ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಅಬಕಾರಿ ನೀತಿ ಹಗರಣ: ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಇ.ಡಿ ಸಮನ್ಸ್‌

Published 18 ಡಿಸೆಂಬರ್ 2023, 13:30 IST
Last Updated 18 ಡಿಸೆಂಬರ್ 2023, 13:30 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಅಬಕಾರಿ ನೀತಿಯ ಹಗರಣದ ನಂಟಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಇದೇ 21ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು (ಇ.ಡಿ) ಸೋಮವಾರ ಎರಡನೇ ಸಮನ್ಸ್‌ ಜಾರಿ ಮಾಡಿದೆ. 

ನವೆಂಬರ್‌ 2ರಂದು ವಿಚಾರಣೆಗೆ ಹಾಜರಾಗುವಂತೆ ಇ.ಡಿ ಮೊದಲ ಸಮನ್ಸ್‌ ಜಾರಿ ಮಾಡಿತ್ತು. ಆದರೆ, ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಪರ ಪ್ರಚಾರದಲ್ಲಿ ತೊಡಗಿಕೊಂಡಿದ್ದರಿಂದ ಕೇಜ್ರಿವಾಲ್‌ ವಿಚಾರಣೆಗೆ ಹಾಜರಾಗಿರಲಿಲ್ಲ. ತಮ್ಮ ವಿರುದ್ಧದ ಆರೋಪವನ್ನು ಅಲ್ಲಗಳೆದು, ‘ಇದೊಂದು ರಾಜಕೀಯ ದುರುದ್ದೇಶ ಮತ್ತು ಕಾನೂನಿಗೆ ವಿರುದ್ಧವಾದ ಸಮನ್ಸ್‌. ಇದನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿದ್ದರು. 

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಎಎಪಿ ನಾಯಕರಾದ ಮನೀಷ್‌ ಸಿಸೋಡಿಯಾ ಮತ್ತು ಸಂಜಯ್‌ ಸಿಂಗ್‌ ಅವರನ್ನು ಇ.ಡಿ ಈಗಾಗಲೇ ಬಂಧಿಸಿ, ಜೈಲಿನಲ್ಲಿರಿಸಿದೆ.

ಕೇಜ್ರಿವಾಲ್‌ ಅವರು ಡಿಸೆಂಬರ್‌ 19ರಿಂದ 10 ದಿನಗಳ ವಿಪಶ್ಶನ ಧ್ಯಾನದಲ್ಲಿ ಭಾಗವಹಿಸಲು ರಜೆ ಹಾಕಿದ್ದಾರೆ ಎಂದು ಶನಿವಾರ ತಿಳಿಸಿರುವ ದೆಹಲಿ ಸರ್ಕಾರದ ಅಧಿಕಾರಿಗಳು, ವಿಪಶ್ಶನ ಧ್ಯಾನ ನಡೆಯುವ ಸ್ಥಳವನ್ನು ಬಹಿರಂಪಡಿಸಲಿಲ್ಲ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT