<p><strong>ನವದೆಹಲಿ:</strong> ಸಂಸತ್ತಿನಲ್ಲಿ ಈಚೆಗೆ ಭಾಷಣದಲ್ಲಿ 'ಚಕ್ರವ್ಯೂಹ'ದ ಹೇಳಿಕೆ ನೀಡಿದ್ದಕ್ಕೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದಿಂದ (ಇ.ಡಿ) ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಆರೋಪಿಸಿದ್ದಾರೆ.</p><p>‘ಇ.ಡಿ ಅಧಿಕಾರಿಗಳು ಶೋಧಕ್ಕೆ ಬಂದಾಗ ಅವರನ್ನು ಸಂತಸದಿಂದ ಸ್ವಾಗತಿಸಲು ಸಿದ್ಧನಾಗಿದ್ದೇನೆ’ ಎಂದೂ ಹೇಳಿದ್ದಾರೆ.</p><p>‘ಸಂಸತ್ತಿನಲ್ಲಿ ಚಕ್ರವ್ಯೂಹವನ್ನು ಪ್ರಸ್ತಾಪಿಸಿ ನಾನು ಮಾಡಿದ ಭಾಷಣ ಕೆಲವರಿಗೆ ಇಷ್ಟವಾಗಿಲ್ಲ. ಆದ್ದರಿಂದ ನನ್ನ ವಿರುದ್ಧ ದಾಳಿಗೆ ಯೋಜನೆ ರೂಪಿಸಲಾಗಿದೆ ಎಂದು ಇ.ಡಿಯಲ್ಲಿರುವ ಕೆಲವರು ಮಾಹಿತಿ ನೀಡಿದ್ದಾರೆ’ ಎಂದು ಶುಕ್ರವಾರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>‘ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ಇ.ಡಿ ಅಧಿಕಾರಿಗಳನ್ನು ಸ್ವಾಗತಿಸಲು ಕಾಯುತ್ತಿದ್ದೇನೆ’ ಎಂದಿದ್ದಾರೆ.</p><p>‘ಕುರುಕ್ಷೇತ್ರದಲ್ಲಿ ಅಭಿಮನ್ಯುವನ್ನು ಮಣಿಸಲು ಕೌರವರು ಚಕ್ರವ್ಯೂಹ ನಿರ್ಮಿಸಿದ ಹಾಗೆ ಬಿಜೆಪಿಯು ದೇಶ<br>ದಲ್ಲಿ ರೈತರು ಮತ್ತು ಯುವಕರ ಸುತ್ತ ಚಕ್ರವ್ಯೂಹ ಹೆಣೆದು, ಭಯದ ವಾತಾವರಣ ನಿರ್ಮಿಸಿದೆ’ ಎಂದು ರಾಹುಲ್ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಹೇಳಿದ್ದರು. </p><p>‘ಕೌರವರು ಚಕ್ರವ್ಯೂಹ ನಿರ್ಮಿಸಿ ಅಭಿಮನ್ಯುವನ್ನು ಕೊಂದರು. 21ನೇ ಶತಮಾನದಲ್ಲಿ ಮತ್ತೊಂದು ಚಕ್ರವ್ಯೂಹ ಸಿದ್ಧಗೊಂಡಿದೆ. ಅದು ಕಮಲದ (ಬಿಜೆಪಿ) ರೂಪದಲ್ಲಿದೆ. ಅಂದು ಅಭಿಮನ್ಯುವಿಗೆ ಮಾಡಿದ್ದನ್ನು ಇಂದು ಯುವಕರು, ಮಹಿಳೆಯರು, ರೈತರ ಮೇಲೆ ಮಾಡಲಾಗುತ್ತಿದೆ’ ಎಂದು ದೂರಿದ್ದರು.