ರಾವುತ್, ಅವರ ಪತ್ನಿ ಹಾಗೂ ಸ್ನೇಹಿತ ಶಾಮೀಲಾಗಿದ್ದಾರೆ ಎನ್ನಲಾದ ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಅವರಿಗೆ ಜುಲೈ 20 ಮತ್ತು 27 ರಂದು ವಿಚಾರಣೆಗೆ ಹಾಜರಾಗುವಂತೆ ಎರಡು ಬಾರಿ ಸಮನ್ಸ್ ನೀಡಲಾಗಿತ್ತು. ಇ.ಡಿ ಸೂಚಿಸಿದ ದಿನಾಂಕದಂದು ರಾಜ್ಯಸಭಾ ಸಂಸದರಿಗೆ ಹಾಜರಾಗಲು ಸಾಧ್ಯವಿಲ್ಲ ಎಂದು ರಾವುತ್ ಪರವಾಗಿ ವಕೀಲರು ಲಿಖಿತ ಉತ್ತರದಲ್ಲಿ ತಿಳಿಸಿದ್ದರು. ಇ.ಡಿ ಅಧಿಕಾರಿಗಳನ್ನು ಭೇಟಿಯಾದ ವಕೀಲರು ಈ ವಿಷಯ ತಿಳಿಸಿದ್ದು, ಆಗಸ್ಟ್ ಮೊದಲ ವಾರದ ಬಳಿಕ ಸಮಯ ನೀಡುವಂತೆ ವಿನಂತಿಸಿದ್ದರು.