<p><strong>ಜೈಪುರ:</strong> ರಾಜಸ್ಥಾನದಲ್ಲಿ 'ಜಲ ಜೀವನ್ ಮಿಷನ್' (ಜೆಜೆಎಂ) ಯೋಜನೆಯಡಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ. </p><p>ಮಧ್ಯವರ್ತಿ ಸಂಜಯ್ ಬಡಾಯ ಎಂಬವರನ್ನು ಬಂಧಿಸಿರುವ ಇ.ಡಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. </p><p>ಇದರೊಂದಿಗೆ ರಾಜಸ್ಥಾನ ಜಲ ಜೀವನ್ ಮಿಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. </p><p>ಕೇಂದ್ರ ತನಿಖಾ ಸಂಸ್ಥೆ ಇ.ಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶ್ರೀ ಗಣಪತಿ ಟ್ಯೂಬ್ವೆಲ್ ಕಂಪನಿಯ ಮಾಲಿಕ ಮಹೇಶ್ ಮಿತ್ತಲ್, ಶ್ರೀ ಶ್ಯಾಮ್ ಟ್ಯೂಬೆವೆಲ್ ಕಂಪನಿಯ ಮಾಲೀಕ ಪದಮ್ ಚಂದ್ ಜೈನ್ ಮತ್ತು ಪಿಯೂಷ್ ಜೈನ್ ಎಂಬವರನ್ನು ಬಂಧಿಸಿದೆ. </p><p>ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್ಐಆರ್ ದಾಖಲಿಸಿದೆ. ಇದರ ಬೆನ್ನಲ್ಲೇ ವಿವಿಧೆಡೆ ದಾಳಿ ನಡೆಸಿರುವ ಇ.ಡಿ. ಈವರೆಗೆ ₹11.03 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. </p><p>ರಾಜಸ್ಥಾನ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ರಾಜಸ್ಥಾನದ ಮಾಜಿ ಸಚಿವ ಮಹೇಶ್ ಜೋಶಿ ಮತ್ತು ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೋಧ್ ಅಗರವಾಲ್ ಅವರ ನಿವಾಸ ಸೇರಿದಂತೆ ಜೈಪುರ ಹಾಗೂ ದೌಸಾದಲ್ಲಿ ಇ.ಡಿ ವ್ಯಾಪಕ ಶೋಧ ನಡೆಸಿತ್ತು. </p>.ಜಲ್ ಜೀವನ್ ಮಿಷನ್: ₹ 415 ಕೋಟಿಗೆ ಪ್ರಸ್ತಾವ.ರಾಜಸ್ಥಾನ | ಔಷಧ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 4 ಸಾವು, 10 ಮಂದಿಗೆ ಗಾಯ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ:</strong> ರಾಜಸ್ಥಾನದಲ್ಲಿ 'ಜಲ ಜೀವನ್ ಮಿಷನ್' (ಜೆಜೆಎಂ) ಯೋಜನೆಯಡಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯವರ್ತಿಯನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಬಂಧಿಸಿದ್ದಾರೆ. </p><p>ಮಧ್ಯವರ್ತಿ ಸಂಜಯ್ ಬಡಾಯ ಎಂಬವರನ್ನು ಬಂಧಿಸಿರುವ ಇ.ಡಿ ಅಧಿಕಾರಿಗಳು ತೀವ್ರ ವಿಚಾರಣೆಗೊಳಪಡಿಸಿದ್ದಾರೆ. </p><p>ಇದರೊಂದಿಗೆ ರಾಜಸ್ಥಾನ ಜಲ ಜೀವನ್ ಮಿಷನ್ ಅಕ್ರಮಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. </p><p>ಕೇಂದ್ರ ತನಿಖಾ ಸಂಸ್ಥೆ ಇ.ಡಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶ್ರೀ ಗಣಪತಿ ಟ್ಯೂಬ್ವೆಲ್ ಕಂಪನಿಯ ಮಾಲಿಕ ಮಹೇಶ್ ಮಿತ್ತಲ್, ಶ್ರೀ ಶ್ಯಾಮ್ ಟ್ಯೂಬೆವೆಲ್ ಕಂಪನಿಯ ಮಾಲೀಕ ಪದಮ್ ಚಂದ್ ಜೈನ್ ಮತ್ತು ಪಿಯೂಷ್ ಜೈನ್ ಎಂಬವರನ್ನು ಬಂಧಿಸಿದೆ. </p><p>ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಸ್ಥಾನದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಎಫ್ಐಆರ್ ದಾಖಲಿಸಿದೆ. ಇದರ ಬೆನ್ನಲ್ಲೇ ವಿವಿಧೆಡೆ ದಾಳಿ ನಡೆಸಿರುವ ಇ.ಡಿ. ಈವರೆಗೆ ₹11.03 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. </p><p>ರಾಜಸ್ಥಾನ ಜಲ ಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಭಾರಿ ಅವ್ಯವಹಾರ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ರಾಜಸ್ಥಾನದ ಮಾಜಿ ಸಚಿವ ಮಹೇಶ್ ಜೋಶಿ ಮತ್ತು ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸುಬೋಧ್ ಅಗರವಾಲ್ ಅವರ ನಿವಾಸ ಸೇರಿದಂತೆ ಜೈಪುರ ಹಾಗೂ ದೌಸಾದಲ್ಲಿ ಇ.ಡಿ ವ್ಯಾಪಕ ಶೋಧ ನಡೆಸಿತ್ತು. </p>.ಜಲ್ ಜೀವನ್ ಮಿಷನ್: ₹ 415 ಕೋಟಿಗೆ ಪ್ರಸ್ತಾವ.ರಾಜಸ್ಥಾನ | ಔಷಧ ಕಾರ್ಖಾನೆಯಲ್ಲಿ ಬೆಂಕಿ ಅನಾಹುತ: 4 ಸಾವು, 10 ಮಂದಿಗೆ ಗಾಯ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>