</p><p>‘<strong>ಹೊಣೆಗಾರಿಕೆಯಿಂದ ನುಣುಚುವ ಯತ್ನ’</strong></p><p>ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದ್ದು, ವಯನಾಡ್ ಭೂಕುಸಿತ ದುರಂತದ ಬಗ್ಗೆ ತನ್ನನ್ನು ಪ್ರಶ್ನಿಸುವ ಜನರ ಗಮನ ಬೇರೆಡೆ ಸೆಳೆಯಲು ಅವರು ಹೊಸ ನಿರೂಪಣೆಯೊಂದನ್ನು ಸೃಷ್ಟಿಸಿದ್ದಾರೆ ಎಂದು ಹೇಳಿದೆ. </p><p>‘ವಯನಾಡ್ನ ಜನರು ನಿಮ್ಮ ಹೊಣೆಗಾರಿಕೆಯ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ರಾಹುಲ್ಗೆ ಯಾರೋ ಹೇಳಿದ್ದಾರೆ. ಆದ್ದರಿಂದ ಇಂತಹ ಕಪೋಲ ಕಲ್ಪಿತ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.</p><p>ಬಿಜೆಪಿಯ ಮಿತ್ರಪಕ್ಷ ಜೆಡಿಯು ನಾಯಕರಾಗಿರುವ ಕೇಂದ್ರ ಸಚಿವ ಲಲನ್ ಸಿಂಗ್ ಅವರೂ ರಾಹುಲ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ‘ರಾಹುಲ್ ಏನಾದರೂ ತಪ್ಪು ಮಾಡಿರಬಹುದು. ಆದ್ದರಿಂದ ತಮ್ಮ ವಿರುದ್ಧ ಕ್ರಮ ಜರುಗಬಹುದು ಎಂದು ಭಾವಿಸಿದ್ದಾರೆ’ ಎಂದಿದ್ದಾರೆ.</p>.ಆರು ಮಂದಿ ಸೇರಿ ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಿದ್ದಾರೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಸಂಸತ್ತಿನಲ್ಲಿ ಈಚೆಗೆ ಭಾಷಣದಲ್ಲಿ 'ಚಕ್ರವ್ಯೂಹ'ದ ಹೇಳಿಕೆ ನೀಡಿದ್ದಕ್ಕೆ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯದಿಂದ (ಇ.ಡಿ) ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಶುಕ್ರವಾರ ಆರೋಪಿಸಿದ್ದಾರೆ.</p><p>‘ಇ.ಡಿ ಅಧಿಕಾರಿಗಳು ಶೋಧಕ್ಕೆ ಬಂದಾಗ ಅವರನ್ನು ಸಂತಸದಿಂದ ಸ್ವಾಗತಿಸಲು ಸಿದ್ಧನಾಗಿದ್ದೇನೆ’ ಎಂದೂ ಹೇಳಿದ್ದಾರೆ.</p><p>‘ಸಂಸತ್ತಿನಲ್ಲಿ ಚಕ್ರವ್ಯೂಹವನ್ನು ಪ್ರಸ್ತಾಪಿಸಿ ನಾನು ಮಾಡಿದ ಭಾಷಣ ಕೆಲವರಿಗೆ ಇಷ್ಟವಾಗಿಲ್ಲ. ಆದ್ದರಿಂದ ನನ್ನ ವಿರುದ್ಧ ದಾಳಿಗೆ ಯೋಜನೆ ರೂಪಿಸಲಾಗಿದೆ ಎಂದು ಇ.ಡಿಯಲ್ಲಿರುವ ಕೆಲವರು ಮಾಹಿತಿ ನೀಡಿದ್ದಾರೆ’ ಎಂದು ಶುಕ್ರವಾರ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.</p><p>‘ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ಇ.ಡಿ ಅಧಿಕಾರಿಗಳನ್ನು ಸ್ವಾಗತಿಸಲು ಕಾಯುತ್ತಿದ್ದೇನೆ’ ಎಂದಿದ್ದಾರೆ.</p><p>‘ಕುರುಕ್ಷೇತ್ರದಲ್ಲಿ ಅಭಿಮನ್ಯುವನ್ನು ಮಣಿಸಲು ಕೌರವರು ಚಕ್ರವ್ಯೂಹ ನಿರ್ಮಿಸಿದ ಹಾಗೆ ಬಿಜೆಪಿಯು ದೇಶ<br>ದಲ್ಲಿ ರೈತರು ಮತ್ತು ಯುವಕರ ಸುತ್ತ ಚಕ್ರವ್ಯೂಹ ಹೆಣೆದು, ಭಯದ ವಾತಾವರಣ ನಿರ್ಮಿಸಿದೆ’ ಎಂದು ರಾಹುಲ್ ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಹೇಳಿದ್ದರು. </p><p>‘ಕೌರವರು ಚಕ್ರವ್ಯೂಹ ನಿರ್ಮಿಸಿ ಅಭಿಮನ್ಯುವನ್ನು ಕೊಂದರು. 21ನೇ ಶತಮಾನದಲ್ಲಿ ಮತ್ತೊಂದು ಚಕ್ರವ್ಯೂಹ ಸಿದ್ಧಗೊಂಡಿದೆ. ಅದು ಕಮಲದ (ಬಿಜೆಪಿ) ರೂಪದಲ್ಲಿದೆ. ಅಂದು ಅಭಿಮನ್ಯುವಿಗೆ ಮಾಡಿದ್ದನ್ನು ಇಂದು ಯುವಕರು, ಮಹಿಳೆಯರು, ರೈತರ ಮೇಲೆ ಮಾಡಲಾಗುತ್ತಿದೆ’ ಎಂದು ದೂರಿದ್ದರು.</p><p>‘<strong>ಹೊಣೆಗಾರಿಕೆಯಿಂದ ನುಣುಚುವ ಯತ್ನ’</strong></p><p>ರಾಹುಲ್ ಗಾಂಧಿ ಅವರ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದ್ದು, ವಯನಾಡ್ ಭೂಕುಸಿತ ದುರಂತದ ಬಗ್ಗೆ ತನ್ನನ್ನು ಪ್ರಶ್ನಿಸುವ ಜನರ ಗಮನ ಬೇರೆಡೆ ಸೆಳೆಯಲು ಅವರು ಹೊಸ ನಿರೂಪಣೆಯೊಂದನ್ನು ಸೃಷ್ಟಿಸಿದ್ದಾರೆ ಎಂದು ಹೇಳಿದೆ. </p><p>‘ವಯನಾಡ್ನ ಜನರು ನಿಮ್ಮ ಹೊಣೆಗಾರಿಕೆಯ ಬಗ್ಗೆ ಪ್ರಶ್ನಿಸುತ್ತಿದ್ದಾರೆ ಎಂದು ರಾಹುಲ್ಗೆ ಯಾರೋ ಹೇಳಿದ್ದಾರೆ. ಆದ್ದರಿಂದ ಇಂತಹ ಕಪೋಲ ಕಲ್ಪಿತ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ’ ಎಂದು ಬಿಜೆಪಿ ನಾಯಕ ರಾಜೀವ್ ಚಂದ್ರಶೇಖರ್ ತಿರುಗೇಟು ನೀಡಿದ್ದಾರೆ.</p><p>ಬಿಜೆಪಿಯ ಮಿತ್ರಪಕ್ಷ ಜೆಡಿಯು ನಾಯಕರಾಗಿರುವ ಕೇಂದ್ರ ಸಚಿವ ಲಲನ್ ಸಿಂಗ್ ಅವರೂ ರಾಹುಲ್ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ‘ರಾಹುಲ್ ಏನಾದರೂ ತಪ್ಪು ಮಾಡಿರಬಹುದು. ಆದ್ದರಿಂದ ತಮ್ಮ ವಿರುದ್ಧ ಕ್ರಮ ಜರುಗಬಹುದು ಎಂದು ಭಾವಿಸಿದ್ದಾರೆ’ ಎಂದಿದ್ದಾರೆ.</p>.ಆರು ಮಂದಿ ಸೇರಿ ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಿದ್ದಾರೆ: ರಾಹುಲ್ ಗಾಂಧಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>