<p><strong>ಕೋಲ್ಕತ್ತ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತ ನಗರದ ಡಿಸಿಪಿ ಶಂತನು ಸಿನ್ಹಾ ಬಿಸ್ವಾಸ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.</p><p>‘ಐದು ಬಾರಿ ಸಮನ್ಸ್ ನೀಡಿದ್ದರೂ ಬಿಸ್ವಾಸ್ ವಿಚಾರಣೆಗೆ ಹಾಜರಾಗಿಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅವರು ವಿದೇಶಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋನ ಪಪ್ಪು ಎಂಬ ವ್ಯಕ್ತಿ ಭಾಗಿಯಾಗಿರುವ ಭೂಕಬಳಿಕೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿ ಬಿಸ್ವಾಸ್ ಅವರ ಕೋಲ್ಕತ್ತದಲ್ಲಿನ ನಿವಾಸದಲ್ಲಿ ಇ.ಡಿ ಶೋಧ ನಡೆಸಿದೆ. </p><p>ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಬಿಸ್ವಾಸ್ ಅವರ ಇಬ್ಬರು ಪುತ್ರರಿಗೂ ಇ.ಡಿ ಸಮನ್ಸ್ ನೀಡಿತ್ತು. ಅವರೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p><p>ಮರಳು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಆರ್ಥಿಕ ಅವ್ಯವಹಾರಗಳ ಆರೋಪದಡಿಯೂ ಬಿಸ್ವಾಸ್ ಅವರಿಗೆ ಸಮನ್ಸ್ ಜಾರಿಯಾಗಿತ್ತು. ಅವರ ಪರವಾಗಿ ವಕೀಲರು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ</strong>: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೋಲ್ಕತ್ತ ನಗರದ ಡಿಸಿಪಿ ಶಂತನು ಸಿನ್ಹಾ ಬಿಸ್ವಾಸ್ ಅವರ ವಿರುದ್ಧ ಜಾರಿ ನಿರ್ದೇಶನಾಲಯವು(ಇ.ಡಿ) ಲುಕ್ಔಟ್ ನೋಟಿಸ್ ಜಾರಿ ಮಾಡಿದೆ.</p><p>‘ಐದು ಬಾರಿ ಸಮನ್ಸ್ ನೀಡಿದ್ದರೂ ಬಿಸ್ವಾಸ್ ವಿಚಾರಣೆಗೆ ಹಾಜರಾಗಿಲ್ಲ. ತನಿಖೆಯಿಂದ ತಪ್ಪಿಸಿಕೊಳ್ಳುವ ಸಲುವಾಗಿ ಅವರು ವಿದೇಶಕ್ಕೆ ಹೋಗುವ ಸಾಧ್ಯತೆ ಇರುವುದರಿಂದ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p><p>ಸೋನ ಪಪ್ಪು ಎಂಬ ವ್ಯಕ್ತಿ ಭಾಗಿಯಾಗಿರುವ ಭೂಕಬಳಿಕೆ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪದ ಕುರಿತು ಇ.ಡಿ ತನಿಖೆ ನಡೆಸುತ್ತಿದೆ.</p><p>ಇದೇ ಪ್ರಕರಣಕ್ಕೆ ಸಂಬಂಧಿಸಿ ಬಿಸ್ವಾಸ್ ಅವರ ಕೋಲ್ಕತ್ತದಲ್ಲಿನ ನಿವಾಸದಲ್ಲಿ ಇ.ಡಿ ಶೋಧ ನಡೆಸಿದೆ. </p><p>ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಬಿಸ್ವಾಸ್ ಅವರ ಇಬ್ಬರು ಪುತ್ರರಿಗೂ ಇ.ಡಿ ಸಮನ್ಸ್ ನೀಡಿತ್ತು. ಅವರೂ ವಿಚಾರಣೆಗೆ ಹಾಜರಾಗಿಲ್ಲ ಎಂದು ಮೂಲಗಳು ತಿಳಿಸಿವೆ.</p><p>ಮರಳು ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದ ಆರ್ಥಿಕ ಅವ್ಯವಹಾರಗಳ ಆರೋಪದಡಿಯೂ ಬಿಸ್ವಾಸ್ ಅವರಿಗೆ ಸಮನ್ಸ್ ಜಾರಿಯಾಗಿತ್ತು. ಅವರ ಪರವಾಗಿ ವಕೀಲರು ಹಾಜರಾಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>