೆಲೆಬ್ರಿಟಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡು ವಿಚಾರಣೆ ನಡೆಸಲಿದೆ. </p><p>‘ಈ ಪ್ರಕರಣ ಸಂಬಂಧ ಸಮಗ್ರ ತನಿಖೆ ಆರಂಭವಾಗಿದ್ದು, ಈ ಆ್ಯಪ್ಗಳು ಅಕ್ರಮವಾಗಿ ಗಳಿಸಿರುವ ಹಣ ಎಷ್ಟು ಎಂಬುದರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಸೆಲೆಬ್ರಿಟಿಗಳ ಹೇಳಿಕೆ ದಾಖಲಿಸಿದ ಬಳಿಕ ಪ್ರಕರಣದಲ್ಲಿ ಅವರ ಪಾತ್ರವನ್ನು ನಿರ್ಧರಿಸಲಾಗುತ್ತದೆ’ ಎಂದು ಮೂಲಗಳು ಹೇಳಿವೆ.</p>.ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ ಹೀಗೆಲ್ಲಾ ಮಾಡಿದ್ದರು: ಶಶಿ ತರೂರ್ ನೆನಪು.ವಡೋದರಾ ಸೇತುವೆ ಕುಸಿತ ಪ್ರಕರಣ: ಸಾವಿನ ಸಂಖ್ಯೆ 15ಕ್ಕೆ ಏರಿಕೆ; ತನಿಖೆ ಆರಂಭ.Wimbledon: ಜೊಕೊವಿಚ್ ದಾಖಲೆಯ 14ನೇ ಸಲ ಸೆಮಿಫೈನಲ್ ಸಾಧನೆ; ಸಿನ್ನರ್ ಎದುರಾಳಿ.ನರ್ಸ್ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್</strong>: ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳ ವಿರುದ್ಧದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ನಟರಾದ ವಿಜಯ್ ದೇವರಕೊಂಡ, ರಾಣಾ ದಗ್ಗುಬಾಟಿ, ಪ್ರಕಾಶ್ ರಾಜ್ ಸೇರಿ 29 ಸೆಲೆಬ್ರಿಟಿಗಳ ವಿರುದ್ಧ ಜಾರಿ ನಿರ್ದೇಶನಾಲಯ (ಇ.ಡಿ) ಪ್ರಕರಣ ದಾಖಲಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.</p><p>ನಟರಾದ ಮಂಚು ಲಕ್ಷ್ಮಿ, ನಿಧಿ ಅಗರ್ವಾಲ್, ಪ್ರಣೀತಾ ಸುಭಾಶ್, ಅನನ್ಯಾ ನಾಗಲ್ಲಾ, ಟಿ.ವಿ ನಿರೂಪಕಿ ಶ್ರೀಮುಖಿ ಹಾಗೂ ತೆಲಂಗಾಣದ ಸಾಮಾಜಿಕ ಜಾಲತಾಣಗಳ ಇನ್ಫ್ಲುಯೆನ್ಸರ್ಗಳು, ಯುಟ್ಯೂಬರ್ಗಳ ಹೆಸರನ್ನೂ ಪ್ರಕರಣದಲ್ಲಿ ಹೆಸರಿಸಲಾಗಿದೆ.</p><p>ಈ ಆ್ಯಪ್ಗಳು ಅಕ್ರಮ ಬೆಟ್ಟಿಂಗ್ ಮತ್ತು ಜೂಜಾಟದಿಂದ ಕಾನೂನು ಬಾಹಿರವಾಗಿ ಕೋಟ್ಯಂತರ ರೂಪಾಯಿ ಗಳಿಸಿವೆ ಎಂಬ ಆರೋಪವಿದೆ ಎಂದು ಮೂಲಗಳು ಹೇಳಿವೆ. </p><p>ರಾಜ್ಯದ ಐದು ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಎಫ್ಐಆರ್ಗಳನ್ನು ಗಮನದಲ್ಲಿಟ್ಟುಕೊಂಡು ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ ಪ್ರಕರಣ ದಾಖಲು ಮಾಡಿದೆ. </p><p><strong>ಯಾವ ಆ್ಯಪ್ಗಳು</strong></p><p>ಆನ್ಲೈನ್ ಬೆಟ್ಟಿಂಗ್ ಆ್ಯಪ್ಗಳಾದ ‘ಜಂಗ್ಲಿ ರಮ್ಮಿ’, ‘ಜೀತ್ವಿನ್’, ‘ಲೋಟಸ್365’ ಇತ್ಯಾದಿ ಆನ್ಲೈನ್ ಬೆಟ್ಟಿಂಗ್ ಅಪ್ಲಿಕೇಷನ್ಗಳನ್ನು ಅನುಮೋದಿಸಿ, ಅವುಗಳ ಪರ ಈ ಸೆಲೆಬ್ರಿಟಿಗಳು ಪ್ರಚಾರ ನಡೆಸಿದ್ದಾರೆ. ಇದಕ್ಕಾಗಿ ಅವರು ಅಪಾರ ಹಣ ಪಡೆದಿದ್ದಾರೆ ಎಂಬ ಶಂಕೆಯಿದೆ ಎಂದು ಮೂಲಗಳು ತಿಳಿಸಿವೆ. </p><p>‘ಈ ಆ್ಯಪ್ಗಳು ಹೇಗೆ ಕಾರ್ಯ ನಿರ್ವಹಿಸುತ್ತವೆ ಎಂಬುದು ಗೊತ್ತಿಲ್ಲ. ಅಲ್ಲದೆ ಅವುಗಳ ಕಾನೂನು ಬಾಹಿರ ಬೆಟ್ಟಿಂಗ್ ಚಟುವಟಿಕೆಗಳಲ್ಲಿ ನಾವು ಪಾಲ್ಗೊಂಡಿಲ್ಲ’ ಎಂಬುದಾಗಿ ಪ್ರಕರಣದಲ್ಲಿ ಹೆಸರಿಸಲಾಗಿರುವ ಕೆಲ ನಟರು ಈ ಹಿಂದೆಯೇ ಹೇಳಿಕೆ ನೀಡಿದ್ದರು ಎಂದು ಮೂಲಗಳು ಹೇಳಿವೆ. </p><p>ಜಾರಿ ನಿರ್ದೇಶನಾಲಯವು ಮುಂದಿನ ದಿನಗಳಲ್ಲಿ ಈ ಸೆಲೆಬ್ರಿಟಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡು ವಿಚಾರಣೆ ನಡೆಸಲಿದೆ. </p><p>‘ಈ ಪ್ರಕರಣ ಸಂಬಂಧ ಸಮಗ್ರ ತನಿಖೆ ಆರಂಭವಾಗಿದ್ದು, ಈ ಆ್ಯಪ್ಗಳು ಅಕ್ರಮವಾಗಿ ಗಳಿಸಿರುವ ಹಣ ಎಷ್ಟು ಎಂಬುದರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಸೆಲೆಬ್ರಿಟಿಗಳ ಹೇಳಿಕೆ ದಾಖಲಿಸಿದ ಬಳಿಕ ಪ್ರಕರಣದಲ್ಲಿ ಅವರ ಪಾತ್ರವನ್ನು ನಿರ್ಧರಿಸಲಾಗುತ್ತದೆ’ ಎಂದು ಮೂಲಗಳು ಹೇಳಿವೆ.</p>.ತುರ್ತು ಪರಿಸ್ಥಿತಿಯಲ್ಲಿ ಸಂಜಯ್ ಗಾಂಧಿ ಹೀಗೆಲ್ಲಾ ಮಾಡಿದ್ದರು: ಶಶಿ ತರೂರ್ ನೆನಪು.ವಡೋದರಾ ಸೇತುವೆ ಕುಸಿತ ಪ್ರಕರಣ: ಸಾವಿನ ಸಂಖ್ಯೆ 15ಕ್ಕೆ ಏರಿಕೆ; ತನಿಖೆ ಆರಂಭ.Wimbledon: ಜೊಕೊವಿಚ್ ದಾಖಲೆಯ 14ನೇ ಸಲ ಸೆಮಿಫೈನಲ್ ಸಾಧನೆ; ಸಿನ್ನರ್ ಎದುರಾಳಿ.ನರ್ಸ್ ಮರಣದಂಡನೆ ಪ್ರಕರಣ: ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>